



ಮೂಡುಬಿದಿರೆ: ಸೋಮವಾರ ಮಧ್ಯಾಹ್ನ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಒಂದು ಬಲು ವಿಚಿತ್ರ ಘಟನೆ ನಡೆದಿದ್ದು, ಪರಿಚಿತನಂತೆ ನಟಿಸಿದ ವ್ಯಕ್ತಿಯೊಬ್ಬ ಮಹಿಳೆಯ ಮೂರೂವರೆ ಪವನಿನ ಚಿನ್ನದ ಸರವನ್ನು ದೋಚಿದ ಘಟನೆ ನಡೆದಿದೆ. ಮಧ್ಯ ವಯಸ್ಸಿನ ಮಹಿಳೆ ನಾರಾವಿಯಿಂದ ಬಸ್ನಲ್ಲಿ ಬಂದು, ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ಬಸ್ ನಿಲ್ದಾಣದಲ್ಲಿ ಇಳಿದು ಬರುತ್ತಿದ್ದಾಗ, ಒಬ್ಬ ವ್ಯಕ್ತಿ ಆಕೆಯ ಬಳಿ ಬಂದು “ಚಿಕ್ಕಮ್ಮ” ಎಂದು ಕರೆದು ತನ್ನನ್ನು ಪರಿಚಯಿಸಿಕೊಂಡ. ಮಹಿಳೆ ಅವರನ್ನು ಪರಿಚಿತನಲ್ಲವೆಂದು ತೋರಿ, ಆಕೆಯ ಮನೆಯವರ ಪರಿಚಯವನ್ನೆಲ್ಲಾ ವಿವರಿಸಿದ. […]

ಪಾಲಡ್ಕ: ಇತ್ತೀಚೆಗೆ ಉಂಟಾದ ಭಾರೀ ಮಳೆಯಿಂದಾಗಿ ಪಾಲಡ್ಕ – ಕಲ್ಲಮುಂಡ್ಕೂರು ಸಂಪರ್ಕ ರಸ್ತೆ ಗುಂಡ್ಯಡ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಪರಿಣಾಮವಾಗಿ ಬೃಹತ್ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳ ಪರಿಶೀಲನೆಯ ವೇಳೆ, ಶಾಸಕರು ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಕೇಳಿ, ಅಪಾಯದ ತಕ್ಷಣ ನಿರ್ವಹಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅವರು ಪರಿಸ್ಥಿತಿಯನ್ನು ಸಮೀಪದಿಂದ […]

ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಇದರ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಜೀವಸಾರ್ಥಕತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಇವುಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ, ಚಿತ್ರಕಲಾ ಸ್ಪರ್ಧೆ, ಅಂಗಾಂಗ ದಾನ ಮಾಹಿತಿ ಮತ್ತು ನೋಂದಾವಣೆ, ಸಹಾಯಧನ ವಿತರಣೆ, ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮವು ಆ.18ರಂದು ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ನೇತಾಜಿ ಬ್ರಿಗೇಡ್ ನ ಸ್ಥಾಪಕಾಧ್ಯಕ್ಷ ರಾಹುಲ್ ಕುಲಾಲ್ ತಿಳಿಸಿದ್ದಾರೆ. ಅವರು ಸೋಮವಾರ ಪ್ರೆಸ್ […]

ಮೂಡುಬಿದಿರೆ: ದರಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಪಿಲ ಮತ್ತು ಬೋರುಗುಡ್ಡೆ ಪ್ರದೇಶಗಳನ್ನು ಸಂಪರ್ಕಿಸುವ ಬಿರ್ಮೆರಬೈಲು ಸೇತುವೆ ಭಾರೀ ಮಳೆಯಿಂದಾಗಿ ಕೊಚ್ಚಿ ಹೋಗಿತ್ತು, ಇದರಿಂದಾಗಿ ಗ್ರಾಮಸ್ಥರಿಗೆ ಪ್ರಯಾಣದಲ್ಲಿ ತೊಂದರೆ ಉಂಟಾಗಿತ್ತು. ಈ ಸಮಸ್ಯೆಯನ್ನು ಪರಿಹರಿಸಲು, ಭಾನುವಾರ ಗ್ರಾಮಸ್ಥರು ತಾತ್ಕಾಲಿಕ ಸೇತುವೆ ನಿರ್ಮಿಸಿ ಗಮನ ಸೆಳೆದಿದ್ದಾರೆ. ಬಿರ್ಮೆರಬೈಲು ಸೇತುವೆ ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಅಡಿಕೆ ಮರಗಳನ್ನು ಬಳಸಿ, ಪಾದಚಾರಿಗಳಿಗೆ ಅನುಕೂಲವಾಗುವಂತೆ ತಾತ್ಕಾಲಿಕ ಕಿರು ಸೇತುವೆ ನಿರ್ಮಿಸಿದ್ದಾರೆ. ಈ ಕಾರ್ಯದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಮುನಿರಾಜ್ ಹೆಗ್ಡೆ, ದೀಕ್ಷಿತ್ ಪಣಪಿಲ, […]

ಮೂಡುಬಿದಿರೆ:ಭಾರೀ ಮಳೆಯಿಂದಾಗಿ ಗುಂಡ್ಯಡ್ಕದಲ್ಲಿ ಶನಿವಾರ ನಸುಕಿನ ಜಾವ ಗುಡ್ಡ ಕುಸಿದು ಪಾಲಡ್ಕ-ಕಲ್ಲಮುಂಡ್ಕೂರು ಸಂಪರ್ಕ ರಸ್ತೆ ಬಂದ್ ಆಗಿದೆ.ಸುದ್ದಿ ತಿಳಿದು ಪಾಲಡ್ಕ ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್ ಸಿಕ್ಷೇರಾ ಅವರು ಜೆಸಿಬಿ ತರಿಸಿ ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಸಂದರ್ಭ ಮತ್ತೆ ಗುಡ್ಡ ಜರಿದಿದೆ. ಗುಡ್ಡದಿಂದ ಮಣ್ಣು ಹಾಗೂ ಬಂಡೆಕಲ್ಲು ಸಮೇತ ಜಾರಿಬಿದ್ದರೂ ಬಂಡೆಕಲ್ಲು ಗುಡ್ಡದ ಅರ್ಧದಲ್ಲಿ ನಿಂತಿದ್ದರೆ ಮಣ್ಣು ಜೆಸಿಬಿ ಮೇಲೆ ಬಿದ್ದು ಜೆಸಿಬಿಯನ್ನು ಒಂದಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿತ್ತು. ಜೆಸಿಬಿ ಚಾಲಕ ಹಾಗೂ ಸಹಾಯಕ ಅಪಾಯದಿಂದ ಪಾರಾಗಿದ್ದಾರೆ. […]

ಮೂಡುಬಿದಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ತಾಲೂಕು ಇವುಗಳ ಸಹಭಾಗಿತ್ವದಲ್ಲಿ ಪ್ರಾಂತ್ಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಜನಜಾಗೃತಿ ತಾಲೂಕು ಉಪಾಧ್ಯಕ್ಷ ಪ್ರಸಾದ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮಂಗಳೂರು ಯುನಿವರ್ಸಿಟಿ ಉಪನ್ಯಾಸಕ ಡಾ.ಪ್ರಭಾಕರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.ಜನಜಾಗೃತಿ ವಲಯ ಅಧ್ಯಕ್ಷ ಜೋಸ್ಸಿ ಮೆನೇಜಸ್, ಪ್ರಾಂತ್ಯ ಶಾಲೆಯ ಮುಖ್ಯೋಪಾಧ್ಯಾಯ ರಾಮಚಂದ್ರ, ಪ್ರಗತಿ ಬಂಧು ಒಕ್ಕೂಟದ ವಲಯ ಅಧ್ಯಕ್ಷ ಅರುಣ್ ಶೆಟ್ಟಿ, […]

ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಪೊಲೀಸ್,ಅಗ್ನಿಶಾಮಕದಳ ಸಿಬ್ಬಂಧಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಮೂಡುಬಿದಿರೆ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬದವರಿಗೆ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಕುಟುಂಬದವರಿಗಾಗಿ ಮೂಡುಬಿದಿರೆಯ ಜೈನ್ ಮೆಡಿಕಲ್ ಸೆಂಟರ್ ನಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ಉದ್ಘಾಟಿಸಿದರು.ಡಾ.ಮಹಾವೀರ ಜೈನ್,ಡಾ.ಪ್ರಣಮ್ಯ ಜೈನ್,ಕ್ಲಬ್ ಅಧ್ಯಕ್ಷ ಪೂರ್ಣಚಂದ್ರ ಜೈನ್, ಕಾರ್ಯದರ್ಶಿ ಹರೀಶ್ ಎಂ.ಕೆ ಮತ್ತಿತರರು ಈ […]

ಮೂಡುಬಿದಿರೆ: ಗುರುವಾರ ಮುಂ ಸುರಿದ ಮಳೆಗೆ ಪುತ್ತಿಗೆ ಗ್ರಾ.ಪಂಚಾಯತ್ ವ್ಯಾಪ್ತಿಯ ಹಂಡೇಲಿನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ.ಹಂಡೇಲು- ಮುಂಡೇಲಿನ ಝೀನತ್ ಅವರ ಮನೆಗೆ ಗುಡ್ಡ ಕುಸಿದು, ಜಮೀಲ ಮತ್ತು ಅಸ್ಮತ್, ಜೈನಾಬು ಅವರ ಮನೆಗೆ ಮಣ್ಣು ಕುಸಿದು ಬಿದ್ದು ಹಾನಿಯಾಗಿದೆ.ಮೈಮೂನ, ಮೊಹಮ್ಮದ್, ಅಬ್ದುಲ್ ಹಮೀದ್, ಮುಂಡೇಲಿನ ಅಬೂಬಕ್ಕರ್,ಗಿಡ್ಡಬೆಟ್ಟು ಶಾರದಾ ಅವರ ಮನೆಯ ಕಂಪೌಂಡ್ ಕುಸಿದು ಬಿದ್ದು ಹಾನಿಯಾಗಿದೆ.ಹಾನಿಗೊಳಗಾಗಿರುವ ಸ್ಥಳಕ್ಕೆ ಪಂಚಾಯತ್ ಅಭಿವೃದ್ದಿ ಅಧಿಕಾರಿ ಭೀಮ ನಾಯಕ್ ಬಿ.ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಪಾಯದಲ್ಲಿರುವ ಕುಟುಂಬದವರಿಗೆ ಪುತ್ತಿಗೆ […]

ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ರಾಮ್ ಸುಳ್ಯ ತಿಳಿಸಿದರು.ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕರ್ಯಗಾರದಲ್ಲಿ ಮಾತನಾಡಿದರು.ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ […]

ಮೂಡುಬಿದಿರೆ: ಕೇರಳದ ವಯನಾಡಿನಲ್ಲಿ ನಡೆದ ದುರಂತದಲ್ಲಿ ತುರ್ತು ಕಾರ್ಯಾಚರಣೆ ಪೂರೈಸಿ ಹಿಂದಿರುಗಿದ ಭಾರತೀಯ ಮಿಲಿಟರಿ ಕಮಾಂಡರ್ಗಳಿಗೆ, ಮೂಡುಬಿದಿರೆಯ ಮೆಸ್ಕಾಂ ಅಧಿಕಾರಿಗಳು ಮತ್ತು ವಿದ್ಯುತ್ ಗುತ್ತಿಗೆದಾರರು ಶುಕ್ರವಾರ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್, ತಾಂತ್ರಿಕ ವಿಭಾಗದ ಸಹಾಯಕ ಇಂಜಿನಿಯರ್ ನಿತೇಶ್, ಕಿರಿಯ ಇಂಜಿನಿಯರ್ ಮಮತಾ, ಕಿರಿಯ ಇಂಜಿನಿಯರ್ ಕೃಷ್ಣರಾಜ, ಪವರ್ ಮ್ಯಾನ್ ಪಪ್ಪುಕುಮಾರ, ಮಾಪಕ ಓದುಗ ವಿಜಯ, ಗುತ್ತಿಗೆದಾರರಾದ ಸತ್ಯಪ್ರಕಾಶ್ ಹೆಗ್ಡೆ, ಅನಿಶ್ ಡಿಸೋಜ, ವಿಶ್ವಾಲ್ ತೋಡಾರ್, ಶಶಿಧರ್ ಮತ್ತಿತರರು ಉಪಸ್ಥಿತರಿದ್ದರು.