
ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವಿರುವ ಮೂಡುಬಿದಿರೆ ಪುತ್ತಿಗೆಯ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.28 ರಿಂದ ಮಾ. 7 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕುಲದೀಪ ಎಂ.ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ಬುಧವಾರ ಶ್ರೀ ಕ್ಷೇತ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿ ‘ ಈಗಾಗಲೇ ಸುಮಾರು 15 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ […]
ಬಂಟ್ವಾಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾದೇಶಿಕ ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳದ ಜಿಲ್ಲಾ ಮಟ್ಟದ ಭಜನಾ ಪರಿಷತ್ ಸಭೆಯು ಬುಧವಾರ ಬಂಟ್ವಾಳ ಯೋಜನಾ ಕಚೇರಿಯ ಸಭಾಂಗಣದಲ್ಲಿ, ನಡೆಯಿತು.ಭಜನ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಶ್ರೀ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಭಜನಾ ಮಂಡಳಿ ಹಾಗೂ ಮಂದಿರಗಳ ರಿಜಿಸ್ಟ್ರೇಷನ್ ಮುಂತಾದ ದಾಖಲಾತಿಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದ ಅವರು ಭಜನಾ ಪರಿಷತ್ತು ನಗರ ಭಜನೆ,ಮನೆ ಮನ ಭಜನೆ, ಸಂಧ್ಯಾ ಭಜನೆ ಮುಖಾಂತರವಾಗಿ […]
ಮೂಡುಬಿದಿರೆ: ಇಲ್ಲಿನ ಶತಮಾನಗಳ ಇತಿಹಾಸವಿರುವ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ನಾಲ್ಕನೇ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ನೇಮೋತ್ಸವವು ಫೆ.25ರಿಂದ ಮಾರ್ಚ್ ೩ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ, ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿತಿಳಿಸಿದ್ದಾರೆ.ಅವರು ಶುಕ್ರವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮಾಯಂದಲೆ ದೇವಿಯ ಮೂರ್ತಿ ಪುನರ್ ಪ್ರತಿಷ್ಠೆ, ನೂತನ ಮುಖಮಂಟಪ ಮತ್ತು ರಾಜಗೋಪುರ ಲೋಕಾರ್ಪಣೆಗೊಳ್ಳಲಿದೆ.ಫೆ.25ರಂದು ಸಂಜೆ 4 ಗಂಟೆಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಿಂದ ನಡ್ಯೋಡಿ […]
ಮೂಡುಬಿದಿರೆ: ತಾಲೂಕಿನ ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸುಜಾತ ಜೆ.ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆದಿದೆ.ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಐ ರಾಘವೇಂದ್ರ ಭಟ್ ಇರುವೈಲ್, ಶಿವಾನಂದ ನಾಯ್ಕ್, ಪ್ರದೀಪ್ ಶೆಟ್ಟಿ, ಪೂವಪ್ಪ ಸಾಲ್ಯಾನ್,ಶುಭಕರ ಕಾಜವ, ಪದ್ಮನಾಭ ಪೂಜಾರಿ, ಮೋಹನ್ ನಾಯಕ್,ಮತ್ತು ದೀಪಾ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ತಾಲೂಕಿನ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಚಾ,ಕಾಫಿ, ಬರ್ಗರ್,ಪಿಝ್ಝಾ, ಶವರ್ಮ, ಜ್ಯೂಸ್, ಚಾಟ್ಸ್ ಮುಂತಾದ ಐಟಮ್ಗಳನ್ನೊಳಗೊಂಡ ನೂತನ ಉಪಹಾರ ಕೇಂದ್ರ ‘ ಬೆದ್ರ ಕೆಫೆ’ಯು ನಾಳೆ ಸಂಜೆ ೪-೩೦ ಉದ್ಘಾಟನೆಗೊಳ್ಳಲಿದೆ.ವಿನೂತನ ಶೈಲಿಯ ಪರಿಕಲ್ಪನೆಯ ಈ ಬೆದ್ರ ಕೆಫೆ ಉದ್ಘಾಟನಾ ಸಮಾರಂಭದಲ್ಲಿ ಡಾ.ಎಂ.ಮೋಹನ ಆಳ್ವ,ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ, ಮಿಥುನ್ ರೈ, ಪುರಸಭಾಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭಾ ಸದಸ್ಯರಾದ ಶಕುಂತಲಾ ಹರೀಶ್ ಹಾಗೂ ರಾಜೇಶ್ ನಾಯ್ಕ್, ಪುರಸಭಾ ಮುಖ್ಯಾಧಿಕಾರಿ […]
ಮೂಡುಬಿದಿರೆ: ವೇದಗಳಲ್ಲಿ ಎಲ್ಲಿಯೂ ಜಾತಿ ವ್ಯವಸ್ಥೆಯೆಂಬುದಿರಲಿಲ್ಲ. ವೇದಗಳಲ್ಲಿ ಇದದ್ದು ವರ್ಣ ವ್ಯವಸ್ಥೆ ಮಾತ್ರ. ಹಾಗಾಗಿ ಜಾತಿ ವ್ಯವಸ್ಥೆ ನಮಗೆ ಬೇಡ. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂಬ ಭಾವನೆ ನಮ್ಮಲ್ಲಿ ಮೂಡಬೇಕು. ಅಂತಹ ಭಾವನೆ ನಮ್ಮಲ್ಲಿ ಬಾರದೇ ಹೋದರೆ ದೇಶಕ್ಕೂ ಅಪಾಯ ಧರ್ಮಕ್ಕೂ ಅಪಾಯವಿದೆ ಎಂದು ಖ್ಯಾತ ಯುವ ವಕೀಲ ಶರತ್ ಶೆಟ್ಟಿ ತಿಳಿಸಿದರು.ಅವರು ಶನಿವಾರ ದರೆಗುಡ್ಡೆ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕರಾವಳಿ ಕೇಸರಿ ಸೇವಾ ಟ್ರಸ್ಟ್ ರಿ. ಬೆದ್ರ ಕರಾವಳಿ ಕೇಸರಿ ಮಹಿಳಾ […]
ಮೂಡುಬಿದಿರೆ: ಇಲ್ಲಿನ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನ ಲಾಡಿ ಇದರ ಬ್ರಹ್ಮಕಲಶೋತ್ಸವಕ್ಕೆ ಮೂಡುಬಿದಿರೆ ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಶುಭಕೋರಿ ಅಳವಡಿಸಿದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಬ್ಯಾನರ್ ಹರಿದ ಕಿಡಿಗೇಡಿಗಳನ್ನು ದೂರು ಬಂದ ಒಂದು ಗಂಟೆಯಲ್ಲಿ ಮೂಡಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಹಾಗೂ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಜಾರ್ಕಂಡ್ ರಾಜ್ಯದ ಮಹಮ್ಮದ್ ಸಿರಾಜ್ ಅನ್ಸಾರಿ(೨೬) ಹಾಗೂ ಬಿಹಾರ್ ರಾಜ್ಯದ ಮಹಮ್ಮದ್ ಕಾಮ್ಡು ಜಮನ್ ಎಂದು ತಿಳಿದು ಬಂದಿದೆಫ್ಲೆಕ್ಸ್ ಬ್ಯಾನರ್ ನ ಅಹಿತಕರ […]
ಮೂಡುಬಿದಿರೆ: ಎಂಜಿನಿಯರ್ ಕಾಲೇಜುಗಳು ಪ್ರಾಮುಖ್ಯತೆಯನ್ನು ಪಡೆದುಕೊಂಡಷ್ಟೇ ಪ್ರಾಮುಖ್ಯತೆಯನ್ನು ಐಟಿಐ ಕಾಲೇಜುಗಳೂ ಪಡೆದುಕೊಂಡಿವೆ. ಇದೀಗ ತಂತ್ರಜ್ಞಾನಗಳು ಮುಂದುವರಿದಿದ್ದು, ಯಾವುದೇ ಭಾಷೆಯನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಸಾಧ್ಯವಿದೆ ಆದ್ದರಿಂದ ಕೀಳರಿಮೆಯನ್ನು ಬಿಡಿ. ತಾವು ಯಾವುದೇ ನಿಧಾ೯ರಗಳನ್ನು ತೆಗೆದುಕೊಳ್ಳುವಾಗ ಸೂಕ್ತ ಸಮಯ, ಸಂದಭ೯ದಲ್ಲಿ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದ ಅವರು ಬೇರೆ ಬೇರೆ ರೀತಿಯ ವಿಷಯಗಳನ್ನು ಅರಿತುಕೊಂಡು ಮಾನವ ಸಂಪನ್ಮೂಲದ ಬಳಕೆ ಮತ್ತು ಪ್ರಾಯೋಗಿಕ ಮಾಹಿತಿಯನ್ನು ಅರಿತುಕೊಂಡರೆ ದೇಶ ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ ಎಂದು ಕೆಮಿಕಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಕಾರ್ಡೋಲೈಟ್ ಸ್ಪೆಷಾಲಿಟಿ ಜನರಲ್ […]
ಮೂಡುಬಿದಿರೆ: ಕಳೆದ ಹದಿನೈದು ವರ್ಷಗಳಿಂದ ತೋಡಾರಿನಲ್ಲಿ ಕಾರ್ಯಾಚರಿಸುತ್ತಿರುವ ಶಂಸುಲ್ ಉಲಮಾ ಅರೆಬಿಕ್ ಕಾಲೇಜಿನ ಸ್ಪಟಿಕ ಮಹೋತ್ಸವ ಹಾಗೂ ಸನದುದಾನ ಸಮ್ಮೇಳನವು ಫೆ.8 ಹಾಗೂ 9 ರಂದು ನಡೆಯಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕರಾದ ಬಿ.ಎಂ.ಇಸ್ಹಾಕ್ ಹಾಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅವರು ಗುರುವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಶಂಸುಲ್ ಉಲಮಾ ಅರೆಬಿಕ್ ಕಾಲೇಜು 2010 ರಲ್ಲಿ ಪ್ರಾರಂಭಗೊಂಡಿದ್ದು ಧಾರ್ಮಿಕ ಹಾಗೂ ಸಾಮಾಜಿಕ ಚಿಂತನೆಗಳುಲ್ಲ ಯುವಪೀಳಿಗೆಯನ್ನು ಸಮಾಜಕ್ಕೆ ಸಮರ್ಪಿಸುವ ಧ್ಯೇಯದೊಂದಿಗೆ ಧಾರ್ಮಿಕ ಶಿಕ್ಷಣದೊಂದಿಗೆ ಲೌಕಿಕ […]
ಮೂಡುಬಿದಿರೆ:ಇಲ್ಲಿನ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ರೂ 5 ಲಕ್ಷ ಮೊತ್ತದ ಚೆಕ್ಕನ್ನು ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಪ್ರದೀಪ್ ರೈ, ಪ್ರಮುಖರಾದ ಉಮೇಶ್ ಹೆಗ್ಡೆ ಮತ್ತು ಸುರೇಂದ್ರ ಶೆಟ್ಟಿ ಈ ಸಂದರ್ಭದಲ್ಲಿದ್ದರು.