Category: Manglore

  • ನಿಡ್ಡೋಡಿ ಮಂಜನಬೈಲು ಪ್ರದೇಶದಲ್ಲಿ  ಮತ್ತೆ 400 KV ವಿದ್ಯುತ್ ಮಾರ್ಗ ಕಾಮಗಾರಿ ನಡೆಸಲು ಯತ್ನ- ಕಂಪೆನಿಯವರಿಗೆ ಖಡಕ್ ಎಚ್ಚರಿಕೆ ನೀಡಿದ ಸ್ಥಳೀಯರು

    ನಿಡ್ಡೋಡಿ ಮಂಜನಬೈಲು ಪ್ರದೇಶದಲ್ಲಿ  ಮತ್ತೆ 400 KV ವಿದ್ಯುತ್ ಮಾರ್ಗ ಕಾಮಗಾರಿ ನಡೆಸಲು ಯತ್ನ- ಕಂಪೆನಿಯವರಿಗೆ ಖಡಕ್ ಎಚ್ಚರಿಕೆ ನೀಡಿದ ಸ್ಥಳೀಯರು

    ಮೂಡುಬಿದಿರೆ: ಉಡುಪಿ -ಕಾಸರಗೋಡು 400 KV ವಿದ್ಯುತ್ ಮಾರ್ಗ ಕಾಮಗಾರಿ ನಡೆಸಲು UKTL -STERLITE ಕಂಪನಿಯವರು ಈ ದಿನ ಮತ್ತೆ ನಿಡ್ಡೋಡಿ ಮಂಜನಬೈಲು ಪ್ರದೇಶದ ಖಾಸಗಿ ಜಾಗಕ್ಕೆ  ಮಂಗಳೂರಿನಿಂದ ಕರೆದುಕೊಂಡು ಬಂದ ಪೊಲೀಸ್ ಸಿಬ್ಬಂದಿಯೊಂದಿಗೆ ಅತಿಕ್ರಮಣ ಪ್ರವೇಶ ಮಾಡಿದ್ದು, ಇದನ್ನು ಪ್ರಶ್ನಿಸಿ ವಿರೋಧ ವ್ಯಕ್ತಪಡಿಸಿದ ಭೂಮಾಲಕರು ಮತ್ತು ಸ್ಥಳೀಯ ಜನರೊಂದಿಗೆ ಅಮಾನವೀಯ ರೀತಿಯಲ್ಲಿ ವರ್ತಿಸಿದ ಕಂಪನಿಯವರನ್ನು ಕಾಮಗಾರಿ ನಡೆಸದಂತೆ ತಡೆಯಲಾಯಿತು.ಈ ಸಂದರ್ಭದಲ್ಲಿ ಮೂಡಬಿದ್ರೆ ಪೊಲೀಸ್ ವೃತ್ತ ನಿರೀಕ್ಷಕರು ಸ್ಥಳಕ್ಕೆ ಆಗಮಿಸಿ ಕಂಪನಿಯವರಿಗೆ ಕಾನೂನು ರೀತಿಯಾಗಿ ಮುಂದುವರಿಯುವಂತೆ ಎಚ್ಚರಿಕೆ […]

    Continue Reading

  • ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ೭೬ ನೇ ಗಣರಾಜ್ಯೋತ್ಸವ ಆಚರಣೆ

    ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ೭೬ ನೇ ಗಣರಾಜ್ಯೋತ್ಸವ ಆಚರಣೆ

    ಮೂಡುಬಿದಿರೆ :ದೇಶ ಇಂದು ಜಾಗತಿಕ ಮಟ್ಟದಲ್ಲಿ ಎತ್ತರಕ್ಕೆ ಬೆಳೆಯುತ್ತಿದೆ. ನಮ್ಮ ದೇಶದ ಸಂವಿಧಾನವು ಅತ್ಯುನ್ನತವಾದುದು ಆದ್ದರಿಂದ ದೇಶ ಮತ್ತು ಸಂವಿಧಾನವನ್ನು ಗೌರವಿಸೋಣ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮೂಡುಬಿದಿರೆ ಇದರ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ೭೬ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಪಥಸಂಚಲನದ ಗೌರವ ರಕ್ಷೆಯನ್ನು ಸ್ವೀಕರಿಸಿ ಮಾತನಾಡಿದರು.ಮೂಡುಬಿದಿರೆಯಲ್ಲಿ ೭೭ ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಮನೆಗೆ ಶುದ್ಧ ಕುಡಿಯುವ ನೀರು ಯೋಜನೆಯ ಕಾಮಗಾರಿಯು ಪ್ರಗತಿಯಲ್ಲಿದೆ. ೪.೫ಕೋಟಿ […]

    Continue Reading

  • 22 ನೇ ವರುಷದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

    22 ನೇ ವರುಷದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

    ವಾಸ್ತು ತಜ್ಞ, ಚಂದ್ರಶೇಖರ ಸ್ವಾಮೀಜಿಯವರಿಗೆ ರಾಜ್ಯಮಟ್ಟದ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮೂಡುಬಿದಿರೆ: ಇಲ್ಲಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಶನಿವಾರ ನಡೆದ ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಆಧ್ಯಾತ್ಮಿಕ ಗುರು ಅಂತರಾಷ್ಟ್ರೀಯ ವಾಸ್ತು ತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ, ಅವರಿಗೆ ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ […]

    Continue Reading

  • ಹೆಣ್ಣು ಮಗುವಿಗೂ ಕೂಡ ಗಂಡು ಮಗುವಿನಷ್ಟೇ ಪ್ರಾಮುಖ್ಯತೆ ನೀಡಿ-ಐ.ಸಿ.ಡಿ.ಎಸ್‌ನ ಮೇಲ್ವಿಚಾರಕಿ ಶುಭ

    ಹೆಣ್ಣು ಮಗುವಿಗೂ ಕೂಡ ಗಂಡು ಮಗುವಿನಷ್ಟೇ ಪ್ರಾಮುಖ್ಯತೆ ನೀಡಿ-ಐ.ಸಿ.ಡಿ.ಎಸ್‌ನ ಮೇಲ್ವಿಚಾರಕಿ ಶುಭ

    ಮೂಡುಬಿದಿರೆ: ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆಯು ಶುಕ್ರವಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು.ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆಯ ಕುರಿತು ಮಾತನಾಡಿದ ಮೂಡುಬಿದಿರೆ ಹಾಗೂ ಕಲ್ಲಮುಂಡ್ಕೂರು ವಲಯದ ಐ.ಸಿ.ಡಿ.ಎಸ್‌ನ ಮೇಲ್ವಿಚಾರಕಿ ಶುಭ, ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿದಿನ ಹೆಣ್ಣು ಮಕ್ಕಳ ದಿನವನ್ನು ಆಚರಿಸುವಂತಾಗಬೇಕೆAದ ಅವರು ಹೆಣ್ಣು ಮಕ್ಕಳು ಇಂದು […]

    Continue Reading

  • ಮಹಿಳೆ ಮೇಲೆ ಹಲ್ಲೆ ಬಸ್ ಕಂಡಕ್ಟರ್ ಬಂಧನ

    ಮಹಿಳೆ ಮೇಲೆ ಹಲ್ಲೆ ಬಸ್ ಕಂಡಕ್ಟರ್ ಬಂಧನ

    ಮೂಡುಬಿದಿರೆ : ಬಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಸಮೀಪದ ನೀರುಡೆಯಲ್ಲಿ ಮಹಿಳೆಯೊಬ್ಬರ ಕಪಾಳಕ್ಕೆ ಹೊಡೆದ ಆರೋಪದ ಮೇರೆಗೆ ಬಸ್‌ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಬಂಧಿತ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಮುಚೂರಿನಿಂದ ಸುಮಾರು 15 ಮಂದಿ ಮಹಿಳೆಯರು ಪುತ್ತಿಗೆಯಲ್ಲಿರುವ ಆಳ್ವಾಸ್ ಹಾಸ್ಟೆಲ್ ಗೆ ಶಾಲೊಮ್ ಬಸ್‌ ನಲ್ಲಿ ನಿತ್ಯ ಕೆಲಸಕ್ಕೆ ಬರುತ್ತಿದ್ದರು. ಕೆಲವೊಮ್ಮೆ ಕೆಲಸ ಬೇಗ ಮುಗಿದರೆ ಬೇರೆ ಬಸ್ಸಿನಲ್ಲಿ ಊರಿಗೆ ವಾಪಾಸಾಗುತ್ತಿದ್ದರು. ಪ್ರತಿ ದಿನ ಇದೇ ಬಸ್ಸಿನಲ್ಲಿ […]

    Continue Reading

  • ಮೂಡುಬಿದಿರೆ ಮಸೀದಿ ಬಳಿ ಕುಡಿಯುವ ನೀರಿನ ಘಟಕ ಉದ್ಘಾಟನೆ

    ಮೂಡುಬಿದಿರೆ ಮಸೀದಿ ಬಳಿ ಕುಡಿಯುವ ನೀರಿನ ಘಟಕ ಉದ್ಘಾಟನೆ

    ಮೂಡುಬಿದಿರೆ : ಇಲ್ಲಿನ ಜುಮ್ಮಾ ಮಸೀದಿ ಮತ್ತು ಇರುವೈಲ್ ರಸ್ತೆ ಅಂಗಡಿ ಮಾಲಕರ ಸಂಘದ ವತಿಯಿಂದ ನಿರ್ಮಿಸಲಾದ ಸಾರ್ವಜನಿಕ ಕುಡಿಯುವ ನೀರಿನ ಘಟಕವನ್ನು ಮೂಡುಬಿದಿರೆ ಟೌನ್ ಜುಮ್ಮಾ ಮಸೀದಿಯ ಖತೀಬರಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿ ಅವರು ಶುಕ್ರವಾರ ಮಧ್ಯಾಹ್ನ ಉದ್ಘಾಟಿಸಿದರು.     ಮಸೀದಿ ಕಮಿಟಿ ಅಧ್ಯಕ್ಷ ಅಬ್ದುರ್ರಹ್ಮಾನ್, ಕಾರ್ಯದರ್ಶಿ ಮುಹಮ್ಮದ್ ನದೀಮ್, ಜತೆ ಕಾರ್ಯದರ್ಶಿ ಪಿ.ಎಚ್.ಮುಹಮ್ಮದ್ ಹುಸೈನ್, ಪುರಸಭಾ ಸದಸ್ಯ ಇಕ್ಬಾಲ್ ಕರೀಮ್,ಅಂಗಡಿ ಮಾಲಕರಾದ ಶಿವಾನಂದ ಪ್ರಭು,ಸನತ್ ಜೈನ್,ಬದ್ರುದ್ದೀನ್, ಹನೀಫ್ ರಹ್ಮಾನಿಯಾ,ಬಶೀರ್,ಮಹೇಶ್,ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    Continue Reading

  • ತಂಡ್ರಕೆರೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿ

    ತಂಡ್ರಕೆರೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿ

    ಮೂಡುಬಿದಿರೆ: ತಾಲೂಕಿನ ಪಡುಮಾರ್ನಾಡು ಗ್ರಾಮದ ತಂಡ್ರಕೆರೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಜನವರಿ 18 ರಂದು ಗ್ರಾಮೀಣ ಸೌಲಭ್ಯಗಳ ವಿಶೇಷ ಮಾಹಿತಿಯನ್ನು ನೀಡಲಾಯಿತು. ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಭಾಗವಹಿಸಿ ಮಾತನಾಡಿಸರ್ಕಾರದಿಂದ ದೊರಕುವ ಹಲವಾರು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಹಾಗೂ ಮನೆಯವರ ಅಭಿವೃದ್ಧಿ ಮಾಡಿಕೊಳ್ಳಲು ವಿನಂತಿಸಿದರು. ಪರಿಸರವನ್ನು ಶುದ್ಧವಾಗಿ, ಸ್ವಚ್ಛವಾಗಿ ಇಡುವುದರಿಂದ ಆಗುವ ಹಲವಾರು ಆರೋಗ್ಯ ಕರ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು. ಮುಖ್ಯ […]

    Continue Reading

  • ತಾಲೂಕಿನ 334 ಫಲಾನುಭವಿಗಳಿಗೆ 94C 94CC ಹಕ್ಕುಪತ್ರ ವಿತರಣೆ

    ತಾಲೂಕಿನ 334 ಫಲಾನುಭವಿಗಳಿಗೆ 94C 94CC ಹಕ್ಕುಪತ್ರ ವಿತರಣೆ

    ಮೂಡುಬಿದಿರೆ: ದೇವರಾಜ ಅರಸು ಕಾಲದಲ್ಲಿ ಜಾರಿಗೆ ಬಂದ ಭೂ ಮಸೂದೆಯನ್ನು ಪರಿಣಾಮ ಅನುಷ್ಠಾನಗೊಳಿಸಿದ್ದರಿಂದ ಪರಿಣಾಮವಾಗಿ ಗೇಣಿದಾರರು ಸ್ವಂತ ಹಿಡುವಳಿ ದಾರರಾದದ್ದು ಕ್ರಾಂತಿಕಾರಿ ಬದಲಾವಣೆ ಆದರೆ, ಯಾವುದೇ ಭೂಮಿ ಇಲ್ಲದೆ ಸರಕಾರಿ ಜಮೀನಿನಲ್ಲಿ ಮನೆಕಟ್ಟಿ ಕುಳಿತಮಗೆ ನಿವೇಶನದ ಹಕ್ಕುಪತ್ರ ನೀಡುವ ಪ್ರಕ್ರಿಯೆ ನಡೆಯ ತೊಡಗಿದ ಬಳಿಕ ಸ್ವಂತದ್ದಾದ ನಿವೇಶನದಲ್ಲಿ ಮನೆಕಟ್ಟಿ ವಾಸವಾಗುವ ಕನಸು ನನಸಾಗತೊಡಗಿದೆ. ಈ ದಿಸೆಯಲ್ಲಿ ಜನಪ್ರತಿನಿಧಿಗಳ ಜತೆಗೆ ಕಂದಾಯ ಅಧಿಕಾರಿಗಳು, ಸಿಬಂದಿಗಳ ಸಹಕಾರ ಶ್ಲಾಘನೀಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು […]

    Continue Reading

  • ಕಂದಾಯ ದಾಖಲೆ ಗಣಕೀಕರಣ ವ್ಯವಸ್ಥಾ ಪ್ರಕ್ರಿಯೆ ಉದ್ಘಾಟನೆ

    ಕಂದಾಯ ದಾಖಲೆ ಗಣಕೀಕರಣ ವ್ಯವಸ್ಥಾ ಪ್ರಕ್ರಿಯೆ ಉದ್ಘಾಟನೆ

    ಮೂಡುಬಿದರೆ: ತಾಲೂಕಿನ ಪ್ರತಿಯೊಬ್ಬರ ಭೂ ಸಂಬಂಧ ದಾಖಲೆಗಳು ನಾಶವಾಗಬಾರದು, ಸ್ಥಳಾವಕಾಶದ ಕೊರತೆಯಿಂದ ಹಾಳಾಗಬಾರದು ಎನ್ನುವ ದೃಷ್ಟಿಯಿಂದ ಸರಕಾರದ ಯೋಜನೆಯಂತೆ ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದೆ. ಆ ಪ್ರಕಾರದಲ್ಲಿ ಪ್ರತಿಯೊಬ್ಬರ ಆರ್ ಟಿ ಸಿ, ಮ್ಯುಟೇಶನ್ ಇತ್ಯಾದಿ ಎಲ್ಲಾ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ ಸಂಗ್ರಹಿಸಿ ಇಡುವ ವ್ಯವಸ್ಥೆಯನ್ನು ಎರಡು ಮೂರು ತಿಂಗಳಲ್ಲಿ ಸಂಪೂರ್ಣ ಗೊಳಿಸಲಾಗುವುದು ಎಂದು ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದರು.ಅವರು ಬುಧವಾರ  ತಾಲೂಕು ಕಚೇರಿಯ ಭೂ ಸುರಕ್ಷಾ ಯೋಜನೆ ಅಡಿ ಅಭಿಲೇಖಾಲಯದ ಕಂದಾಯ ದಾಖಲೆ ಗಣಕೀಕರಣಗೊಳಿಸುವ […]

    Continue Reading

  • ನಡ್ಯೋಡಿದ ನಂದಲ ತುಳು ಭಕ್ತಿ ಸುಗಿಪು ಅತೀ ಶೀಘ್ರದಲ್ಲಿ ನಿಮ್ಮ‌ಎಮ್ ಡಿಬಿ ಯೂಟ್ಯೂಬ್ ಚಾನೆಲ್

    ನಡ್ಯೋಡಿದ ನಂದಲ ತುಳು ಭಕ್ತಿ ಸುಗಿಪು ಅತೀ ಶೀಘ್ರದಲ್ಲಿ ನಿಮ್ಮ‌ಎಮ್ ಡಿಬಿ ಯೂಟ್ಯೂಬ್ ಚಾನೆಲ್

    ನಡ್ಯೋಡಿದ ನಂದಲ ತುಳು ಭಕ್ತಿ ಸುಗಿಪು ಅತೀ ಶೀಘ್ರದಲ್ಲಿ ನಿಮ್ಮ‌ಎಮ್ ಡಿಬಿ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

    Continue Reading