
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯ 169 ರಲ್ಲಿ ಹಾದು ಹೋಗುವ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜ್ ಪಕ್ಕದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯ ಪರಿಣಾಮವಾಗಿ ಬೈಕ್ ಸವಾರನೊಬ್ಬ ನಿನ್ನೆ ರಾತ್ರಿ ಬಲಿಯಾದ ಘಟನೆ ನಡೆದಿದೆ.ಗಂಜಿಮಠದ ನಿವಾಸಿ ಅಬ್ದುಲ್ ಖಾದರ್ (69) ಮೃತಪಟ್ಟ ವ್ಯಕ್ತಿ.ಮಿಜಾರಿನಲ್ಲಿ ರಾ. ಹೆ. ಕಾಮಗಾರಿಯು ಅಪೂಣ೯ ಸ್ಥಿತಿಯಲ್ಲಿದ್ದು ಅಲ್ಲಿ ಮೋರಿಯ ದೊಡ್ಡ ಚರಂಡಿಗೆ ಅಡ್ಡವಾಗಿ ಹೊಂಡ ತೋಡಿ ಅದಕ್ಕೆ ಕಾಂಕ್ರೀಟ್ ಬೆಡ್ಡಿಂಗ್ ಹಾಕಲಾಗಿದ್ದು ಅಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸಲಿಲ್ಲ. ಅಲ್ಲಿ ಹೊಂಡ ಇರುವುದು ರಾತ್ರಿ ಯಾರ […]
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ವ್ಯಾಪ್ತಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಉಪ ವಲಯ ಅರಣ್ಯಾಧಿಕಾರಿ ಬಸಪ್ಪ ಹಲಗೇರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಹೆರಾಲ್ಡ್ ಡಿಸಿಲ್ವ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿನ್ ಡಿಸೋಜಾ, ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ತದನಂತರ ಶಾಲೆಯಿಂದ ಶಿರ್ತಾಡಿ ಪಟ್ಟಣದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳಿಂದ ನಡೆದ ಅಣಕು ಆಡುಗಬ್ಬ […]
ಮೂಡುಬಿದಿರೆ:ತಾಲೂಕಿನ ನ್ಯಾಯಾಲಯ ಆವರಣದಲ್ಲಿ ಮೂಡುಬಿದಿರೆ ಅರಣ್ಯ ಇಲಾಖೆ ಹಾಗು ಮೂಡುಬಿದಿರೆ ವಕೀಲರ ಸಂಘ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ & ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಮಧುಕರ್ ಭಾಗವತ್,ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಧೀಶರು, ಕಾವೇರಮ್ಮ ನ್ಯಾಯಾಧೀಶರು, ಸಸಿಗಳನ್ನು ನೆಟ್ಟರು.ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು ಹರೀಶ್ ಪಿ, ಹಿರಿಯ ವಕೀಲರಾದ ಕೆ. ಆರ್ ಪಂಡಿತ್, ದಿವಿಜೇಂದ್ರ ಕುಮಾರ್, ಪ್ರವೀಣ್ ಲೋಬೊ, ಜಯಪ್ರಕಾಶ್, ಪದ್ಮಪ್ರಸಾದ್ ಜೈನ್, ಮರ್ವಿನ್ ಲೋಬೊ, ಆನಂದ್, ಶ್ವೇತಾ, ಸಂದೇಶ್, ಜಗನ್ನಾತ್, ವಕೀಲರು ಹಾಗು ಅರಣ್ಯ […]
ಮೂಡುಬಿದಿರೆ: ಅಸಂಘಟಿತ ಕಾರ್ಮಿಕರು, ಬಡವರು ಹಸಿವಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನನ್ನು ಆರಂಭಿಸಿದ್ದಾರೆ. ಇದು ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಇಲ್ಲಿನ ಆಡಳಿತ ಸೌಧದ ಎದುರು ಅವರು ಬುಧವಾರ ಇಂದಿರಾ ಕ್ಯಾಂಟೀನನ್ನು ಉದ್ಘಾಟಿಸಿ ಮಾತನಾಡಿದರು. ಅಗ್ಗದ ದರದಲ್ಲಿ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟ ಸಿಗುತ್ತದೆ. ಬಡವರ ಹಸಿವು ನೀಗಿಸುವ ಇಂತಹ ಉತ್ತಮ ಸೌಲಭ್ಯ ದೇಶದ ಬೇರೆ ಯಾವ ರಾಜ್ಯಗಳಲ್ಲು ಇಲ್ಲ. […]
ಮೂಡುಬಿದಿರೆ:ಮಾಂಟ್ರಾಡಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಎಕ್ರೆಗಟ್ಟಲೆ ಸರಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದು ಈ ಬಗ್ಗೆ ದೂರು ಕೊಟ್ಟರೂ ಕಂದಾಯ ಇಲಾಖೆ ಕ್ರಮ ವಹಿಸಿಲ್ಲ ಎನ್ನಲಾಗಿದೆ.ಮಾಂಟ್ರಾಡಿ ಗ್ರಾಮದ ಸ.ನಂ 88-1ರಲ್ಲಿ ಎಲಿಯಾಸ್ ಸಲ್ದಾನ ಎಂಬವರು ತನ್ನ ಸ್ವಾಧೀನದಲ್ಲಿದ್ದ ಸರಕಾರಿ ಜಾಗವನ್ನು ಸಕ್ರಮಗೊಳಿಸುವಂತೆ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದು ಅವರ ಅರ್ಜಿ ವಿಚಾರಣೆ ಹಂತದಲ್ಲಿದೆ ಎನ್ನಲಾಗಿದೆ. ಈ ಮಧ್ಯೆ ಆಂತೋನಿ ಡಿಸೋಜಾ ಎಂಬವರು ನನ್ನ ಸ್ವಾಧೀನದಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮವಾಗಿ ೧೫ ಕ್ಕೂ ಹೆಚ್ಚು ಪಿಲ್ಲರ್ಗಳನ್ನು ಹಾಕಿ ಜಾಗವನ್ನು ತನ್ನ ವಶಕ್ಕೆ […]
ಮೂಡುಬಿದಿರೆ : ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು. ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾನ್ಸ್ ಮಾಡುತ್ತಿದ್ದ ಸಂದರ್ಭರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆಗಾಗಲೇ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ತಿಳಿದುಬಂದಿದೆ.ಮೃತರು ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ […]
ಮೂಡುಬಿದಿರೆ:ಭಯೋತ್ಪಾದಕರು ಹಿಂದೂ ಪ್ರವಾಸಿಗರ ಜಾತಿ ಕೇಳಿ, ಪ್ಯಾಂಟ್ ಬಿಚ್ಚಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸಂತ್ರಸ್ಥರಿಗೆ ಪ್ರಧಾನಿಯವರಿಂದ ಕೇವಲ ಸಾಂತ್ವನ ಸಾಲದು. ಪ್ರಧಾನಿಯಷ್ಟೆ ಸಾಮಾನ್ಯ ಜನರ ಜೀವಕ್ಕೂ ಬೆಲೆ ಇದೆ. ಆದ್ದರಿಂದ ಪಹಲ್ಲಾಮ್ ಘಟನೆಗೆ ಪಾಕಿಸ್ತಾನದ ವಿರುದ್ಧ ಪ್ರತಿಕಾರ ತೀರಿಸುವುದೆ ಸೂಕ್ತ ಪರಿಹಾರ ಎಂದು ಯುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಅವರು ದರೆಗುಡ್ಡೆ ಇಟಲ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರಭಾವಿಯಾಗಿರುವ ಈಶ್ವರ ಶಾಂತ ರೀತಿಯ ವ್ಯಕ್ತಿತ್ವವನ್ನು ಹೊಂದಿರುವವ […]
ಮೂಡುಬಿದಿರೆ: ಭಜನೆ ಮಾಡುವುದರಿಂದಾಗಿ ಮಕ್ಕಳಲ್ಲಿ ಜ್ಞಾನವೃದ್ಧಿ ಆಗುವುದು ಹಾಗೂ ಕುಣಿತ ಭಜನೆಯಿಂದಾಗಿ ದೈಹಿಕವಾಗಿಯೂ ಸದೃಢರಾಗುತ್ತಾರೆ. ಭಜನಾ ಕಾರ್ಯಕ್ರಮದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಕೊಡುವುದು ಅಗತ್ಯವಿದೆ ಎಂದು ಮೂಡುಬಿದಿರೆ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ಅಧ್ಯಕ್ಷ ಲಕ್ಷ್ಮಣ ಸುವರ್ಣ ಹೇಳಿದರು.ಅವರು ಪಣಪಿಲದಲ್ಲಿ ನಡೆದ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು ಮಾಹಿತಿ ನೀಡಿದರು.ಭಜನಾ ತರಬೇತಿ ಗುರುಗಳಾದ ನಾಗೇಶ್ ನೆರಿಯ ,ಅಭಿಷೇಕ್ ಚಾರ್ಮಾಡಿ ಭಜನಾ ತರಬೇತಿ […]
ಮೂಡುಬಿದಿರೆ: ಭಜನೆ ಮಾಡುವುದರಿಂದಾಗಿ ಮಕ್ಕಳಲ್ಲಿ ಜ್ಞಾನವೃದ್ಧಿ ಆಗುವುದು ಹಾಗೂ ಕುಣಿತ ಭಜನೆಯಿಂದಾಗಿ ದೈಹಿಕವಾಗಿಯೂ ಸದೃಢರಾಗುತ್ತಾರೆ. ಭಜನಾ ಕಾರ್ಯಕ್ರಮದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಕೊಡುವುದು ಅಗತ್ಯವಿದೆ ಎಂದು ಮೂಡುಬಿದಿರೆ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ಅಧ್ಯಕ್ಷ ಲಕ್ಷ್ಮಣ ಸುವರ್ಣ ಹೇಳಿದರು.ಅವರು ಪಣಪಿಲದಲ್ಲಿ ನಡೆದ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು ಮಾಹಿತಿ ನೀಡಿದರು.ಭಜನಾ ತರಬೇತಿ ಗುರುಗಳಾದ ನಾಗೇಶ್ ನೆರಿಯ ,ಅಭಿಷೇಕ್ ಚಾರ್ಮಾಡಿ ಭಜನಾ ತರಬೇತಿ […]
ಮೂಡುಬಿದಿರೆ: ಭಜನೆ ಮಾಡುವುದರಿಂದಾಗಿ ಮಕ್ಕಳಲ್ಲಿ ಜ್ಞಾನವೃದ್ಧಿ ಆಗುವುದು ಹಾಗೂ ಕುಣಿತ ಭಜನೆಯಿಂದಾಗಿ ದೈಹಿಕವಾಗಿಯೂ ಸದೃಢರಾಗುತ್ತಾರೆ. ಭಜನಾ ಕಾರ್ಯಕ್ರಮದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಕೊಡುವುದು ಅಗತ್ಯವಿದೆ ಎಂದು ಮೂಡುಬಿದಿರೆ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ಅಧ್ಯಕ್ಷ ಲಕ್ಷ್ಮಣ ಸುವರ್ಣ ಹೇಳಿದರು.ಅವರು ಪಣಪಿಲದಲ್ಲಿ ನಡೆದ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು ಮಾಹಿತಿ ನೀಡಿದರು.ಭಜನಾ ತರಬೇತಿ ಗುರುಗಳಾದ ನಾಗೇಶ್ ನೆರಿಯ ,ಅಭಿಷೇಕ್ ಚಾರ್ಮಾಡಿ ಭಜನಾ ತರಬೇತಿ […]