Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ […]

ಮೂಡುಬಿದಿರೆ: ದೇಶಪ್ರೇಮ ಎಂದಾಕ್ಷಣ ಸೇನೆ ಸೇರುವುದು ಮಾತ್ರವಲ್ಲ. ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತೀ ಕರ್ಯವು ದೇಶಪ್ರೇಮವೆನಿಸುತ್ತದೆ ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ನುಡಿದರು. ಅವರು ಶುಕ್ರವಾರ ಶಿವರಾಮ ಕಾರಂತರ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ನೇ ವರ್ಷದ ಚಟುವಟಿಕೆಗಳು ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.ಭಾರತದ ಸ್ವಾತಂತ್ರ್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ಧಗಳಲ್ಲೂ ನಮ್ಮ ವಿರುದ್ಧ ಗೆಲ್ಲಲಾಗಲಿಲ್ಲ. ಸೈನಿಕರ ಸಾವು […]

ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ಜುಲೈ ೨೬ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು ೧೧ ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ ಹಿರಿಮೆಗೆ ಆಳ್ವಾಸ್ ಪಾತ್ರವಾಗುತ್ತಿದೆ. ಈ ಬಾರಿಯ ಒಲಿಂಪಿಕ್ಸ್ ಗೇಮ್ನಲ್ಲಿ ೪೪೦೦ ರಿಲೇಯ […]

ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು.ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು ಅನೇಕ ಸಂಕ್ರಮಣ ಕಾಲಘಟ್ಟವನ್ನು ದಾಟಿ ಬಂದಿದ್ದೆವೆ. ಪ್ರಸ್ತುತ ಸಮಾಜ ‘ನಿರ್ಧರಿತ ಆರ್ಥಿಕತೆ’ ಯಿಂದ ಬದಲಾಗಿ ‘ಆರ್ಥಿಕತೆ ನಿರ್ಧರಿತ ಸಮಾಜ’ವಾಗಿ ಬದಲಾಗುತ್ತಿದೆ. ಇದರಿಂದಾಗಿ, ಪ್ರತಿಯೊಂದು ವಿಷಯವು ಹಣಕಾಸಿನ ಆಧಾರದ ಮೇಲೆ ನಿರ್ಧರಿತವಾಗುತ್ತಿದೆ. ಹಿಂದಿನ […]

ಮೂಡುಬಿದಿರೆ: ೨೦೨೪ ಮೇ ಯಲ್ಲಿ ನಡೆದ ಸಿ.ಎ. ಅಂತಿಮಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ಲೋಬೋ, ಪಲ್ಲವಿ ಹೆಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ,ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್,ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್,ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ. ,ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ […]

ಮೂಡುಬಿದಿರೆ: ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊAದಿಗೆ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಆಳ್ವಾಸ್ ಈ ಬಾರಿಯೂ ಉನ್ನತ ಸಾಧನೆ ಮಾಡಿದೆ.ನಿಸರ್ಗ ಎಸ್. 21ನೇ ರ್ಯಾಂಕ್, ಮೃಣಾಲಿನಿ ಎಸ್. ಪೂಜಾರಿ 29ನೇ ರ್ಯಾಂಕ್, ಪಾಹಿಮಾ ಹೇಮಚಂದ್ರ 38ನೇ ರ್ಯಾಂಕ್, ಎಮ್. ರಾಮ್ಪ್ರಸಾದ್ ಮಲ್ಯ 266ನೇ ರ್ಯಾಂಕ್, ಎಮ್.ವಿ. ಚಿರಾಂತ್ 290ನೇ ರ್ಯಾಂಕ್, ಆಕಾಶ್ ಬಸವರಾಜ್ ಬಚಲಾಪುರ 298ನೇ ರ್ಯಾಂಕ್, ಜೈ ಅಶೋಕ್ ರಾಚನ್ನವರ್ 402ನೇ ರ್ಯಾಂಕ್ನೊAದಿಗೆ ತೇರ್ಗಡೆ […]

ವಿದ್ಯಾಗಿರಿ (ಮೂಡುಬಿದಿರೆ): ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]

ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, ೨೦೩೪-೩೫ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ವೈಶಿಷ್ಟö್ಯಗಳು:‘ಆಳ್ವಾಸ್ ಇಂಜಿನಿಯರಿAಗ್ ಕಾಲೇಜು ನ್ಯಾಕ್ನ ಮೊದಲ ಸೈಕಲ್ನಲ್ಲೇ (ಓಂAಅ) ಂ+ ಶ್ರೇಣಿಯನ್ನು […]

ವಿದ್ಯಾಗಿರಿ: ಸ್ನಾತಕೋತ್ತರ ವಾಣಿಜ್ಯ ವಿದ್ಯಾರ್ಥಿಗಳು ವಾಣಿಜ್ಯದ ಎಲ್ಲಾ ಆಯಾಮಗಳಲ್ಲಿ ನಿಪುಣತೆ ಹೊಂದುವುದು ಅವಶ್ಯಕ ಎಂದು ಲೆಕ್ಕಪರಿಶೋಧಕ ಎಂ. ಉಮೇಶ್ ರಾವ್ ಹೇಳಿದರು.ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಸ್ನಾತಕೋತ್ತರ ವಿಚಾರಸಂಕಿರಣ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.ಜಗ್ಗತ್ತು ಒಂದು ರಣರಂಗ. ಇದ್ದನ್ನು ಎದುರಿಸುವ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಆಗಿದ್ದಾಗಲೇ ಸಿದ್ಧ ಪಡಿಸಿಕೊಳ್ಳಬೇಕು. ತಂತ್ರಜ್ಞಾನದ ಹೊಸ ಆವಿಷ್ಕಾರ ಕೃತಕ ಬುದ್ಧಿಮತ್ತೆ (ಏಐ) ವಾಣಿಜ್ಯ ವಿದ್ಯಾರ್ಥಿಗಳಿಗೆ ಸವಾಲಾಗಿ ರೂಪುಗೊಂಡಿದ್ದು, ನಮ್ಮ ಬುದ್ಧಿಶಕ್ತಿಯನ್ನು ವೃದ್ಧಿಸಿಕೊಂಡರೆ […]

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯಮಟ್ಟ) ಕಬಡ್ಡಿ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಚಾಂಪಿಯನ್ ಪಟ್ಟವನ್ನು ಗಳಿಸಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ನಡೆದ ಪುರುಷರ ಫೈನಲ್ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ […]