



ಮೂಡುಬಿದಿರೆ: ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೩೦ನೇ ವಿರಾಸತ್’ನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ರಾತ್ರಿ ತೆರೆ ಬಿತ್ತು.ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು.ಇದಕ್ಕೂ ಮೊದಲು ಸಣ್ಣ ರಥದಲ್ಲಿ ಗಣಪತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ […]

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ೭೪ ನೇ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಂಡಿದ್ದು , ಕರ್ನಾಟಕವು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಪ್ರದರ್ಶಿಸಿ, ಹಲವಾರು ಉನ್ನತ ಸ್ಥಾನಗಳನ್ನು ಪಡೆದುಕೊಂಡಿದ್ದು, ಮೊದಲ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸಂಸ್ಥೆಯು ಸೇವೆಯನ್ನು ವಿಭಿನ್ನ ರೀತಿಯಲ್ಲಿ ಮಾಡುತ್ತಿರುವವರಿಗೆ ರಾಷ್ಟ್ರೀಯ ಸಂಸ್ಥೆಯು ಕೆಲವು ಪದಕಗಳನ್ನು ನೀಡಿ ಗೌರವಿಸುತ್ತಾರೆ. ಅದರಲ್ಲಿ ೨೦೨೩ ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ಕೊಡ ಮಾಡುವ ಮೇಸೆಂಜರ್ ಆಫ್ ಪೀಸ್ […]

ಮೂಡುಬಿದಿರೆ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧುರ್ಯ.ಶ್ರೀ ರಾಗದ ಮೂಲಕ ಕಛೇರಿ ಆರಂಭಿಸಿದ ಅವರು ಮುರಲೀ ಸ್ತುತಿಸುತ್ತಾ ‘ಆನಂದ ದೇ ಮುಖ ಚಂದ್ರ ಐ ಸೇ ಚಾಂದನಿ ಸಾಂದ್ರ…’ಬಾದಲ್ ಆಯೇ ನಭಾ ಮೇ…ಯಾದ’ ಸಂಗಶ್ರೋತ್ರವಿನ ಯೋಚನಾ ಲಹರಿಗೆ ತೆರೆದುಕೊಳ್ಳುವ ಪುರಾತನ ಶ್ರೀ ರಾಗ ಹಾಡಿದ ಅವರು, ‘ ಗಾಯನ ಕೇಳುಗರಿಗೆ ಸುಲಲಿತ ಹಾಗೂ ಇಂಪಾಗಿರಬೇಕು’ ಎಂದು ಕೇಳುವುದನ್ನೂ […]

ಪಂಡಿತ್ ಎಂ. ವೆಂಕಟೇಶ್ ಕುಮಾರ್ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ ಗವಾಯಿಗಳಿಗೆ ಪ್ರಶಸ್ತಿ ಅರ್ಪಿಸಿದ ಭಕ್ತಿ ಸ್ವರ ಮಾಂತ್ರಿಕ (ಮೂಡುಬಿದಿರೆ): `ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು. ಇಲ್ಲಿನ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ […]

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್ನ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ನೋಡುಗರ ಕಣ್ಮಣ ಸೆಳೆಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತ ತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳೂ ಮಾತ್ರವಲ್ಲ, ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾವರ್ಯ ಸ್ವಾಮೀಜಿ, […]

ಮೂಡುಬಿದಿರೆ: ವಿರಾಸತ್ ಎರಡು ಜಿಲ್ಲೆಗಳ ಅಭೂತಪೂರ್ವ ಕಾರ್ಯಕ್ರಮ. ಸಾಂಸ್ಕೃತಿಕತೆ ಮತ್ತು ಸಾಹಿತ್ಯ ಎರಡು ಜತೆ ಜತೆಯಾಗಿ ನಡೆಯುತ್ತಿರುವ ಕಾರ್ಯಕ್ರಮವೇ ‘ವಿರಾಸತ್’. ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಆಳ್ವಾಸ್ ವಿರಾಸತ್ ನ ವೈಭವವನ್ನು ವರ್ಣಿಸಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಇಂದಿನಿಂದ ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೩೦ನೇ ವರ್ಷದ ‘ಅಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಮಂಗಳವಾರ ಸಂಜೆ ಸಭಾ ಕಾರ್ಯಕ್ರಮ […]

ಮೂಡುಬಿದಿರೆ): ಕರಾವಳಿಯ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಯುವಜನತೆ ಕೃಷಿ ವಿಮುಖರಾಗುತ್ತಿದ್ದು, ಮಣ್ಣಿನೆಡೆಗೆ ಅವರನ್ನು ಸೆಳೆಯುವ ಇಂತಹ ಕಾರ್ಯಕ್ರಮಗಳು ಆದರ್ಶ ಮತ್ತು ಅನುಕರಣೀಯ’ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್ ಹೇಳಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿ.೧೦ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೩೦ನೇ ವರ್ಷದ ಅಳ್ವಾಸ್ ವಿರಾಸತ್’ ಅಂಗವಾಗಿ ಏರ್ಪಾಡಿಸಲಾದ ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, […]

ಮೂಡುಬಿದಿರೆ: ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಉತ್ಸವವು ವೈಶಿಷ್ಟ್ಯಪೂರ್ಣ ಮೇಳಗಳ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಾಳೆಸಂಜೆ ೫.೩೦ರಿಂದ ೬.೩೦ರ ವರೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ […]

ಮಂಗಳೂರು: ಮನುಷ್ಯನ ಅನೇಕ ದುರಾಸೆಯ ಫಲವೇ ಹವಾಮಾನ ವೈಪರೀತ್ಯಕ್ಕೆ ಮೂಲ ಕಾರಣ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿನ ಮುಂದುವರಿದ ಅಧ್ಯಯನಗಳ ರಾಷ್ಟ್ರೀಯ ಸಂಸ್ಥೆ (ಎನ್ಐಎಎಸ್)ಯ ಇಸ್ರೋ ಮುಖ್ಯ ಪ್ರಾಧ್ಯಾಪಕ ಡಾ. ಪಿ. ಜಿ. ದಿವಾಕರ್ ಅಭಿಪ್ರಾಯಪಟ್ಟರು.ಅವರು ಬುಧವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಎನ್ಐಎಎಸ್ ಜಂಟಿ ಆಶ್ರಯದಲ್ಲಿ ಉಳ್ಳಾಲದ ಬಿಎಂ ಶಾಲೆಯಲ್ಲಿ ಹಮ್ಮಿಕೊಂಡ ‘ವಿದ್ಯಾರ್ಥಿ- ವಿಜ್ಞಾನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯು ತೀವ್ರ ಸಮಸ್ಯೆಯಾಗಿ ಬೆಳೆಯುತ್ತಿದೆ. ಅದರಲ್ಲೂ ,ಕರಾವಳಿ ಭಾಗದ ಜನರಿಗೆ ವಾತಾವರಣದಲ್ಲಾಗುವ […]

ಮೂಡುಬಿದಿರೆ: ಮಂಗಳೂರಿನ ಸಸಿಹಿತ್ಲುವಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧಿಸಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.ಜನಪದ ನೃತ್ಯ (ಡೊಳ್ಳು- ಪ್ರಥಮ), ಜನಪದ ನೃತ್ಯ (ಏಕವ್ಯಕ್ತಿ) ಪ್ರಥಮ, ಕತೆ ಬರೆಯುವುದು- ಪ್ರಥಮ ಮತ್ತು ದ್ವಿತೀಯ, ಭಾಷಣ ಕಲೆ -ಪ್ರಥಮ, ಕವಿತೆ ಬರೆಯುವುದು -ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿದ್ದಾರೆ.ಪ್ರಥಮ ಬಹುಮಾನ ವಿಜೇತರು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ […]