
ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಪುತ್ತಿಗೆ ಗ್ರಾ.ಪಂಚಾಯತ್ ನ ಆವರಣದಲ್ಲಿ ಪಿಡಿಒ ಭೀಮ ನಾಯಕ ಬಿ.ಅವರು ಗಿಡಗಳನ್ನು ನೆಟ್ಟರು.ಪಂಚಾಯತ್ ಸಿಬಂದಿಗಳು ಈ ಸಂದರ್ಭದಲ್ಲಿದ್ದರು.
ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ’ಸೋಜಾ, ತಾ.ಪಂ.ಸಿಬಂದಿ ಅನ್ವಯ ಸಹಿತ ಇತರರು ಈ ಸಂದರ್ಭದಲ್ಲಿದ್ದರು.
ಮಂಗಳೂರು, 5 ಜೂನ್ 2024: ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಸಿರು ಸ್ನೇಹವನ್ನು ಬೆಳೆಸುವ ಉದ್ದೇಶದಿಂದ ‘ಪರಿಸರ ಮೈತ್ರಿ’ಯ ಯಶಸ್ವಿ ಉದ್ಘಾಟನೆಯನ್ನು ಹೆಮ್ಮೆಯಿಂದ ಘೋಷಿಸಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮತ್ತು ಉದ್ಘಾಟಕರಾಗಿ ದಕ್ಷಿಣ ಕನ್ನಡದ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ರವರ ಗೌರವಾನ್ವಿತ ಉಪಸ್ಥಿತಿ ಉದ್ಘಾಟನೆಯನ್ನು ಅಲಂಕರಿಸಿತು. ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಪರಿಸರ ಸಂರಕ್ಷಣೆ ಮತ್ತು ಸುಸ್ಥಿರತೆಯ ಮಹತ್ವವನ್ನು ಹೇಳಿ ಸಸಿ ನೆಡುವ ಮೂಲಕ ಪರಿಸರ […]
ಮಂಗಳೂರು, 5 ಜೂನ್ 2024: ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಸಿರು ಸ್ನೇಹವನ್ನು ಬೆಳೆಸುವ ಉದ್ದೇಶದಿಂದ ‘ಪರಿಸರ ಮೈತ್ರಿ’ಯ ಯಶಸ್ವಿ ಉದ್ಘಾಟನೆಯನ್ನು ಹೆಮ್ಮೆಯಿಂದ ಘೋಷಿಸಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮತ್ತು ಉದ್ಘಾಟಕರಾಗಿ ದಕ್ಷಿಣ ಕನ್ನಡದ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ರವರ ಗೌರವಾನ್ವಿತ ಉಪಸ್ಥಿತಿ ಉದ್ಘಾಟನೆಯನ್ನು ಅಲಂಕರಿಸಿತು. ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಪರಿಸರ ಸಂರಕ್ಷಣೆ ಮತ್ತು ಸುಸ್ಥಿರತೆಯ ಮಹತ್ವವನ್ನು ಹೇಳಿ ಸಸಿ ನೆಡುವ […]
ಮಂಗಳೂರು: ಕಳೆದ ಕೆಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಕಮಾಲ್ ಮಾಡಿದೆ. ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯೂ ಈ ಬಾರಿಯೂ ಗೆಲುವಿನ ನಗೆ ಬೀರಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಸೋಲಿಸಿದ್ದಾರೆ. . ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಈ ಬಾರಿಯಾದರೂ ಈ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಪಣತೊಟ್ಟಿತ್ತು. ಹೀಗಾಗಿ ಈ ಬಾರಿ ಬಿಜೆಪಿಯೂ ಕಾಂಗ್ರೆಸ್ನಿಂದ […]
ಮೂಡುಬಿದಿರೆ: ಇಲ್ಲಿನ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್, ಪವರ್ ಫ್ರೆಂಡ್ಸ್ ಬೆದ್ರ, ಸಮಾಜ ಮಂದಿರ ಸಭಾ ಇವುಗಳ ಜಂಟಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನವು ಸಮಾಜ ಮಂದಿರದಲ್ಲಿ ಭಾನುವಾರ ನಡೆಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ಸಮಾಜ ಸೇವೆ ನಮ್ಮ ಗುರಿ. ಅಸಹಾಯಕರಿಗೆ ನಮ್ಮ ಸೇವೆಗಳು ತಲುಪಬೇಕೆಂಬ ನಿಟ್ಟಿನಲ್ಲಿ ಆಧಾರ್ ನೋಂದಣಿ […]
ಶಾಲಾ ಆರಂಭೋತ್ಸವ ನೂತನ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾಂತ್ಯಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು ಉಪಸ್ಥಿತಿ _ ಶ್ರೀ ಭಾಸ್ಕರ್ (ಎಸ್ .ಡಿ.ಎಂ .ಸಿ .ಅಧ್ಯಕ್ಷರು) ಅತಿಥಿಗಳಾಗಿ : ಶ್ರೀ ಗಣೇಶ ರಾವ್ (ಅಧ್ಯಕ್ಷರು ಹಳೆ ವಿದ್ಯಾರ್ಥಿ ಸಂಘ ಪ್ರಾಂತ್ಯ )ಶ್ರೀ ರವಿಪ್ರಸಾದ್ ಶೆಟ್ಟಿ (ಕಾರ್ಯದರ್ಶಿಗಳು ಹಳೆ ವಿದ್ಯಾರ್ಥಿ ಸಂಘ ಪ್ರಾಂತ್ಯ)ಶ್ರೀಮತಿ ಮಹೇಶ್ವರಿ( ಸಿ ಆರ್ ಪಿ) (ಜ್ಯೋತಿನಗರ ಕ್ಲಸ್ಟರ್.)ಶ್ರೀ ಸುಧಾಕರ್ ಸಾಲಿಯನ್ ಬಿ (ಮುಖ್ಯ ಶಿಕ್ಷಕರು ಪ್ರಾಂತ್ಯ) ಅಧ್ಯಾಪಕ ವೃಂದ .ಎಸ್.ಡಿ […]
ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವರ ’72’ನೇ ಹುಟ್ಟುಹಬ್ಬದ ಸಂದರ್ಭ, ಕಾರ್ಕಳ ಗಣಿತನಗರದ ‘ಜ್ಞಾನಸುಧಾ’ ಆವರಣದಲ್ಲಿ ಶುಕ್ರವಾರ ಸಂಜೆ ಡಾ| ಆಳ್ವರ ಕಾರ್ಕಳದ ಅಭಿಮಾನಿಗಳು ಸಂಯೋಜಿಸಿದ ‘ಸವ್ಯಸಾಚಿ ಸಂಭ್ರಮ ಕಾರ್ಯಕ್ರಮದಲ್ಲಿ 72ರ ಆಳ್ವರ ಕುರಿತಾದ, 72 ಮಂದಿಯ ಲೇಖನಗಳಿರುವ 3೧೪ ಪುಟಗಳ ‘ಸವ್ಯಸಾಚಿ’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ। ಡಿ. ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಆರೋಗ್ಯ, ಶಿಕ್ಷಣ, ಕಲೆ, ಸಾಹಿತ್ಯ, […]
ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮೂಡುಬಿದಿರೆ ಇದರ ಅಧ್ಯಕ್ಷರಾದ ಸುರೇಶ್ ಕೆ. ಪೂಜಾರಿ ಪುನರಾಯ್ಕೆಗೊಂಡಿದ್ದಾರೆ. ಅವರು ಮೂಡುಬಿದಿರೆಯಲ್ಲಿ ನೋಟರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ಕುಮಾರ್ ಹಂಡೇಲು, ಕೋಶಾಧಿಕಾರಿಯಾಗಿ ಜಗದೀಶ್ ಪೂಜಾರಿ ಮಿಜಾರು ಮರು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರವೀಂದ್ರ ಕರ್ಕೇರ, ಸುಶಾಂತ್ ಕರ್ಕೇರ, ಜೊತೆ ಕಾರ್ಯದರ್ಶಿಗಳಾಗಿ ಶಿವಾನಂದ ಹೆಚ್. ಅಂಚನ್, ವಸಂತ ಸುವರ್ಣ, ಲೆಕ್ಕಪರಿಶೋಧಕರಾಗಿ ಸದಾನಂದ ಬಿ. ಪೂಜಾರಿ ಆಯ್ಕೆಯಾಗಿದ್ದಾರೆ.ಮೇ 26ರಂದು ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಶಿರ್ತಾಡಿ ಪೇಟೆಯ ಬಸ್ ನಿಲ್ದಾಣದ ಆವರಣದಲ್ಲಿ ಮೇ. 31ರಂದು ಮಧ್ಯಾಹ್ನ ಒಂದುವರೆ ಗಂಟೆಗೆ ವ್ಯಕ್ತಿಯೋರ್ವರ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ತಮ ಕೈಗೊಳ್ಳುವಂತೆ ಒತ್ತಾಯಿಸಿ ಶಿರ್ತಾಡಿ ಗ್ರಾಮ ಪಂಚಾಯತ್ ಆಡಳಿತ ವತಿಯಿಂದ ಮೂಡುಬಿದಿರೆ ಪೊಲೀಸ್ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಶಿರ್ತಾಡಿ ಪಂಚಾಯತ್ ಅಧ್ಯಕ್ಷೆ ಆಗ್ನೇಶ್ ಡಿಸೋಜಾ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯ ಎಸ್. ಪ್ರವೀಣ್ ಕುಮಾರ್ ಹಾಗೂ ಗ್ರಾಮಸ್ಥ ನವೀನ್ ಸಾಲ್ಯಾನ್ರವರು ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿ ಅಪರಾಧ […]