



ಮೂಡುಬಿದಿರೆ: “ವೈದ್ಯಕೀಯ ಬಹಳ ಪವಿತ್ರವಾದ ವೃತ್ತಿ. ಆ ವೃತ್ತಿಯ ಎಲ್ಲಾ ತ್ಯಾಗ ಮತ್ತು ಸವಾಲುಗಳ ನಡುವೆಯೂ ಅದು ಬಹಳ ಸ೦ತೃಪ್ತಿಯನ್ನು ನೀಡುವ ವೃತ್ತಿ. ಈ ನಿಟ್ಟಿನಲ್ಲಿ ನಾನು ಜಗತ್ತಿನ ಅತ್ಯ೦ತ ಉತ್ತಮ ವೃತ್ತಿಯಲ್ಲಿದ್ದೇನೆ” ಎ೦ದು ಬೆ೦ಗಳೂರಿನ ಶ್ರೀ ಜಯದೇವ ಇನ್ಸಿಟ್ಯೂಟ್ ಆಫ್ ಕಾರ್ಡಿಯೊವಾಸ್ಕುಲರ್ ಸಾಯನ್ಸಸ್ ಎ೦ಡ್ ರೀಸರ್ಚ್ನ ನ ಸಹಾಯಕ ಪ್ರಾಧ್ಯಾಪಕ ಡಾ ಪಾರಿತೋಶ್ ಬಲ್ಲಾಳ್ ಹೇಳಿದರು. ಅವರು ಮೂಡುಬಿದಿರೆಯ ಎಕ್ಸಲೆ೦ಟ್ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ನಡೆಸಿದ, “ನೀಟ್ ಪರೀಕ್ಷೆಯ ಯಶಸ್ಸಿನ ಸೂತ್ರ”ದ ಕುರಿತ […]

ಮೂಡುಬಿದಿರೆ : ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವತಿಯಿಂದ ಮೂರು ದಿನಗಳ ಕಾಲ ವಿದ್ಯಾಗಿರಿಯ ಕೃಷಿಸಿರಿ ಸಭಾಂಗಣದಲ್ಲಿ ನಡೆಯುವ ಪುರುಷರ ಮತ್ತು ಮಹಿಳೆಯರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್ ಶಿಫ್ ಮಂಗಳವಾರ ಆರಂಭಗೊಂಡಿತು. ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಷನ್ ನ ಅಧ್ಯಕ್ಷ ರಾಕೇಶ್ ಮಲ್ಲಿ ದೀಪ ಬೆಳಗಿಸಿ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ಇಡೀ ದೇಶದಲ್ಲೇ ಕ್ರೀಡೆಗೆ ಸಹಕಾರ ನೀಡುವ ಸಂಸ್ಥೆ ಇದ್ದರೆ ಅದು […]

ಮೂಡುಬಿದಿರೆ:ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಉಡುಪಿಯ ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಯುರ್ವೇದ ಮತ್ತು ಯೋಗ ಚಿಕಿತ್ಸಾ ವಿಭಾಗ ಮಕ್ಕಳಿಗಾಗಿ ಏರ್ಪಡಿಸಿದ ಯೋಗದ ಮಹತ್ತ್ವದ ಕುರಿತ ಭಾಷಣ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಪುತ್ತಿಗೆಯ ಆಳ್ವಾಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಪ್ರಥಮ ಸ್ಥಾನ ಪಡೆದಿದ್ದಾರೆ.ಬಹುಮಾನ ವಿತರಣಾ ಕಾರ್ಯಕ್ರಮವು ಜೂ.21 ರಂದು ಉಡುಪಿಯ ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಯೋಗ ದಿನಾಚರಣೆ ಸಮಾರಂಭದಲ್ಲಿ ನಡೆಯಲಿದೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ 1312 ಮಕ್ಕಳಿಗೆ 1 ಕೋಟಿ ರೂ ಮೊತ್ತದ ಚೆಕ್ ವಿತರಣೆ ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬೈ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ. ಶೆಟ್ಟಿ […]

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ, ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿರುವ ಸ್ಕೌಟ್ಸ್ ಗೈಡ್ಸ್, ರೋರ್ಸ್ ಮತ್ತು ರೇಂಜರ್ಸ್ಗಳಿಗೆ ಸೋಮವಾರ ಅಭಿನಂದನಾ ಕಾರ್ಯಕ್ರಮ ನಡೆಯಿತು. ಭಾರತ ಸ್ಕೌಟ್ಸ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಕೌಟ್ಸ್ ಗೈಡ್ಸ್ ರಾಜಕೀಯೇತರ ಶೈಕ್ಷಣಿಕ ಆಂದೋಲನವಾಗಿದ್ದು ಮಕ್ಕಳಲ್ಲಿ ಬೌದ್ಧಿಕ ಹಾಗೂ ಸಾಮಾಜಿಕ ಜವಬ್ದಾರಿಗಳನ್ನು ಹೆಚ್ಚಿಸುತ್ತದೆ. ಇಂತಹ […]

ಮೂಡುಬಿದಿರೆ ತಾಲೂಕು ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ-ಪುಸ್ತಕ ವಿತರಣೆ-ಸಮ್ಮಾನ ಕಾರ್ಯಕ್ರಮವು ಭಾನುವಾರ ಸಮಾಜ ಮಂದಿರದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಶ್ರೀಪತಿ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ಇದೆ. ಶಿಕ್ಷಣದಿಂದ ಸಮಾಜದ ಬೆಳವಣಿಗೆ ಸಾಧ್ಯ ಆದ್ದರಿಂದ ಸಮಾಜದ ಎಲ್ಲಾ ಮಕ್ಕಳು ಶಿಕ್ಷಣವನ್ನು ಪಡೆಯುವಂತ್ತಾಗಬೇಕು ಎಂದ ಅವರು ಸಂಘದ ಎಲ್ಲ ಚಟುವಟಿಕೆಗಳಿಗೆ ತುಂಬು ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು. ಸಂಘದ ಅಧ್ಯಕ್ಷ ಎನ್.ಕೆ. […]

ಮೂಡುಬಿದಿರೆ ಟೌನ್ ಜುಮ್ಮಾ ಮಸೀದಿಯಲ್ಲಿ ಸೋಮವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಆಚರಿಸಿದರು. ವಿಶೇಷವೆಂದರೆ ಮಸೀದಿ ರಸ್ತೆಯ ಪಕ್ಕದಲ್ಲಿದ್ದುದ್ದರಿಂದ ಪ್ರಾರ್ಥನೆಗೆ ಮಸೀದಿಗೆ ಹೋಗುವವರ ವಾಹನಗಳನ್ನು ರಸ್ತೆಯ ಇಕ್ಕೆಲೆಗಳಲ್ಲಿಯೇ ನಿಲ್ಲಿಸಿ ಹೋಗಬೇಕಾಗುತ್ತದೆ ಇದರಿಂದ ಟ್ರಾಫಿಕ್ ಸಮಸ್ಯೆ ಕಾಡುತ್ತದೆ ಎಂದರಿತ ಮುಸ್ಲಿಂ ಬಾಂಧವರು ತಮ್ಮ ವಾಹನಗಳನ್ನು ಕ್ರಮವಾಗಿ ಪಾರ್ಕಿಂಗ್ ಮಾಡಿ ಇತರ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿಕೊಡುವ ಮೂಲಕ ಗಮನ ಸೆಳೆದಿದ್ದಾರೆ.

ಮೂಡುಬಿದಿರೆ: ಸ.ಹಿ.ಪ್ರಾ ಶಾಲೆ ಅಚ್ಚರಕಟ್ಟೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಶನಿವಾರ ನಡೆಯಿತು. ಶಾಲಾ ಸ್ಥಾಪಕ ಅಧ್ಯಕ್ಷ ಶ್ರೀ ದಯಾನಂದ ಪೈ, ಶಾಲಾಭಿಮಾನಿ ತಿಮ್ಮಪ್ಪ ಕೋಟ್ಯಾನ್ ,ಹಳೆ ವಿದ್ಯಾರ್ಥಿ ನಿತೇಶ್, ಎಸ್ ಡಿಎಂಸಿಯ ಮಾಜಿ ಅಧ್ಯಕ್ಷ ಚೆಲುವಯ್ಯ ಪೂಜಾರಿ, ಕುಂಭಕಂಠಿಣಿ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಶಾಲಾಭಿಮಾನಿ ಹರೀಶ್ ಹೆಗ್ಡೆ, ಶಾಲಾ ಪೋಷಕರಾದ ಗಣೇಶ್ ಇವರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ನೀಡಲು ಸಹಕರಿಸಿದ್ದರು. ಎಸ್ ಡಿಎಂಸಿಯ ಅಧ್ಯಕ್ಷ ಪ್ರಭಾಕರ್, ವಾರ್ಡ್ ಸದಸ್ಯ […]

ಮೂಡುಬಿದಿರೆ: ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮೂಡುಬಿದಿರೆ ಮತ್ತು ಸರ್ವೋದಯ ಫ್ರೆಂಡ್ಸ್ ಇವುಗಳ ವತಿಯಿಂದ ಮಾಸ್ತಿಕಟ್ಟೆ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕವನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷಗುರುಪ್ರಸಾದ್ ಭಂಡಾರಿ,ಪ್ರಧಾನ ಕಾರ್ಯದರ್ಶಿ ನವೀನ ಕುಂದರ್, ಉಪಾಧ್ಯಕ್ಷ ಗಿರೀಶ್ ನಾಯಕ್,ಕೋಶಾಧಿಕಾರಿ ಶಂಕರ ಕೋಟ್ಯಾನ್,ಯಶವಂತ್,ದೀರಜ್,ಸುಧಾಕರ,ಕುಮಾರ್,ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷಗುರುಪ್ರಸಾದ್,ಕೋಶಾಧಿಕಾರಿ, ಭವಿಷ್ಯತ್ತ್ ಕೋಟ್ಯಾನ್,ರಿಖಿತ್ ಸುವರ್ಣ,ಹರೀಶ್ ಕುಮಾರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶೋಕ್ ಆಚಾರ್ಯ ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ […]

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ ಹಾಗೂ ಶ್ರೀ ಮಹಾವೀರ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನವನ್ನು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಜನಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷ ದಯಾನಂದ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಶ್ರೀ ಮಹಾವೀರ ಕಾಲೇಜಿನ ಪದವಿ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಇನ್ನಾ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ಭಾಗವಹಿಸಿದ್ದರು.ಶ್ರೀ ಮಹಾವೀರ ಪ.ಪೂ.ಕಾಲೇಜಿನ […]