



ಮೂಡುಬಿದಿರೆ: ಮಹಿಷಮರ್ಧಿನಿ ಕಂಬಳ ಸಮಿತಿಯ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಶನಿವಾರ ಬೆಳಿಗ್ಗೆ ಆರಂಭಗೊಂಡಿತು. ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಪರಿಸರದ ವಿವಿಧ ದೈವಸ್ಥಾನ, ದೇವಸ್ಥಾನಗಳ ಪ್ರಸಾದವನ್ನು ಕಂಬಳದ ಕೆರೆಗೆ ಸಂಪ್ರೋಕ್ಷಣೆಗೈದು ನಂತರ ದೀಪ ಬೆಳಗಿಸಿ ಕಂಬಳಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವೀರ ವಿಕ್ರಮ ಕಂಬಳಕ್ಕೆ ಅದರದ್ದೇ ಆದ ಇತಿಹಾಸವಿದೆ. ತುಳುನಾಡಿನ ಸಂಸ್ಕೃತಿ ಮತ್ತು ಶ್ರೀಮಂತಿಕೆಯನ್ನು ಜಗಜ್ಜಾಹೀರುಗೊಳಿಸಿ ವಿಸ್ತಾರ ಮಾಡುವ ಕ್ರೀಡೆ. […]

ಮೂಡುಬಿದಿರೆ: ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ಐಕಳ ಪಂಚಾಯತ್ ವ್ಯಾಪ್ತಿಯ ದಾಮಸ್ಕಟ್ಟೆಯಿಂದ ಪಟ್ಟೆಕ್ರಾಸ್ ವರೆಗೆ ರಸ್ತೆ ಅಗಲೀಕರಣಕ್ಕೆ ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಬುಧವಾರ ಶಿಲಾನ್ಯಾಸ ನೆರವೇರಿಸಿದರು .ನಂತರ ಮಾತನಾಡಿದ ಕೋಟ್ಯಾನ್ ಅವರು ಮೂರುಕಾವೇರಿಯಿಂದ ದಾಮಸ್ಕಟ್ಟೆವರೆಗೆ ರಸ್ತೆ ಅಗಲೀಕರಣಗೊಂಡಿದ್ದು, ದಾಮಸ್ಕಟ್ಟೆಯಿಂದ ಪಟ್ಟೆ ಕ್ರಾಸ್ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿತ್ತು ಈ ಕಾರಣದಿಂದ ಈ ಹಿಂದಿನ ಸರಕಾರವಿದ್ದ ಸಂದರ್ಭ ಈ ರಸ್ತೆಗೆ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.ಗ್ರಾಮೀಣ ಭಾಗವಾದ ಈ ಪ್ರದೇಶದಲ್ಲಿ ಕಳೆದ ಸರಕಾರವಿದ್ದ […]

ಮೂಡುಬಿದಿರೆ: ಗೋ ಸೇವಾ ಗತಿನಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಪ್ರತಿಷ್ಠಾನವು ರಾಜ್ಯಾದ್ಯಂತ ನಂದಿ ರಥಯಾತ್ರೆ ಆಯೋಜಿಸಿದ್ದು ಬುಧವಾರ ಸಂಜೆ ಮೂಡುಬಿದಿರೆಗೆ ಆಗಮಿಸಿತು. ಸ್ವರಾಜ್ಯ ಮೈದಾನ ಬಳಿ ಶಾಸಕ ಉಮಾನಾಥ ಕೋಟ್ಯಾನ ರಥಕ್ಕೆ ಆರತಿ ಬೆಳಗಿ ಸ್ವಾಗತಿಸಿದರು. ಬಳಿಕ ಚೆಂಡುವಾದನ ಕುಣಿತ ಭಜನೆಯೊಂದಿಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದವರೆಗೆ ಶೋಭಾಯಾತ್ರೆ ನಡೆಯಿತು.ರಾತ್ರಿ ನಂದಿಪೂಜೆ ವಿಷ್ಣು ಸಹಸ್ರನಾಮ ಪಠಣ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮ ದಲ್ಲಿ ಆಶೀರ್ವಚನ ನೀಡಿದ ಜೈನಮಠದ ಸ್ಚಸ್ತಿಶ್ರೀ ಭಟ್ಟಾರಕ […]

ಮೂಡುಬಿದಿರೆ: ತಾಲೂಕಿನ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದಲ್ಲಿ ಜನವರಿ ೨೫ರಂದು ೨೨ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳ ನಡೆಯಲಿದೆ. ಈ ಬಾರಿಯ ಕಂಬಳದಲ್ಲಿ ತುಳುನಾಡಿನ ವಿವಿಧ ಕ್ಷೇತ್ರದ ಸಾಧಕರನ್ನು ರಾಜ್ಯಮಟ್ಟದ ವೀರರಾಣಿ ಅಬ್ಬಕ್ಕ ಪ್ರಶಸ್ತಿಯನ್ನು ನೀಡಿ ಗೌರವಿಸುವುದೆಂದು ತೀರ್ಮಾನಿಸಲಾಗಿದ್ದು, ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲ್ಕಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಶಾಸಕ, ಮೂಡುಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ತಿಳಿಸಿದರು.ಅವರು ಒಂಟಿಕಟ್ಟೆಯ ಸೃಷ್ಟಿ ಗಾರ್ಡನ್ ಸಭಾಭವನದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ […]

ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಡಿ 26ರಿಂದ 30ರವರೆಗೆ ನಡೆದ 84ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷ ಹಾಗೂ ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿ ತಂಡವು ರಾಷ್ಟ್ರೀಯ ಮಟ್ಟದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಕೊಡುಗೆಯಿಂದ ಸತತ 8ನೇ ಬಾರಿಯು ಸಮಗ್ರ ಚಾಂಪಿಯನ್ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ತಿಳಿಸಿದರು.ಅವರು ಮಂಗಳವಾರ ತಮ್ಮ […]

ಕಟೀಲು: ತುಳುನಾಡಿನಲ್ಲಿ ಜಾತಿ ಮತ ಭಾಷೆ ಭೇದವಿಲ್ಲದೆ ಸರ್ವರನ್ನು ಅನುಗ್ರಹಿಸುವವಳು ಕಟೀಲ ಉಳ್ಳಾಲ್ತಿ ಶ್ರೀ ದುರ್ಗಾಪರಮೇಶ್ವರಿ ತಾಯಿ. ತುಳುನಾಡಿನಲ್ಲಿ ಪಂಗಡ ಬೇದ ಭಾವವಿಲ್ಲದೆ ಒಗ್ಗೂಡಿಸುವ ಮನೋಭಾವದಿಂದ ತುಳುವರ್ಲ್ಡ್ ಫೌಂಡೇಶನ್ ಕಟೀಲಿನ ಈ ಪುಣ್ಯ ನೆಲದಲ್ಲಿ ಪ್ರವರ್ತನ ಆರಂಭಿಸಿರುವುದು ಮಹಾತಾಯಿಯ ಅನುಗ್ರಹ. ನಮ್ಮ ನಡುವೆ ಇರುವ ವಿಭಜನೆಗಳ ಹಿಂದಿರುವ ಕಟ್ಟುಕಥೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಯಬೇಕು ಹಾಗೂ ಸತ್ಯ ಅಸತ್ಯಗಳ ಬಗ್ಗೆ ಮನವರಿಕೆ ಮಾಡುವ ಕೆಲಸ ಆಗಬೇಕು ಎಂದು ತುಳುವರ್ಲ್ಡ್ ಫೌಂಡೇಶನ್ ಗೌರವಾಧ್ಯಕ್ಷ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ […]

ಮೂಡುಬಿದಿರೆ: ‘ಆಧುನಿಕ ಜಗತ್ತಿನಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ’ ಎಂದು ಭಾರತ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್ ಹೇಳಿದರು.ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ಮಂಗಳವಾರ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಕಳೆದ ಹಲವು ದಶಕಗಳಿಂದ ಅಸಾಂಕ್ರಾಮಿಕ ರೋಗಗಳು ಇಡೀ ಜಗತ್ತಿನಲ್ಲಿ ವ್ಯಾಪಕವಾಗಿ ಹರಡುತ್ತಿರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ಯೋಗ ಮತ್ತು ಪ್ರಕೃತಿ […]

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ.ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ ಪಡೆದು ಅಂತಿಮ ನಮನ ಸಲ್ಲಿಸಿದರು. ಬೀಜಾಡಿ ಪಡು ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ನಡೆದಿದೆ. ಬೀಜಾಡಿ ಕಡಲ ಕಿನಾರೆಯಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ […]

ಮೂಡುಬಿದಿರೆ : ಮೂಡುಬಿದಿರೆ ತಾಲೂಕು ಕೇಂದ್ರವಾದರೂ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲ. ದಂತ ವೈದ್ಯರೇ ಸದ್ಯಕ್ಕೆ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ.ಆದರೆ ಅವರಿಂದ ಎಲ್ಲವೂ ಸಾಧ್ಯವಿಲ್ಲ.ಬಡ ಜನರಿಗೆ ಸೇವೆ ಒದಗಿಸಬೇಕಾದ ಈ ಸರಕಾರಿ ಆಸ್ಪತ್ರೆಯಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದು ನಮಗೆ ನಾಚಿಕೆಗೇಡು, ಈ ಬಗ್ಗೆ ತಕ್ಷಣ ನಿರ್ಣಯ ಕೈಗೊಂಡು ಆರೋಗ್ಯ ಸಚಿವರು,ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ಪೂರ್ಣಕಾಲಿಕ ವೈದ್ಯರ ನೇಮಕಾತಿಗೆ ಆಗ್ರಹಿಸಬೇಕೆಂದು ಪುರಸಭಾ ಸದಸ್ಯ ಕೊರಗಪ್ಪ ಅವರು ಮಂಗಳವಾರ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಆಗ್ರಹಿಸಿದ್ದಾರೆ.ಪುರಸಭಾ […]

ಮೂಡುಬಿದಿರೆ: ಪ್ರಾಚೀನ ಮತ್ತು ಆಧುನಿಕ ವೈದ್ಯಕೀಯ ಪದ್ಧತಿಗಳಲ್ಲಿ ಹೃದಯಕ್ಕೆ ಕೇಂದ್ರ ಸ್ಥಾನವನ್ನು ನೀಡಲಾಗಿದೆ ಎಂದು ಆಳ್ವಾಸ್ ಫಾರ್ಮಾಸಿ ಕಾಲೇಜಿನ ಪ್ರಾಂಶುಪಾಲ ಡಾ. ಎಮ್. ಮಂಜುನಾಥ್ ಸೆಟ್ಟಿ ಹೇಳಿದರು.ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜುವತಿಯಿಂದ ಶನಿವಾರ ನಡೆದ ‘ಜ್ಞಾನಚಕ್ಷು-2024′- ‘ಈಸಿಜಿಯ ಮೂಲಭೂತ ಅಂಶಗಳು ಹಾಗೂ ಅದರ ವ್ಯಾಖ್ಯಾನಗಳು’ ವಿಷಯದ ರಾಷ್ಟ್ರ ಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು.ಆಯುರ್ವೇದದಲ್ಲಿ ಹೃದಯವನ್ನು ಪ್ರಜ್ಞೆ ಮತ್ತು ಜೀವಿಯ ಪ್ರಮುಖ ಅಂಗವೆಂದು ಪರಿಗಣಿಸಲಾಗಿದೆ. ಆಯುರ್ವೇದ ತಜ್ಞರಿಗೆ ಹೃದಯದ ಬಗ್ಗೆ ಹೆಚ್ಚಿನ ಜ್ಞಾನಗಳಿಸಲು ಎಲೆಕ್ಟ್ರೋಕಾರ್ಡಿಯೋಗ್ರಫಿ ಅಥವಾ ಇಸಿಜಿ ಉಪಯುಕ್ತವಾಗಿದೆ. 1901ರಲ್ಲಿ […]