



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಿಗೆ ದ.ಕ.ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ್ ರಾವ್ ಅವರ ನೇತೃತ್ವದಲ್ಲಿ ಶುಕ್ರವಾರ ಮನವಿ ಸಲ್ಲಿಸಲಾಯಿತು.ಮನವಿಯಲ್ಲಿ ಸರ್ಕಾರವು 07 ನೇ ವೇತನ ಆಯೋಗ ನೀಡಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು,ಈಗಾಗಲೇ ಸರಕಾರ ನೀಡಿರುವ ಶೇ 17% ಮಧ್ಯಂತರ ಪರಿಹಾರದೊಂದಿಗೆ ಆಯೋಗ ನೀಡಿದ ವರದಿಯನ್ನು ಜಾರಿಗೊಳಿಸುವುದು ಹಾಗೂ ನೌಕರರಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಹಾಗೂ ಸರಕಾರಿ ನೌಕರರಿಗೆ […]

ಕೃಷ್ಣೋತ್ಸವ 2024 ಪ್ರಥಮ ಆಮಂತ್ರಣ ದೇಗುಲಗಳಿಗೆ ಸಮರ್ಪಣೆ ಜವನೆರ್ ಬೆದ್ರ ಫೌಂಡೇಶನ್ ವತಿಯಿಂದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 108 ನೆ ವರ್ಷದ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ನಡೆಯುವ ಕೃಷ್ಣೋತ್ಸವದ 2024 ಕಾರ್ಯಕ್ರಮದ ಪ್ರಯುಕ್ತ ಮೊದಲ ಕರಪತ್ರ ಜೊತೆ ಫಲ ಪುಷ್ಪ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಹನುಮಂತ ದೇವಸ್ಥಾನ ಶ್ರೀ ವೆಂಕಟರಮಣ ದೇವಸ್ಥಾನ, ಪುತ್ತಿಗೆ ಸೋಮನಾಥೇಶ್ವರ, ಅಲಂಗಾರು ಮಹಾಲಿಂಗೇಶ್ವರ, ಗೌರಿ ದೇವಸ್ಥಾನ, ಮಹಾಲಸ ನಾರಾಯಣಿ ದೇವಸ್ಥಾನ, ಆದಿಶಕ್ತಿ ಮಹಾದೇವಿ ದೇವಸ್ಥಾನ, ಆದಿಶಕ್ತಿ ಮಹಾಕಾಳಿ ದೇವಸ್ಥಾನದಲಿ ಸಮರ್ಪಿಸಲಾಯಿತು […]

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ನಿರೂಪಕಿ ಅಪರ್ಣ ಅವರು ನಿಧನ ಹೊಂದಿದ್ದಾರೆ. ಇಂದು ಸಂಜೆ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ಪಷ್ಟ ಕನ್ನಡದಲ್ಲಿ ಕಾರ್ಯಕ್ರಮಗಳನ್ನು ನಿರೂಪಿಸಲು ಖ್ಯಾತರಾಗಿದ್ದ ಅಪರ್ಣ, ಹಿಂದೊಮ್ಮೆ ನಟಿಯೂ ಆಗಿದ್ದರು. ಅಪರ್ಣ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ನಲ್ಲಿರುವ ಅವರ ಮನೆಯಲ್ಲಿ ಅವರು ನಿಧನರಾಗಿದ್ದಾರೆ. 1984ರಲ್ಲಿ ಬಿಡುಗಡೆಯಾದ ‘ಮಸಣದ ಹೂ’ ಸಿನಿಮಾದಲ್ಲಿ ಅಪರ್ಣ ನಟಿಸಿದ್ದರು. ಇನ್ಸ್ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿನಿಮಾಗಿಂತಲೂ ನಿರೂಪಣೆಯಲ್ಲಿ ಹೆಚ್ಚು ಜನಪ್ರಿಯರಾಗಿದ್ದರು. ಅವರ […]

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ನ […]

ಮೂಡುಬಿದಿರೆ: ಇಲಿನ ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೈ೦ಡ್ ಮ್ಯಾಪಿ೦ಗ್ ವಿಷಯದ ಬಗ್ಗೆ ಒ೦ದು ದಿನದ ಕಾರ್ಯಾಗಾರ ನಡೆಯಿತು.ಕಾರ್ಯಾಗಾರಕ್ಕೆ ಸ೦ಪನ್ಮೂಲ ವ್ಯಕ್ರಿಯಾಗಿ ಮನಶಾಸ್ತ್ರಜ್ಞ, ಮೈ೦ಡ್ ಟ್ರೆöÊನರ್ ಆಗಿರುವ ಮ೦ಗಳೂರಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಪ್ರಾ೦ಶುಪಾಲ ಡಾ ಸರ್ಫ್ರಾಜ್ ಜೆ ಹಾಶಿಮ್ ಆಗಮಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸುಪ್ತ ಮನಸ್ಸಿಗೆ ಅದ್ಭುತವಾದ ಸಾಮಾರ್ಥ್ಯವಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊ೦ಡರೆ ಜೀವನದಲ್ಲಿ ನಾವು ಇಟ್ಟ ಗುರಿಯನ್ನು ತಲುಪಬಹುದು. ಋಣಾತ್ಮಕ ಆಲೋಚನೆಗಳು ಬ೦ದ ಸ೦ದರ್ಭಲ್ಲಿ […]

ಮೂಡುಬಿದಿರೆ: ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊAದಿಗೆ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಆಳ್ವಾಸ್ ಈ ಬಾರಿಯೂ ಉನ್ನತ ಸಾಧನೆ ಮಾಡಿದೆ.ನಿಸರ್ಗ ಎಸ್. 21ನೇ ರ್ಯಾಂಕ್, ಮೃಣಾಲಿನಿ ಎಸ್. ಪೂಜಾರಿ 29ನೇ ರ್ಯಾಂಕ್, ಪಾಹಿಮಾ ಹೇಮಚಂದ್ರ 38ನೇ ರ್ಯಾಂಕ್, ಎಮ್. ರಾಮ್ಪ್ರಸಾದ್ ಮಲ್ಯ 266ನೇ ರ್ಯಾಂಕ್, ಎಮ್.ವಿ. ಚಿರಾಂತ್ 290ನೇ ರ್ಯಾಂಕ್, ಆಕಾಶ್ ಬಸವರಾಜ್ ಬಚಲಾಪುರ 298ನೇ ರ್ಯಾಂಕ್, ಜೈ ಅಶೋಕ್ ರಾಚನ್ನವರ್ 402ನೇ ರ್ಯಾಂಕ್ನೊAದಿಗೆ ತೇರ್ಗಡೆ […]

ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ (ಮುಡಾ)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹರ್ಷವರ್ಧನ ಪಡಿವಾಳ್ ಹಾಗೂ ಸದಸ್ಯರನ್ನು, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸುವ ಕಾರ್ಯಕ್ರಮವು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರ್ಷವರ್ಧನ ಪಡಿವಾಳ್, ಮುಡಾ ಸದಸ್ಯರಾದ ಸತೀಶ್ ಭಂಡಾರಿ ಕರಿಂಜೆ , ಶೇಖರ್ (ಬೊಳ್ಳಿ), […]

ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಲ್ ನಿಧನರಾಗಿದ್ದಾರೆ. ಅವರು ಎಟ್ಟಿಕುಳಂನಲ್ಲಿರುವ ತಮ್ಮ ಮನೆಯಲ್ಲಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾದರು. ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರಾದ ಅಸೈಯದ್ ಫಝಲ್ ಕೋಯಮ್ಮ ತಂಙಲ್ ಪ್ರಸ್ತುತ ಉಳ್ಳಾಲ ಖಾಝಿಯಾಗಿದ್ದರು. ಇಂದು ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ಅವರು ಭಾಗವಹಿಸಬೇಕಾದ ಕಾರ್ಯಕ್ರಮವು ನಿಗದಿಯಾಗಿತ್ತು. ಅವರು ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ರಾತ್ರಿ […]

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಮೂಡುಬಿದಿರೆ ತಾಲೂಕು ಇದರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವು ಪಡುಮಾರ್ನಾಡು ಯುವಕ ಮಂಡಲದಲ್ಲಿ ನಡೆಯಿತು.ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಸುನೀತಾ ನಾಯ್ಕ್ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಾವು ಅರೋಗ್ಯವಾಗಿದ್ದರೆ ನಮ್ಮ ಜೀವನ ಸಾರ್ಥಕ ಆಗುತ್ತದೆ.ನಾವು ಏನನ್ನು ಬೇಕಾದರೂ ಸಾದಿಸಬಹುದು. ಅರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು. ಪಂಚಾಯತ್ ಸದಸ್ಯ, […]