Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಇಲ್ಲಿನ ಪುರಸಭೆ ಮತ್ತು ಹಲವು ಸಂಘ ಸಂಸ್ಥೆಗಳ ವತಿಯಿಂದ ಅಳವಡಿಸಲಾಗಿರುವ ಸಂಚಾರಿ ಫಲಕಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಅನಾವರಣಗೊಳಿಸಿದರು.
ಈ ಸಮಾರಂಭದಲ್ಲಿ ಪುರಸಭಾಧ್ಯಕ್ಷ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರಾದ ಪಿ.ಕೆ. ಥೋಮಸ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ., ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಸಂಚಾರಿ ಫಲಕಗಳು ಸಾರ್ವಜನಿಕರಿಗೆ ಉತ್ತಮ ದಾರಿದೀಪದಂತೆ ಕಾರ್ಯನಿರ್ವಹಿಸುವುದಕ್ಕಾಗಿ ಹಾಗೂ ಸಂಚಾರ ಸುಗಮಗೊಳಿಸುವ ದೃಷ್ಟಿಯಿಂದ ಅಳವಡಿಸಲಾಗಿದ್ದು, ಈ ಪ್ರಯತ್ನವನ್ನು ಸಾರ್ವಜನಿಕರು ಹರ್ಷದಿಂದ ಸ್ವಾಗತಿಸಿದ್ದಾರೆ.
ಸಂಘ ಸಂಸ್ಥೆಗಳ ಸಹಕಾರದಿಂದ ಪ್ರಾರಂಭವಾದ ಈ ಯೋಜನೆಯು ನಗರದಲ್ಲಿ ಪೌರ ಪ್ರಜ್ಞೆಯನ್ನು ಹೆಚ್ಚಿಸಲು ಹಾಗೂ ವಾಹನ ಸವಾರರಿಗೆ ಸುಸಜ್ಜಿತ ದಾರಿ ಸೂಚನೆ ನೀಡಲು ಸಹಾಯವಾಗಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ADVRTISEMENT



Leave a Reply