Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಕೇರಳದ ವಯನಾಡಿನಲ್ಲಿ ನಡೆದ ದುರಂತದಲ್ಲಿ ತುರ್ತು ಕಾರ್ಯಾಚರಣೆ ಪೂರೈಸಿ ಹಿಂದಿರುಗಿದ ಭಾರತೀಯ ಮಿಲಿಟರಿ ಕಮಾಂಡರ್ಗಳಿಗೆ, ಮೂಡುಬಿದಿರೆಯ ಮೆಸ್ಕಾಂ ಅಧಿಕಾರಿಗಳು ಮತ್ತು ವಿದ್ಯುತ್ ಗುತ್ತಿಗೆದಾರರು ಶುಕ್ರವಾರ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್, ತಾಂತ್ರಿಕ ವಿಭಾಗದ ಸಹಾಯಕ ಇಂಜಿನಿಯರ್ ನಿತೇಶ್, ಕಿರಿಯ ಇಂಜಿನಿಯರ್ ಮಮತಾ, ಕಿರಿಯ ಇಂಜಿನಿಯರ್ ಕೃಷ್ಣರಾಜ, ಪವರ್ ಮ್ಯಾನ್ ಪಪ್ಪುಕುಮಾರ, ಮಾಪಕ ಓದುಗ ವಿಜಯ, ಗುತ್ತಿಗೆದಾರರಾದ ಸತ್ಯಪ್ರಕಾಶ್ ಹೆಗ್ಡೆ, ಅನಿಶ್ ಡಿಸೋಜ, ವಿಶ್ವಾಲ್ ತೋಡಾರ್, ಶಶಿಧರ್ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ (ಪಿಯು) ನಾಳೆ ಆಗಸ್ಟ್ 1ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ […]

ದಕ್ಷಿಣ ಕನ್ನಡ: ಭಾರಿ ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ (12 ನೇ ತರಗತಿವರೆಗೆ) ಜುಲೈ 31ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಾಕೃತಿಕ ಆಪತ್ತನ್ನು ತಡೆಯಲು ಸರ್ಕಾರದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ, ಈ ಅವಧಿಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಎಚ್ಚರಿಕೆ ವಹಿಸುವಂತೆ ಕೇಳಿಕೊಳ್ಳಲಾಗಿದೆ. ಸರ್ಕಾರದ […]

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ೨೦೨೪-೨೫ ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳಾ ಉದ್ಘಾಟನಾ ಸಮಾರಂಭದಲ್ಲಿ ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ.ಸ್ವಸ್ತಿಶ್ರೀ ಲಕ್ಷ್ಮೀ ಸೀನ ಭಟ್ಟಾರಕ ಪಟ್ಟಾಚರ್ಯರ್ಯ ಮಹಾಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನವನ್ನಿತ್ತರು. ಬಳಿಕ ಇದೇ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಕಂಬಳ, ಕ್ರೀಡೆ ಹಾಗೂ ಇನ್ನಿತರ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ‘ಬೆದ್ರ ಫ್ರೆಂಡ್ಸ್’ ಇದರ ರುವಾರಿಯಾಗಿ ಅನೇಕ ಸೇವಾಕಾರ್ಯಕ್ರಮಗಳನ್ನು ಕೈಗೊಂಡ ಸ್ನೇಹ ಜೀವಿ, ಸರಳಜೀವಿ ಹಾಗೂ ಮೂಡಬಿದ್ರೆಗೆ […]

ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ […]

ಮೂಡುಬಿದಿರೆ: ದೇಶಪ್ರೇಮ ಎಂದಾಕ್ಷಣ ಸೇನೆ ಸೇರುವುದು ಮಾತ್ರವಲ್ಲ. ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತೀ ಕರ್ಯವು ದೇಶಪ್ರೇಮವೆನಿಸುತ್ತದೆ ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ನುಡಿದರು. ಅವರು ಶುಕ್ರವಾರ ಶಿವರಾಮ ಕಾರಂತರ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ನೇ ವರ್ಷದ ಚಟುವಟಿಕೆಗಳು ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.ಭಾರತದ ಸ್ವಾತಂತ್ರ್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ಧಗಳಲ್ಲೂ ನಮ್ಮ ವಿರುದ್ಧ ಗೆಲ್ಲಲಾಗಲಿಲ್ಲ. ಸೈನಿಕರ ಸಾವು […]

ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ಜುಲೈ ೨೬ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು ೧೧ ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ ಹಿರಿಮೆಗೆ ಆಳ್ವಾಸ್ ಪಾತ್ರವಾಗುತ್ತಿದೆ. ಈ ಬಾರಿಯ ಒಲಿಂಪಿಕ್ಸ್ ಗೇಮ್ನಲ್ಲಿ ೪೪೦೦ ರಿಲೇಯ […]

ಮೂಡುಬಿದರೆ: ಅಲಂಕಾರ ಪಂಡಿತ್ ರೆಸಾರ್ಟ್ ಸಂಸ್ಥೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ಬೀಗಮುದ್ರೆ ಜಡಿದಿದೆ ಸುಮಾರು 14 ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಈ ಬೀಗ ಮುದ್ರೆ ಹಾಕಲಾಗಿದೆ ಬ್ಯಾಂಕಿನ ಅಧಿಕಾರಿಗಳು ಕಾನೂನು ರೀತಿಯಲ್ಲಿ ಹೋರಾಟ ಮಾಡಿದ್ದು ಕಾನೂನು ರೀತಿಯಲ್ಲಿ ಪ್ರಕ್ರಿಯೆಗಳು ನಡೆದಿವೆ .ಬುಧವಾರ ಮೂಡಬಿದ್ರೆ ಠಾಣಾಧಿಕಾರಿಗಳ ಸಹಿತ ಬ್ಯಾಂಕ್ ಸಿಬ್ಬಂದಿಗಳು ಅಧಿಕಾರಿಗಳು ನ್ಯಾಯಾಲಯದ ಅಧಿಕಾರಿಗಳ ಸಮಕ್ಷಮ ಪ್ರಕ್ರಿಯೆ ನಡೆಸಲಾಯಿತು

ಮೂಡುಬಿದಿರೆ: ಉಡುಪಿ-ಕಾಸರಗೋಡು ನಡುವೆ ಹಾದು ಹೋಗುವ 400 ಕೆವಿ ವಿದ್ಯುತ್ ಲೈನ್ ಅಳವಡಿಕೆ ವಿರೋಧಿಸಿ ಕಂಪೆನಿಯವರ ದುರ್ವರ್ತನೆ ಖಂಡಿಸಿ ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿಯಿಂದ ಜು.30ರಂದು ಬೆಳಿಗ್ಗೆ 10ಕ್ಕೆ ಮಿಜಾರು ಗೋಪಾಲಕೃಷ್ಣ ದೇವಸ್ಥಾನ ಬಳಿಯ ಬೈತರಿಯಲ್ಲಿ ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ತಿಳಿಸಿದ್ದಾರೆ. ಅವರು ಬುಧವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈ ಪ್ರತಿಭಟನೆಯಲ್ಲಿ ಮಿಜಾರು, […]

ಕೇಂದ್ರ ಬಜೆಟ್ 2024 ಮುಖ್ಯಾಂಶಗಳು ಈ ಬಜೆಟ್ ಘೋಷಣೆಗಳು ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಸಮೃದ್ಧಿಗೆ ಪ್ರಮುಖ ಹಂತವಾಗಿವೆ.