Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ :ವಿದ್ಯೆ ಸಾರ್ಥಕತೆಯ ಗುರಿಯನ್ನು ಹೊಂದಿರಬೇಕು. ಮನೆ ಮತ್ತು ಶಾಲೆಯ ವಾತಾವರಣ ಪೂರಕವಾಗಿದ್ದರೆ ಮಕ್ಕಳು ಸಮಾಜಕ್ಕೆ ಮತ್ತು ಊರಿಗೆ ಉತ್ತಮ ಹೆಸರು ತರಲು ಸಾಧ್ಯವಾಗುತ್ತದೆ ಎಂದು ವೈದಿಕ ಗುರುರಾಜ ಭಟ್ ಹೇಳಿದರು.ಅವರು ಶನಿವಾರ ದ.ಕ. ಜಿ.ಪಂ.ಸ.ಹಿ. ಪ್ರಾಥಮಿಕ ಶಾಲೆ ನೀರ್ಕೆರೆ, ಪ್ರತಿಭಾ ಪುರಸ್ಕಾರ ಸಮಿತಿ, ಹಳೆವಿದ್ಯಾರ್ಥಿಗಳ ಸಂಘ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಕ್ಷರ ಮಾತೆ ಸಾವಿತ್ರಿ ಬಾಯಿ ಪುಲೆ’ ಹೆಸರಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಾಲಾ ಮುಖ್ಯಶಿಕ್ಷಕಿ ಯಮುನಾ […]

ಕಾಪು:ರಾಯಲ್ ಗ್ಲೀನ್ ಕೋ ಆರ್ಡಿನೇಷನ್ ಇದರ ಪ್ರಾಯೋಜಕತ್ವದಲ್ಲಿ ಸೌಹಾರ್ದ ಮೂಡುಬಿದಿರೆ ಇದರ ಸಂಯೋಜನೆ ಯೊಂದಿಗೆ ಕಾಪುದ ಅಹಮದಿ ಮೊಹಲ್ಲಾದ ಪಕೀರ್ನಕಟ್ಟೆಯ ಜಾಮಿಯಾ ಮಸೀದಿಯಲ್ಲಿ ಉಚಿತ ಎಲ್ ಇಡಿ ಬಲ್ಬ್ ಜೋಡಿಸುವ ಸ್ವಉದ್ಯೋಗ ತರಬೇತಿ ಶಿಬಿರವುಗುರುವಾರ ನಡೆಯಿತು.ಈ ಉಚಿತ ತರಬೇತಿಯಲ್ಲಿ 70ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿ . ಎಲ್ಇಡಿ ಮತ್ತು ಎಸಿ ಡಿಸಿ ಬಲ್ಬ್ ಜೋಡಿಸುವ ತರಬೇತಿ ಪಡೆದರುಸ್ವಯಂಸೇವಾ ತಂಡದ ಮಹಮ್ಮದ್ ಶಾಕಿರ್, ಮಹಮ್ಮದ್ ಶಾಫಿ ಎಲ್ ಇಡಿ ಬಲ್ಬ್ ಜೋಡಣೆ ಯ ತರಬೇತಿ ನೀಡಿದರು.ಈ ಸಂದರ್ಭದಲ್ಲಿ ರಾಯಲ್ […]

ಸದ್ಯಕ್ಕೆ ತುಳುನಾಡಿನಾದ್ಯಂತ ಬರೀ ಸದ್ದು ಮಾಡುತ್ತಿರುವ ದಸ್ಕತ್ ಸಿನಿಮಾ ಎಲ್ಲಾರ ಮನೆಮನದಲ್ಲಿ ಗುನುಗುಟ್ಟುತ್ತಿದೆ. ವಿಭಿನ್ನ ಕಥೆ, ಛಾಯಾಗ್ರಹಣ, ಸಂಗೀತ ನಟನೆಯನ್ನು ಹೊಂದಿರುವ ನೈಜ್ಯ ಶೈಲಿಯಲ್ಲಿ ಸಿನಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಅತ್ಯದ್ಭುತವಾಗಿ ಕಂಡು ಬರುವ ಪಾತ್ರ ಶೇಖರ ಎಂಬ ಕಟ್ಟುಮಸ್ತು ದೇಹ ಹೊಂದಿರುವ ಯುವಕನ ಪಾತ್ರ. ಈ ಪಾತ್ರ ಸಿನಿಪ್ರಿಯರ ಗಮನ ಸೆಳೆದಿರುವುದು ಸುಳ್ಳಾಲ್ಲ. ಆ ಪಾತ್ರಕ್ಕೆ ಜೀವ ತುಂಬಿದವರು ಒಂದು ಹಳ್ಳಿ ಪ್ರತಿಭೆ ದೀಕ್ಷಿತ್ ಅಂಡಿಂಜೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ದಿ|ಸಂಜೀವ […]

ಮೂಡುಬಿದಿರೆ: ಇದು ಗೂಗಲ್ ಮಾಹಿತಿ ಸುನಾಮಿಯ ಕಾಲ, ಆದರೆ, ಶಿಕ್ಷಕರ ಸ್ಥಾನ ತುಂಬಲು ಗೂಗಲ್ ಗೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ನಮ್ಮ ತರಗತಿಯಲ್ಲಿ ಏಕೆ ಕುಳಿತುಕೊಳ್ಳಬೇಕು ಎಂದು ಶಿಕ್ಷಕರು ತಮ್ಮಲ್ಲಿ ಪ್ರಶ್ನಿಸಿಕೊಳ್ಳಬೇಕು. ಆಗ ತರಗತಿಯ ಎಲ್ಲ ವಿದ್ಯಾರ್ಥಿಗಳು ಬುದ್ಧಿವಂತರಾಗುತ್ತಾರೆ ಎಂದು ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ರಾಮಚಂದ್ರ ಸೆಟ್ಟಿ ಹೇಳಿದರು.ಆಳ್ವಾಸ್ ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ […]

ಮೂಡುಬಿದಿರೆ:ಹದಿನೆಂಟು ಮಾಗಣೆಗಳ ಒಡೆಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಾಲಯಕ್ಕೆ ಕೆ.ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಭೇಟಿ ನೀಡಿ,ದೇವಳದ ಜೀರ್ಣೋದ್ದಾರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು, ಜೊತೆಗೆ ಉತ್ತಮ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಮಂಗಳೂರು: ಡಾ. ದಾಮೋದರ ಗೌಡ ಕೆ.ಎಂ, ಫಿಸಿಯಾಲಜಿಯ ಆಸೋಸಿಯೇಟ್ ಪ್ರೊಫೆಸರ್, ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ನಿಟ್ಟೆ ವಿಶ್ವವಿದ್ಯಾಲಯ, ಅವರಿಗೆ ಇಂಡಿಯನ್ ಅಸೋಸಿಯೇಶನ್ ಆಫ್ ಬಯೋಮೆಡಿಕಲ್ ಸೈನ್ಟಿಸ್ಟ್ಸ್ (IABMS) ನ ಕಾರ್ಯನಿರ್ವಾಹಕ ಸಮಿತಿಯಿಂದ “ಫೆಲೋ” ಪದವಿಯನ್ನು 45ನೇ ವಾರ್ಷಿಕ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.ಈ ಸಮ್ಮೇಳನವು ಮಂಗಳೂರು ಎ.ಜೆ. ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಇನ್ಸ್ಟಿಟ್ಯೂಟ್ನಲ್ಲಿ ನಡೆಯಿತು.ಭಾರತದಾದ್ಯಂತ ಒಟ್ಟು ಆರು IABMS ಜೀವನ ಸದಸ್ಯರನ್ನು ಈ ಪದವಿಗಾಗಿ ಆಯ್ಕೆ ಮಾಡಲಾಯಿತು. ಬಯೋಮೆಡಿಕಲ್ ಸೈನ್ಸಸ್ ಕ್ಷೇತ್ರದಲ್ಲಿ ಸಂಶೋಧನಾ ಅನುಭವಗಳಲ್ಲಿ ಅತ್ಯುತ್ತಮ […]

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭ ಗ್ದಾಮಸ್ಥರು ಓಡಾಡುವ ಸಂಪರ್ಕ ರಸ್ತೆಯನ್ನು ಮುಚ್ಚದೆ ಗ್ರಾಮೀಣ ರಸ್ತೆಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಅಲ೦ಗಾರು ಪೋಯ್ಯೆದಪಲ್ಕೆ, ಕಾನ, ಅ೦ಬೂರಿ, ಮ೦ಜನಕಟ್ಟೆ,ಬೆಳುವಾಯಿ, ಗ್ರಾಮದ ಗ್ರಾಮಸ್ಥರು ಬುಧವಾರ ಪೋಯ್ಯದಪಲ್ಕೆ ಎಂಬಲ್ಲಿ ಪ್ರತಿಭಟನೆ ನಡೆಸಿದರು.ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಇಂತಹ ಫೈ ಓವರ್ಗಳ ಕಾಮಗಾರಿಗಳು ಜನರಿಗೆ ತೊಂದರೆಯಾಗುತ್ತಿವೆ. ಈ ಮಾರ್ಗಕ್ಕೆ ಅಂಡರ್ಪಾಸ್ ಮಾರ್ಗವನ್ನಾದರೂ ನಿರ್ಮಿಸಿ ಕೊಡಬೇಕು. ಸಂಪೂರ್ಣವಾಗಿ ಈ ರಸ್ತೆ ಮುಚ್ಚಬಾರದು. ಇಂತಹ ಅನ್ಯಾಯದ ವಿರುದ್ಧ ಹೋರಾಡಲು ಮೂಡುಬಿದಿರೆಯ ಜನತೆ […]

ಮೂಡುಬಿದಿರೆ: ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಸಖಿ ಒನ್ಸ್ಟಾಪ್ ಸೆಂಟರ್ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ಟೌನ್, ಇನ್ನರ್ವೀಲ್ ಕ್ಲಬ್ ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಲಿಂಗತ್ವಾಧಾರಿತ ದೌರ್ಜನ್ಯ ತಡೆ ಹಾಗೂ ಮಹಿಳಾ ಸಹಾಯವಾಣಿ ಕುರಿತು ಅರಿವು ಕಾರ್ಯಕ್ರಮವನ್ನು ಇನ್ನರ್ವೀಲ್ ಕ್ಲಬ್ನ ಅಧ್ಯಕ್ಷೆ ಬಿಂಧ್ಯಾ ಶರತ್ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಯಾದ ಸಖಿ ಒನ್ ಸ್ಟಾಪ್ ಸೆಂಟರ್ನ ಆಡಳಿತಾಧಿಕಾರಿ […]

ಮೂಡುಬಿದಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಂಗಳೂರು-ಮೂಡುಬಿದಿರೆ- ಕಾರ್ಕಳಕ್ಕೆ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಅನುಮೋದನೆ ದೊರಕಿ ಈಗಾಗಲೇ ಬಸ್ಸು ಸಂಚಾರ ಆರಂಭಗೊಂಡಿದ್ದು, ಇಂದು ಬೆಳಿಗ್ಗೆ ಮೂಡುಬಿದಿರೆ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹಚ್ಚಿ , ಹಸಿರು ನಿಶಾನೆ ಹಾರಿಸುವ ಮೂಲಕ ಸ್ವಾಗತಿಸಿ ಸಂಭ್ರಮ ಪಟ್ಟರು.ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಸ್ವಾಗತಿಸಿ ಮಾತನಾಡಿ, ರಾಮಲಿಂಗಾರೆಡ್ಡಿ, ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆಯನ್ನು ತಿಳಿಸಿದ ಅವರು […]

ಮೂಡುಬಿದಿರೆ: ತಾಲೂಕಿಗೆ ಸರಕಾರಿ ಬಸ್ಸು ಬೇಕೆಂದು ಇಲ್ಲಿನ ಜನರ ಬಹುಕಾಲದ ಬೇಡಿಕೆ. ಆದರೆ ಹಲವಾರು ವರುಷಗಳಿಂದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಭಾರತೀಯ ರೈತ ಸೇನೆಯು ಹಲವಾರು ಬಾರಿ ಮನವಿಯನ್ನು ಸಂಬAಧಪಟ್ಟ ಇಲಾಖೆಗೆ ನೀಡಿದರೂ ಸ್ಪಂದಿಸದೇ ಇದ್ದಾಗ ಕಾನೂನಾತ್ಮಕ ಹೋರಾಟವನ್ನು 04/03/2023 ರಂದು ಕರ್ನಾಟಕ ಲೋಕಾಯುಕ್ತ ನ್ಯಾಯಲಕ್ಕೆ ದೂರು ಅರ್ಜಿ ಸಲ್ಲಿಸಲಾಯಿತು. ಸದ್ರಿ ದೂರು ಅರ್ಜಿಯು ನ್ಯಾಯಾಲಯದ ಪ್ರಕರಣ ಸಂಖ್ಯೆ: LOK/MYS/10393/2023 ರಂತೆ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿರುವಾಗಲೇ […]