
ಮೂಡುಬಿದಿರೆ: ಇಲ್ಲಿನ ಪಡುಮಾನಾ೯ಡು ಗ್ರಾ. ಪಂಚಾಯತ್ ವ್ಯಾಪ್ತಿಯ ಕಾಯರಕಟ್ಟ ಸರಕಾರಿ ಜಾಗದಲ್ಲಿ ಉರುಳಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಶನಿವಾರ ನಡೆದಿದೆ. ಚಿರತೆಯ ಬಾಲಕ್ಕೆ ತಂತಿ ಕಟ್ಟಿದ ಗೂಟದ ಸಮೇತ ಬಂದು ಮರಕ್ಕೆ ಹತ್ತುವ ಸಮಯದಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿತ್ತು. ಈ ಬಗ್ಗೆ ನಿಖರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ರಕ್ಷಿಸಿ ಕಛೇರಿಗೆ ತಂದು ಚುಚ್ಚುಮದ್ದು ನೀಡಿದ್ದಾರೆ. ಸಂಜೆ ವೇಳೆಗೆ ಅರಣ್ಯ ಪ್ರದೇಶಕ್ಕೆ ಬಿಡಲಿದ್ದಾರೆ.ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಅರವಳಿಕೆ ತಜ್ಞರಾದ […]