Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಕೋಟೆಬಾಗಿಲು ಪ್ರದೇಶದ ನಿವಾಸಿ ಅನ್ಸಾರ್ ಅವರ ಪುತ್ರ ಶಾರಿಕ್, ಭಾನುವಾರ ರಾತ್ರಿ ಸ್ನಾನಗೃಹದಲ್ಲಿ ಸಂಭವಿಸಿದ ದುರಂತದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಕೋಟೆಬಾಗಿಲಿನ ಅಪಾರ್ಟ್ಮೆಂಟ್ನಲ್ಲಿ ಶಾರಿಕ್ ಮತ್ತು ಅವರ ತಾಯಿ ವಾಸಿಸುತ್ತಿದ್ದರು. ಶಾರಿಕ್ ಸ್ನಾನಕ್ಕೆಂದು ತೆರಳಿದಾಗ, ಆತನ ತಾಯಿ ನಿದ್ರಿಸುತ್ತಿದ್ದರು. ಆದರೆ, ಬಹಳ ಹೊತ್ತಾದರೂ ಶಾರಿಕ್ ಹೊರಬರದೇ ಇದ್ದಾಗ, ರಾತ್ರಿ ಮನೆಗೆ ಬಂದ ಶಾರಿಕ್ನ ಸಹೋದರ ಸ್ನಾನಗೃಹದ ಬಾಗಿಲು ಒಡೆದು ನೋಡಿ, ದುರ್ಘಟನೆ ಬೆಳಕಿಗೆ ತಂದುಕೊಂಡರು. ಸ್ನಾನಗೃಹದ ಗ್ಯಾಸ್ ಗೀಸರ್ನಿಂದ ಉಂಟಾದ ಕೆಮಿಕಲ್ ಸ್ಪ್ರೇಡ್ ಆಗಿ ಶಾರಿಕ್ ಉಸಿರುಗಟ್ಟಿದ […]

ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ […]

ಸೈನಿಕರು ತುಂಬಾ ಭಾವ ಜೀವಿಗಳು-ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರನ್ನು ಪ್ರತೀಕ್ಷಣ ಸ್ಮರಿಸಬೇಕು. ಸೈನಿಕರು ಭಾವಜೀವಿಗಳು, ನಚೀಕೇತ್, ಸೌರಭ್ ಕಾಲಿಯಾರಂತಹ ಮೊದಲಾದ ವೀರ ಯೋಧರ ಬಲಿದಾನದ ಪ್ರತಿಫಲವಾಗಿ ಇಂದಿನ ಭಾರತ ಭವ್ಯವಾಗಿದೆ. ಕಾರ್ಗಿಲ್ ಯುದ್ಧವಲ್ಲ ಅದೊಂದು ಕಾರ್ಯಚರಣೆ. ಯಾಕೆ ಭಾರತಕ್ಕೆ ಕಾರ್ಗಿಲ್ ಮುಖ್ಯವೆಂದರೆ ೫೨೭ ಸೈನಿಕರು ತಮ್ಮ ಯಶಸ್ವಿ ಕಾರ್ಯಚರಣೆಯಿಂದ ಭಾರತಕ್ಕೆ ಜಯ ತಂದುಕೊಟ್ಟು ಹುತಾತ್ಮರಾದರು. ಇಂದು ಆ ಕಾರ್ಯಚರಣೆಯಲ್ಲಿ ಮಡಿದ ಅಷ್ಟೂ ಸೈನಿಕರನ್ನು ಸ್ಮರಿಸಿಕೊಳ್ಳುವುದು ಅತೀ ಮುಖ್ಯ ಎಂಬುದಾಗಿ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ […]

ಮೂಡುಬಿದಿರೆ : ಬಂಟ್ವಾಳ – ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೇಲೆ ನಿನ್ನೆ ತಡರಾತ್ರಿ 11:30ರ ವೇಳೆಗೆ ಪ್ರಾಂತ್ಯ ಗ್ರಾಮದ ಮಿಜಾರ್ ಫ್ಯೂಯಲ್ಸ್ ಪೆಟ್ರೋಲ್ ಪಂಪಿನ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ವಿಪರೀತ ಗಾಳಿ-ಮಳೆಗೆ ಧರೆಗೆ ಉರಿಳಿತ್ತು. ರಾತ್ರಿ ವೇಳೆ ವಾಹನ ಸಂಚಾರ ಕಡಿಮೆ ಇದದ್ದರಿಂದ ಯಾವುದೇ ವಾಹನಗಳಿಗೆ ಹಾನಿಯಾಗಲಿಲ್ಲ. ಮರ ಬಿದ್ದ ಸ್ಥಳದಲ್ಲಿದ್ದ ಬಿರಾವು ಮೂಲದ ಸದಾಶಿವ ಶಟ್ಟಿಯವರು ತಮ್ಮ ಮನೆಗೆ ಧಾವಿಸಿ ಮರ ಕಡಿಯುವ ಮಿಷಿನ್ ತಂದು ಧರೆಗೆ ಉರುಳಿದ್ದ ಮರವನ್ನು ತೆರವು ಮಾಡುವಲ್ಲಿ ಸಹಾಯ […]

ಮೂಡುಬಿದಿರೆ: ಪುತ್ತಿಗೆ ಗ್ರಾಪಂನ ಹಂಡೇಲಿನಲ್ಲಿ ಪಂಚಾಯಿತಿ ವ್ಯಾಪ್ತಿಯ ಪುತ್ತಿಗೆ ಪದವು ಹಂಡೇಲು ಮಸೀದಿ ಬಳಿ ಶುಕ್ರವಾರ ಸಾಯಂಕಾಲ ಕಾರು ಡಿಕ್ಕಿಯಾಗಿ ಸೈಕಲ್ ಸವಾರ, ಪಂಪ್ ಆಪರೇಟಿವ್ ರಮೇಶ್ ಅಂಚನ್(56) ಮೃತಪಟ್ಟಿದ್ದಾರೆ. ಸಾಯಂಕಾಲ 6.30ರ ವೇಳೆ ರಮೇಶ್ ಅವರು ಸೈಕಲ್ ನಲ್ಲಿ ಹೋಗುತ್ತಿರುವಾಗ ಕಲ್ಲಮುಂಡ್ಕೂರು ಕಡೆಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆ, ಕಾಲಿಗೆ ತೀವ್ರ ತರಹದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಮೇಶ್ ಅವರು ಹಲವು ವರ್ಷಗಳ ಹಿಂದೆ ಮೂಡುಬಿದಿರೆ ಮಾರುಕಟ್ಟೆ […]

ಮೂಡುಬಿದಿರೆ: ದೇಶಪ್ರೇಮ ಎಂದಾಕ್ಷಣ ಸೇನೆ ಸೇರುವುದು ಮಾತ್ರವಲ್ಲ. ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತೀ ಕರ್ಯವು ದೇಶಪ್ರೇಮವೆನಿಸುತ್ತದೆ ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ನುಡಿದರು. ಅವರು ಶುಕ್ರವಾರ ಶಿವರಾಮ ಕಾರಂತರ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ನೇ ವರ್ಷದ ಚಟುವಟಿಕೆಗಳು ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.ಭಾರತದ ಸ್ವಾತಂತ್ರ್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ಧಗಳಲ್ಲೂ ನಮ್ಮ ವಿರುದ್ಧ ಗೆಲ್ಲಲಾಗಲಿಲ್ಲ. ಸೈನಿಕರ ಸಾವು […]

ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ಜುಲೈ ೨೬ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು ೧೧ ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ ಹಿರಿಮೆಗೆ ಆಳ್ವಾಸ್ ಪಾತ್ರವಾಗುತ್ತಿದೆ. ಈ ಬಾರಿಯ ಒಲಿಂಪಿಕ್ಸ್ ಗೇಮ್ನಲ್ಲಿ ೪೪೦೦ ರಿಲೇಯ […]

ಮೂಡುಬಿದರೆ: ಅಲಂಕಾರ ಪಂಡಿತ್ ರೆಸಾರ್ಟ್ ಸಂಸ್ಥೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ಬೀಗಮುದ್ರೆ ಜಡಿದಿದೆ ಸುಮಾರು 14 ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಈ ಬೀಗ ಮುದ್ರೆ ಹಾಕಲಾಗಿದೆ ಬ್ಯಾಂಕಿನ ಅಧಿಕಾರಿಗಳು ಕಾನೂನು ರೀತಿಯಲ್ಲಿ ಹೋರಾಟ ಮಾಡಿದ್ದು ಕಾನೂನು ರೀತಿಯಲ್ಲಿ ಪ್ರಕ್ರಿಯೆಗಳು ನಡೆದಿವೆ .ಬುಧವಾರ ಮೂಡಬಿದ್ರೆ ಠಾಣಾಧಿಕಾರಿಗಳ ಸಹಿತ ಬ್ಯಾಂಕ್ ಸಿಬ್ಬಂದಿಗಳು ಅಧಿಕಾರಿಗಳು ನ್ಯಾಯಾಲಯದ ಅಧಿಕಾರಿಗಳ ಸಮಕ್ಷಮ ಪ್ರಕ್ರಿಯೆ ನಡೆಸಲಾಯಿತು

ಮೂಡುಬಿದಿರೆ: ಉಡುಪಿ-ಕಾಸರಗೋಡು ನಡುವೆ ಹಾದು ಹೋಗುವ 400 ಕೆವಿ ವಿದ್ಯುತ್ ಲೈನ್ ಅಳವಡಿಕೆ ವಿರೋಧಿಸಿ ಕಂಪೆನಿಯವರ ದುರ್ವರ್ತನೆ ಖಂಡಿಸಿ ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿಯಿಂದ ಜು.30ರಂದು ಬೆಳಿಗ್ಗೆ 10ಕ್ಕೆ ಮಿಜಾರು ಗೋಪಾಲಕೃಷ್ಣ ದೇವಸ್ಥಾನ ಬಳಿಯ ಬೈತರಿಯಲ್ಲಿ ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ತಿಳಿಸಿದ್ದಾರೆ. ಅವರು ಬುಧವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈ ಪ್ರತಿಭಟನೆಯಲ್ಲಿ ಮಿಜಾರು, […]

ಕೇಂದ್ರ ಬಜೆಟ್ 2024 ಮುಖ್ಯಾಂಶಗಳು ಈ ಬಜೆಟ್ ಘೋಷಣೆಗಳು ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಸಮೃದ್ಧಿಗೆ ಪ್ರಮುಖ ಹಂತವಾಗಿವೆ.