Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊAದಿಗೆ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಆಳ್ವಾಸ್ ಈ ಬಾರಿಯೂ ಉನ್ನತ ಸಾಧನೆ ಮಾಡಿದೆ.ನಿಸರ್ಗ ಎಸ್. 21ನೇ ರ್ಯಾಂಕ್, ಮೃಣಾಲಿನಿ ಎಸ್. ಪೂಜಾರಿ 29ನೇ ರ್ಯಾಂಕ್, ಪಾಹಿಮಾ ಹೇಮಚಂದ್ರ 38ನೇ ರ್ಯಾಂಕ್, ಎಮ್. ರಾಮ್ಪ್ರಸಾದ್ ಮಲ್ಯ 266ನೇ ರ್ಯಾಂಕ್, ಎಮ್.ವಿ. ಚಿರಾಂತ್ 290ನೇ ರ್ಯಾಂಕ್, ಆಕಾಶ್ ಬಸವರಾಜ್ ಬಚಲಾಪುರ 298ನೇ ರ್ಯಾಂಕ್, ಜೈ ಅಶೋಕ್ ರಾಚನ್ನವರ್ 402ನೇ ರ್ಯಾಂಕ್ನೊAದಿಗೆ ತೇರ್ಗಡೆ […]

ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ (ಮುಡಾ)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹರ್ಷವರ್ಧನ ಪಡಿವಾಳ್ ಹಾಗೂ ಸದಸ್ಯರನ್ನು, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸುವ ಕಾರ್ಯಕ್ರಮವು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರ್ಷವರ್ಧನ ಪಡಿವಾಳ್, ಮುಡಾ ಸದಸ್ಯರಾದ ಸತೀಶ್ ಭಂಡಾರಿ ಕರಿಂಜೆ , ಶೇಖರ್ (ಬೊಳ್ಳಿ), […]

ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಲ್ ನಿಧನರಾಗಿದ್ದಾರೆ. ಅವರು ಎಟ್ಟಿಕುಳಂನಲ್ಲಿರುವ ತಮ್ಮ ಮನೆಯಲ್ಲಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾದರು. ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರಾದ ಅಸೈಯದ್ ಫಝಲ್ ಕೋಯಮ್ಮ ತಂಙಲ್ ಪ್ರಸ್ತುತ ಉಳ್ಳಾಲ ಖಾಝಿಯಾಗಿದ್ದರು. ಇಂದು ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ಅವರು ಭಾಗವಹಿಸಬೇಕಾದ ಕಾರ್ಯಕ್ರಮವು ನಿಗದಿಯಾಗಿತ್ತು. ಅವರು ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ರಾತ್ರಿ […]

ವಿದ್ಯಾಗಿರಿ (ಮೂಡುಬಿದಿರೆ): ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]

ಮೂಡುಬಿದಿರೆ: ಕಲೆ, ಸಂಸ್ಕೃತಿ, ಕ್ರೀಡೆಯ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶ್ರಮಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಮೂಡುಬಿದಿರೆ ತಾಲ್ಲೂಕಿನ ಮಿಜಾರಿನ ಪ್ರಕೃತಿಯ ಮಡಿನಲ್ಲಿರುವ ‘ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜು’ (ಎಐಇಟಿ) ಸ್ವಾಯತ್ತ ಸ್ಥಾನಮಾನ ಪಡೆದಿದ್ದು, ೨೦೩೪-೩೫ನೇ ಸಾಲಿನ ವರೆಗೆ ಅನ್ವಯಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ವೈಶಿಷ್ಟö್ಯಗಳು:‘ಆಳ್ವಾಸ್ ಇಂಜಿನಿಯರಿAಗ್ ಕಾಲೇಜು ನ್ಯಾಕ್ನ ಮೊದಲ ಸೈಕಲ್ನಲ್ಲೇ (ಓಂAಅ) ಂ+ ಶ್ರೇಣಿಯನ್ನು […]

ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಭಾಗಕ್ಕೆ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ ಮಳೆಯ ತೀವ್ರತೆಯಿಂದಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈಗಾಗಲೇ ನದಿಗಳು ತುಂಬಿ ಹರಿಯುತ್ತಿದ್ದು, ಕಡಲ ತೀರ ಪ್ರದೇಶಗಳಲ್ಲಿ ಪ್ರಬಲ ಅಲೆಗಳು ಸಂಚಲನ ಮೂಡಿಸುತ್ತಿವೆ. ಈ ಪರಸ್ಥಿತಿಯಲ್ಲಿ, ಭಾರೀ ಮಳೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಈ ದಿನ ಮತ್ತು ನಾಳೆ, ಜಿಲ್ಲೆಯ ಎಲ್ಲಾ ಅಂಗನವಾಡಿ, […]

ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ […]

ವಿದ್ಯಾಗಿರಿ: ಸ್ನಾತಕೋತ್ತರ ವಾಣಿಜ್ಯ ವಿದ್ಯಾರ್ಥಿಗಳು ವಾಣಿಜ್ಯದ ಎಲ್ಲಾ ಆಯಾಮಗಳಲ್ಲಿ ನಿಪುಣತೆ ಹೊಂದುವುದು ಅವಶ್ಯಕ ಎಂದು ಲೆಕ್ಕಪರಿಶೋಧಕ ಎಂ. ಉಮೇಶ್ ರಾವ್ ಹೇಳಿದರು.ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಸ್ನಾತಕೋತ್ತರ ವಿಚಾರಸಂಕಿರಣ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.ಜಗ್ಗತ್ತು ಒಂದು ರಣರಂಗ. ಇದ್ದನ್ನು ಎದುರಿಸುವ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಆಗಿದ್ದಾಗಲೇ ಸಿದ್ಧ ಪಡಿಸಿಕೊಳ್ಳಬೇಕು. ತಂತ್ರಜ್ಞಾನದ ಹೊಸ ಆವಿಷ್ಕಾರ ಕೃತಕ ಬುದ್ಧಿಮತ್ತೆ (ಏಐ) ವಾಣಿಜ್ಯ ವಿದ್ಯಾರ್ಥಿಗಳಿಗೆ ಸವಾಲಾಗಿ ರೂಪುಗೊಂಡಿದ್ದು, ನಮ್ಮ ಬುದ್ಧಿಶಕ್ತಿಯನ್ನು ವೃದ್ಧಿಸಿಕೊಂಡರೆ […]

ಮೂಡುಬಿದಿರೆ: ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಅವರು ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್ನಲ್ಲಿ 600 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದರು. ಬೆಂಗಳೂರಿನ ಹೆಚ್ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು. ಸುಮಂತ್ ಅವರು ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿ ಅವರ ಪುತ್ರರಾಗಿದ್ದಾರೆ. ಸುಮಂತ್ […]