



ನವದೆಹಲಿ, ಜು. 23: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು, ಈ ಬಾರಿಯ ಬಜೆಟ್ನಲ್ಲಿ 3 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಘೋಷಿಸಲಾಗಿದೆ. ಮಹಿಳೆಯರು ಉದ್ಯೋಗದಲ್ಲಿ ಹೆಚ್ಚು ಭಾಗವಹಿಸಲೆಂದು, ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಬಜೆಟ್ನಲ್ಲಿ ಹೆಣ್ಣುಮಕ್ಕಳಿಗಾಗಿ ವಿಶೇಷ ಯೋಜನೆಗಳನ್ನು ತಂದು, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ಮಹಿಳೆಯರು […]

ದಕ್ಷಿಣ ಕನ್ನಡ (ಜು. 16): ದಕ್ಷಿಣ ಕನ್ನಡ ಉಪ ಆಯುಕ್ತ (DC) ಮುಲ್ಲಲ್ ಮುಹಿಲನ್ ಅವರು ಮಂಗಳವಾರ, ಜುಲೈ 16 ರಂದು ನಂತೂರ್ ಮತ್ತು KPT ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಅಲ್ಲಿನ ರಸ್ತೆಗಳ ಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಗಳು ದುಸ್ಥಿತಿಯಲ್ಲಿದ್ದು, ಅನೇಕ ಗುಂಡಿಗಳು ಇದ್ದುದರಿಂದ ವಾಹನಚಾಲನೆ ಅಪಾಯಕಾರಿಯಾಗಿ, ವಾಹನ ದಟ್ಟಣೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳನ್ನು ಸೂಚಿಸಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಕೂಡ ಜಾರಿಗೆ ಇರುತ್ತದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, […]

ಅಬೂಬಕ್ಕರ್ ಮುಸ್ಲಿಯಾರ್ ಅವರ ಅನುಸ್ಮರಣೆ, ಕುರ್ ಆನ್, ತಹೀಲ್ ಸಮರ್ಪಣೆ ಕಾರ್ಯಕ್ರಮವು ಮೂಡುಬಿದಿರೆ ಬದ್ರಿಯಾ ಟೌನ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರ ಜುಮ್ಮಾ ನಮಾಝ್ ಬಳಿಕ ನಡೆಯಿತು. ಮಸೀದಿಯ ಖತೀಬರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬೂಬಕ್ಕರ್ ಹಾಜಿ ಅವರು ಈ ಮಸೀದಿಯಲ್ಲಿ ಸುಮಾರು ಎರಡು ದಶಕಗಳ ಕಾಲ ಖತೀಬರಾಗಿ,ಬಳಿಕ ಸುತ್ತಮುತ್ತಲ ಮಸೀದಿಗಳ ಖಾಝಿಯಾಗಿ ಸಲ್ಲಿಸಿದ ದೀನೀ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಮಸೀದಿ ಕಮಿಟಿಯ ಅಧ್ಯಕ್ಷರಾದ ಅಬ್ದುರ್ರಹ್ಮಾನ್ (ಅಬ್ಬಾಕ), ಉಪಾಧ್ಯಕ್ಷ ಖಾದರ್ ಜ್ಯೋತಿನಗರ, […]

ಕೇಮಾರು : ಜುಲೈ 28ರಂದು ಜರಗಲಿರುವ ಕೆಸರುಡೊಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. ಯುವ ಉತ್ಸಾಹಿ ಬಳಗ (ರಿ.) ನೇತೃತ್ವದಲ್ಲಿ ಯುವಸಂಗಮ ಕಾಂತಾವರ (ರಿ.) ಇದರ ಸಹಭಾಗಿತ್ವದಲ್ಲಿ 28.7.2024ನೇ ಅದಿತ್ಯವಾರದಂದು ಕೇಮಾರು ಹಕ್ಕೇರಿ ಬಾಕಿಮಾರು ಗದ್ದೆಯಲ್ಲಿ ಜರಗುವಕೆಸರುಡೊಂಜಿ ದಿನ 2024 ಇದರ ಆಮಂತ್ರಣ ಪತ್ರಿಕೆಯನ್ನು ಜೂ 30ರಂದು ಶ್ರೀ ಕ್ಷೇತ್ರ ಕೇಮಾರುನಲ್ಲಿ ಶ್ರೀ ಸಾಂದಿಪನಿ ಸಾಧನಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದಿವ್ಯಹಸ್ತದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವ ಉತ್ಸಾಹಿ ಬಳಗ (ರಿ.) ಕೇಮಾರು […]

ಇರುವೈಲು ಕೋರೆಬಳಿ ಉಲಾಯಿ ಪಿದಾಯಿ ಆಟವಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡವು ಮೂವರನ್ನು ಬಂಧಿಸಿದ್ದಾರೆ. ಇತರ ಕೆಲವು ಮಂದಿ ಪರಾರಿಯಾಗಿದ್ದಾರೆ.ಅಕ್ಬರ್ ,ಗಣೇಶ್ ಹಾಗೂ ಅರುಣ್ ಎಂಬವರು ಬಂಧಿತರಾಗಿದ್ದು ಇತರ ಕೆಲವರು ಪರಾರಿಯಾಗಿದ್ದಾರೆ.ಆರೋಪಿಗಳಿಂದ ಮೂರು ಸಾವಿರ ನಗದು,ಏಳು ಮೊಬೈಲ್ ಹಾಗೂ ಒಂದು ಬೈಕನ್ನು ವಶಪಡಿಸಿಕೊಳ್ಳಲಾಗಿದೆ.ಪ್ರಕರಣ ದಾಖಲಾಗಿದೆ.

ಮೂಡಬಿದರೆ : ಪೊಲೀಸ್ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದ್ರೆ ಎಂತಹಾ ಗೌರವ ಸಿಗುತ್ತೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್ ಅಧಿಕಾರಿಯೇ ಸಾಕ್ಷಿ. ಪೊಲೀಸ್ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ ದಿವಾಕರ್ ರೈ ಅವರಿಗೆ ಸಹೋದ್ಯೋಗಿಗಳು ಪುಷ್ಪಾರ್ಚನೆಯ ಗೌರವ ಸಲ್ಲಿಸಿದ್ದಾರೆ. ದಿವಾಕರ ರೈ ಅವರು ಸೇವೆಯಿಂದ ಇಂದು ನಿವೃತ್ತರಾಗಿದ್ದರು. ಮೂಡಬಿದಿರೆಯ ಪೊಲೀಸ್ ಠಾಣೆಯಿಂದ ಅವರು ಸೇವೆಯನ್ನು ಮುಗಿಸಿ ಮನೆಗೆ ತೆರಳುವ ವೇಳೆಯಲ್ಲಿ ಅವರು ಠಾಣೆಯಿಂದ ಪೊಲೀಸ್ ಜೀಪ್ ಏರುವ ವರೆಗೂ ಮೂಡಬಿದಿರೆಯ […]

ಬ್ರಿಡ್ಜ್ ಟೌನ್ : ಇಲ್ಲಿನ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಸೋಲಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆ ಮುತ್ತಿಟ್ಟಿದೆ. ಆ ಮೂಲಕ ದಕ್ಷಿಣ ಆಫ್ರಿಕಾ ಗೆ ಮತ್ತೆ ಚೋಕರ್ಸ್ ಪಟ್ಟ ಖಾಯಂ ಆಗಿದೆ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚೊಚ್ಚಲ ವಿಶ್ವಕಪ್ ಗೆದ್ದಿದ್ದ ಭಾರತ, ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋಲಿಸಿ ಚಾಂಪಿಯನ್ ಪಟ್ಟ ಪಡೆಯಿತು. 2007ರಲ್ಲಿ […]