



ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿವಲಯ ಮತ್ತು ಭಾರತೀಯ ಕಥೊಲಿಕ ಯುವ ಸಂಚಲನ ಗಂಟಾಲ್ಕಟ್ಟೆ ಘಟಕ ಇದರ ಸಹಯೋಗದೊಂದಿಗೆ ಮೂಡಬಿದ್ರಿ ವಲಯದ ಯುವ ಜನರಿಗೆ ಒಂದು ದಿನದ ಮಾಹಿತಿ ಕಾರ್ಯಗಾರ “ಯವ ಎಕ್ತಾರ್ 2024” ಎಂಬ ಸಮಾಲೋಚನೆ ಸಭೆಯನ್ನು ಗಂಟಾಲ್ಕಟ್ಟೆಯ ನಿತ್ಯ ಸಹಾಯ ಮಾತ ಇಗರ್ಜಿಯ ಸಭಾಭವನದಲ್ಲಿ ದಿನಾಂಕ 11-08-2024 ರಂದು ನಡೆಯಿತು. ಬೆಳಗಿನ ಜಾವ ಕಾರ್ಯಕ್ರಮವನ್ನು ಮೂಡಬಿದ್ರಿ ವಲಯದ ವಿಗಾರ್ಜನರಲ್ ಹಾಗೂ ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿ ವಲಯದ ನಿರ್ದೇಶಕರಾದ ಅತಿವಂದನೀಯ ಫಾದರ್ ಒನಿಲ್ ಡಿಸೋಜಾಉದ್ಘಾಟಿಸಿದರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿತ್ಯ ಸಹಾಯಮಾತ ಇಗರ್ಜಿ ಗಂಟಾಲ್ಕಟ್ಟೆಯ ಧರ್ಮಗುರುಗಳಾದ ಫಾದರ್ ರೊನಾಲ್ಡ್ ಡಿಸೋಜಾಆಗಮಿಸಿ ನೆರೆದಿರುವ ಯುವಜನರನ್ನು ಉದ್ದೇಶಿಸಿ “ಯುವಜನರು ಮತ್ತು ಇಂದಿನ ಕ್ರೈಸ್ತ ಸಭೆ” ಎಂಬ […]

ಶಿರ್ತಾಡಿಯಲ್ಲಿ ಸ್ಥಾಪಿಸಲ್ಪಟ್ಟಿರುವ ಮೂಡುಬಿದಿರೆ ತಾಲೂಕಿನ ಪ್ರಪ್ರಥಮ ಕಾನೂನು ಕಾಲೇಜು “ಭುವನಜ್ಯೋತಿ” ಕಾನೂನು ಮಹಾವಿದ್ಯಾಲಯವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಹಾಗೂ ಆಂದ್ರಪ್ರದೇಶದ ರಾಜ್ಯಪಾಲರಾದ ಎಸ್.ಅಬ್ದುಲ್ ನಝೀರ್ ಅವರು ಇಂದು ಉದ್ಘಾಟಿಸಿದರು. ಹೈಕೋರ್ಟ್ ನ್ಯಾಯಾಧೀಶರಾದ ಕೃಷ್ಣ ಎಸ್.ದೀಕ್ಷಿತ್, ಕರ್ನಾಟಕ ರಾಜ್ಯ ಕಾನೂನು ವಿ.ವಿ.ಯ ಉಪಕುಲಪತಿ ಡಾ.ಸಿ.ಬಸವರಾಜು, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ವಿಶಾಲರಘು ಎಚ್.ಎಲ್ ಹಾಗೂ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ರವೀಂದ್ರ ಎಂ.ಜೋಶಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭುನವಜ್ಯೋತಿ ಟ್ರಸ್ಟ್ ನ ಕಾರ್ಯದರ್ಶಿ ಆರ್.ಪ್ರಶಾಂತ್ […]

ಕೆಲ್ಲಪುತ್ತಿಗೆಯ ತೋಡಿನಲ್ಲಿ ಸತ್ತುಬಿದ್ದ ದನವನ್ನು ಮೇಲಕ್ಕೆತ್ತಿ ದಫನ ಮಾಡಲು ಸಹಕರಿಸಿದ ವಾಲ್ಪಾಡಿ, ಮಕ್ಕಿಯ ಯುವಕರು!ಕೆಲ್ಲಪುತ್ತಿಗೆಯ ತೋಡೊಂದರಲ್ಲಿ ದನವೊಂದು ಸತ್ತುಬಿದ್ದು ದುರ್ನಾತ ಬೀರುತ್ತಿತ್ತು.ಮೇಯಲು ಬಿಟ್ಟಿದ್ದ ಆ ದನವು ಇತ್ತೀಚಿನ ಜೋರಾದ ಮಳೆಗೆ ತೋಡಿನಲ್ಲಿ ಕೊಚ್ಚಿಕೊಂಡು ಹೋಗಿ ಮೇಲಕ್ಕೆ ಬರಲಾಗದೆ ಅಲ್ಲೇ ಕೊನೆಯುಸಿರೆಳೆದಿತ್ತು.ಸತ್ತು ಕೆಲವು ದಿನಗಳಾಗಿದ್ದರಿಂದ ದುರ್ನಾತ ಎದ್ದು ಯಾರೂ ಅದರ ಬಳಿ ಹೋಗಿರಲಿಲ್ಲ.ತೀರಾ ದುರ್ನಾತದಿಂದಾಗಿ ಯಾರು ಕೂಡಾ ಅದನ್ನು ಮೇಲಕ್ಕೆತ್ತಿ ದಫನ ಮಾಡಲು ಹೋಗಿರಲಿಲ್ಲ.ಸಂಬಂಧಪಟ್ಟ ಇಲಾಖೆಯವರು ಸ್ಥಳಕ್ಕೆ ಹೋಗಿ ” ಕೂಡಲೇ ವ್ಯವಸ್ಥೆ ಮಾಡಿ” ಎಂದು ಸೂಚಿಸಿದ್ದಲ್ಲದೆ ಅದನ್ನು […]

ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಮತ್ತೆ ಮೂಡುಬಿದಿರೆಗೆ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಬಂದಿದ್ದರು.

ಸ್ಪಷ್ಟ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದಕ್ಕೆ ಉತ್ತಮ ನಿದರ್ಶನ ಎಕ್ಸಲೆಂಟ್ ಮೂಡುಬಿದಿರೆಯ ನಿಶಾಂತ್ ಪಿ ಹೆಗ್ಡೆಯ ಶೈಕ್ಷಣಿಕ ಸಾಧನೆ ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಏಕ ನಿಷ್ಠೆ ನಿರಂತರ ಹೊಸತನದ ಹುಡುಕಾಟ ಗುರಿಮುಟ್ಟುವಲ್ಲಿನ ಶ್ರದ್ಧೆ ವಿದ್ಯಾರ್ಥಿಗಿದ್ದರೆ ಆತನಿಗೆ ವಿದ್ಯೆ ಒಲಿಯುತ್ತದೆ. ಹೀಗೆ ನಿರಂತರ ಸಾಧನೆಯ ಮೂಲಕ ವಿದ್ಯಾರ್ಥಿ ಜೀವನದಲ್ಲಿ ಅಪೂರ್ವ ಯಶಸ್ಸನ್ನು ಪಡೆದ ವಿದ್ಯಾರ್ಥಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ನಿಶಾಂತ್ ಪಿ. ಹೆಗ್ಡೆ. ಪ್ರತಿಯೊಂದು ವಿದ್ಯಾರ್ಥಿಯ ಬಾಲ್ಯವು […]

ಮೂಡುಬಿದಿರೆ: ಜೀವಶಾಸ್ತçದ ಶಿಕ್ಷಕರು ಈ ಕಾಲಕ್ಕಾನುಗುಣವಾದ ಕೌಶಲ್ಯಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಯನ್ನು ಪೂರೈಸುವಲ್ಲಿ ಕರ್ಯಪ್ರವೃತ್ತರಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು.ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘದ ದಶಮನೋತ್ಸವದ ಹಿನ್ನಲೆಯಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತç ಉಪನ್ಯಾಸಕರ ಸಂಘ ಹಾಗೂ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚರ್ಯರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ‘’ಬಯೋದಶಕ, ಒಂದು ದಿನದ ಕರ್ಯಾಗಾರ’’ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು […]

ಮೂಡುಬಿದಿರೆ: ಬಹುಮುಖಿ ವ್ಯಕ್ತಿತ್ವವನ್ನು ಹೊಂದಿದ್ದ ಮನೋಹರ ಪ್ರಸಾದ್ ಅವರು ಅವರು ಪತ್ರಕರ್ತರಿಗಿಂತ ಹೆಚ್ಚಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಂತೆ ಜನಮಾನಸದಲ್ಲಿ ಬೆರೆತು ಹೋಗಿ ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್” ಆಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ಕಾಲೇಜಿನ ಆಳ್ವಾಸ್ […]

ಮೂಡುಬಿದಿರೆ: ಸಮಾಜದ ಭಾಗವಾಗಿ ಬದುಕುವ ನಾವು ಸಮಾಜಕ್ಕೆ ಕೊಡುಗೆ ನೀಡುವುದು ನಮ್ಮ ಕರ್ತವ್ಯವಾಗಿದೆ. ಮನುಷ್ಯನ ಮೂಲ ನಡವಳಿಕೆ ಬ೦ಡವಾಳಶಾಹಿ ಎ೦ದು ಹೇಳಲಾಗುತ್ತದೆ. ಆದರೆ ಕೇವಲ ಬ೦ಡವಾಳಶಾಹಿತನದಿ೦ದ ಸಮಾಜ ಉದ್ಧಾರ ಆಗುವುದಿಲ್ಲ ಎನ್ನುವುದನ್ನು ಪರಿಗಣಿಸಿ ಹತ್ತೊ೦ಭತ್ತನೇ ಶತಮಾನದಲ್ಲಿ ಕಲ್ಯಾಣ ರಾಜ್ಯದ ಪರಿಕಲ್ಪನೆ ಬ೦ತು. ಯಾವುದೇ ನಿರೀಕ್ಷೆ ಇಲ್ಲದೆ ಮಾಡುವ ಕೆಲಸವೇ ಸೇವೆ. ಸೇವೆ ಮಾಡುವುದರಿ೦ದ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎ೦ದು ವಿಶ್ರಾ೦ತ ಪ್ರಾ೦ಶುಪಾಲ ಡಾ ಪಾದೂರು ಸುದರ್ಶನ ಕುಮಾರ್ ಹೇಳಿದರು.ಅವರು ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ […]

ಮೂಡಬಿದ್ರೆ: ಆಗಸ್ಟ್ 06ಸಮಸ್ತ ವಿದ್ಯಾಭ್ಯಾಸ ಮಂಡಳಿಯಾದ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ ಇದರ ಸಿಲಬಸ್ ಪ್ರಕಾರ ಕಾರ್ಯಾಚರಿಸುವ ಎಲ್ಲಾ ಮದ್ರಸಗಳಲ್ಲಿ ನಾಳೆಯಿಂದ ತ್ರೈಮಾಸಿಕ ಪರೀಕ್ಷೆಯು ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಮೂಡುಬಿದ್ರೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಒಳಪಟ್ಟ ಎಲ್ಲಾ ಮದ್ರಸಗಳ ಪರೀಕ್ಷೆ ಪೇಪರ್ ವಿತರಣೆ ಹಿದಾಯತುಲ್ ಇಸ್ಲಾಂ ಮದ್ರಸ ಲಾಡಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಸಯ್ಯಿದ್ ಅಕ್ರಂ ಅಲಿ ತಂಙಳ್ ಅಂಗರಕರ್ಯ ಶರೀಫ್ ಅಝ್ಹರಿ ಇವರಿಗೆ ಪರೀಕ್ಷೆ ಪೇಪರ್ ವಿತರಿಸುವ ಮೂಲಕ […]

ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ. ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ ಅಹಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಂಜೆವೇಳೆ ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ, ಕೂಲಿ ಕೆಲಸ ಮಾಡಿಕೊಂಡಿದ್ದ ಅಹಮದ್ ಬಾವ […]