Category: Mdb Live 24

  • ಮಾಕೆ೯ಟ್ ನಲ್ಲಿ ಅನಧಿಕೃತ ಸೀಯಾಳ ಅಂಗಡಿ : ಮಾಜಿ ಸಚಿವ ಅಭಯಚಂದ್ರ ಜೈನ್ ತೆರವಿಗೆ ಸೂಚನೆ

    ಮಾಕೆ೯ಟ್ ನಲ್ಲಿ ಅನಧಿಕೃತ ಸೀಯಾಳ ಅಂಗಡಿ : ಮಾಜಿ ಸಚಿವ ಅಭಯಚಂದ್ರ ಜೈನ್ ತೆರವಿಗೆ ಸೂಚನೆ

    ಮೂಡುಬಿದಿರೆ: ಇಲ್ಲಿನ ಮಾರ್ಕೆಟ್ ನಲ್ಲಿ ನಿನ್ನೆ ರಾತ್ರಿಯಿಂದ ಅನಧಿಕೃತವಾಗಿ ವ್ಯಾಪಾರ ಮಾಡಲು ಸಿದ್ಧಗೊಂಡಿದ್ದ ಸೀಯಾಳದ ಅಂಗಡಿಯನ್ನು ಮಾಜಿ ಸಚಿವ ಕೆ. ಅಭಯಚಂದ್ರ ಅವರು ತೆರವುಗೊಳಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಪುರಸಭೆಯ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತೆರವುಗೊಳಿಸಿದ ಘಟನೆ  ನಡೆದಿದೆ.ಕಳೆದ ಹಲವು ವರ್ಷಗಳಿಂದ ದಿನೇಶ್  ಅವರು ಸೀಯಾಳದ ವ್ಯಾಪಾರ ಮಾಡುತ್ತಾ ಬಂದಿದ್ದು ದಿನಕ್ಕೆ 150 ರೂ ಬಾಡಿಗೆಯನ್ನು ಸುಂಕವಸೂಲಿ ಗುತ್ತಿಗೆದಾರರಿಗೆ ನೀಡುತ್ತಿದ್ದರು.ಇತ್ತೀಚೆಗೆ ಮಾರ್ಕೆಟ್ ನ ಸುಂಕ ವಸೂಲಿ ಗುತ್ತಿಗೆ ಬೇರೊಬ್ಬರ ಪಾಲಾಗಿದ್ದು ಹೊಸ ಗುತ್ತಿಗೆದಾರರು ದಿನಕ್ಕೆ ರೂ 600 ಸುಂಕ […]

    Continue Reading

  • ಮಾನವ ಸಂಪನ್ಮೂಲದ ಬಳಕೆ ಮತ್ತು ಪ್ರಾಯೋಗಿಕ ಮಾಹಿತಿ ಅರಿತುಕೊಳ್ಳಿ- ಹಳೆ ವಿದ್ಯಾರ್ಥಿ ದಿವಾಕರ್ ಕದ್ರಿ

    ಮಾನವ ಸಂಪನ್ಮೂಲದ ಬಳಕೆ ಮತ್ತು ಪ್ರಾಯೋಗಿಕ ಮಾಹಿತಿ ಅರಿತುಕೊಳ್ಳಿ- ಹಳೆ ವಿದ್ಯಾರ್ಥಿ ದಿವಾಕರ್ ಕದ್ರಿ

    ಮೂಡುಬಿದಿರೆ: ಎಂಜಿನಿಯರ್ ಕಾಲೇಜುಗಳು ಪ್ರಾಮುಖ್ಯತೆಯನ್ನು ಪಡೆದುಕೊಂಡಷ್ಟೇ ಪ್ರಾಮುಖ್ಯತೆಯನ್ನು ಐಟಿಐ ಕಾಲೇಜುಗಳೂ ಪಡೆದುಕೊಂಡಿವೆ. ಇದೀಗ ತಂತ್ರಜ್ಞಾನಗಳು ಮುಂದುವರಿದಿದ್ದು, ಯಾವುದೇ ಭಾಷೆಯನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಸಾಧ್ಯವಿದೆ ಆದ್ದರಿಂದ ಕೀಳರಿಮೆಯನ್ನು ಬಿಡಿ. ತಾವು ಯಾವುದೇ ನಿಧಾ೯ರಗಳನ್ನು ತೆಗೆದುಕೊಳ್ಳುವಾಗ ಸೂಕ್ತ ಸಮಯ, ಸಂದಭ೯ದಲ್ಲಿ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದ ಅವರು ಬೇರೆ ಬೇರೆ ರೀತಿಯ ವಿಷಯಗಳನ್ನು ಅರಿತುಕೊಂಡು ಮಾನವ ಸಂಪನ್ಮೂಲದ ಬಳಕೆ ಮತ್ತು ಪ್ರಾಯೋಗಿಕ ಮಾಹಿತಿಯನ್ನು ಅರಿತುಕೊಂಡರೆ ದೇಶ ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ ಎಂದು ಕೆಮಿಕಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಕಾರ್ಡೋಲೈಟ್ ಸ್ಪೆಷಾಲಿಟಿ ಜನರಲ್ […]

    Continue Reading

  • ಫೆ.8, ಹಾಗೂ 9 ರಂದು ತೋಡಾರು ಶಂಸುಲ್ ಉಲಮಾ ಅರೆಬಿಕ್ ಕಾಲೇಜಿನ ಸ್ಪಟಿಕ ಮಹೋತ್ಸವ ಹಾಗೂ ಸನದುದಾನ ಸಮ್ಮೇಳನ

    ಫೆ.8, ಹಾಗೂ 9 ರಂದು ತೋಡಾರು ಶಂಸುಲ್ ಉಲಮಾ ಅರೆಬಿಕ್ ಕಾಲೇಜಿನ ಸ್ಪಟಿಕ ಮಹೋತ್ಸವ ಹಾಗೂ ಸನದುದಾನ ಸಮ್ಮೇಳನ

    ಮೂಡುಬಿದಿರೆ:  ಕಳೆದ ಹದಿನೈದು ವರ್ಷಗಳಿಂದ ತೋಡಾರಿನಲ್ಲಿ ಕಾರ್ಯಾಚರಿಸುತ್ತಿರುವ ಶಂಸುಲ್ ಉಲಮಾ ಅರೆಬಿಕ್ ಕಾಲೇಜಿನ ಸ್ಪಟಿಕ ಮಹೋತ್ಸವ ಹಾಗೂ ಸನದುದಾನ ಸಮ್ಮೇಳನವು ಫೆ.8 ಹಾಗೂ 9 ರಂದು ನಡೆಯಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕರಾದ ಬಿ.ಎಂ.ಇಸ್ಹಾಕ್ ಹಾಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.   ಅವರು ಗುರುವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಶಂಸುಲ್ ಉಲಮಾ ಅರೆಬಿಕ್ ಕಾಲೇಜು 2010 ರಲ್ಲಿ ಪ್ರಾರಂಭಗೊಂಡಿದ್ದು ಧಾರ್ಮಿಕ ಹಾಗೂ ಸಾಮಾಜಿಕ ಚಿಂತನೆಗಳುಲ್ಲ ಯುವಪೀಳಿಗೆಯನ್ನು ಸಮಾಜಕ್ಕೆ ಸಮರ್ಪಿಸುವ ಧ್ಯೇಯದೊಂದಿಗೆ ಧಾರ್ಮಿಕ ಶಿಕ್ಷಣದೊಂದಿಗೆ ಲೌಕಿಕ […]

    Continue Reading

  • ಸರಕಾರಿ ಕಚೇರಿ ಹಾಗೂ ಸರಕಾರಿ ಕಾರ್ಯಕ್ರಮಗಳಲ್ಲಿ  ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ

    ಸರಕಾರಿ ಕಚೇರಿ ಹಾಗೂ ಸರಕಾರಿ ಕಾರ್ಯಕ್ರಮಗಳಲ್ಲಿ  ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ

    ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂದು ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿದೆ. ಜ. 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಹಾಗೂ ಸರಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರಕಾರದಿಂದ ಅನುದಾನ […]

    Continue Reading

  • ಹಿಂದೂಗಳು ಸ್ವಾವಲಂಬಿ ಜೀವನಕ್ಕೆ ಮುಂದಾದರೆ ನಮ್ಮವರೇ ಭಿನ್ನ ನಿಲುವು ತಾಳುವುದು ಸರಿಯಲ್ಲ : ಶ್ರೀ ರಾಜಶೇಖರಾನಂದ ಸ್ವಾಮೀಜಿ

    ಹಿಂದೂಗಳು ಸ್ವಾವಲಂಬಿ ಜೀವನಕ್ಕೆ ಮುಂದಾದರೆ ನಮ್ಮವರೇ ಭಿನ್ನ ನಿಲುವು ತಾಳುವುದು ಸರಿಯಲ್ಲ : ಶ್ರೀ ರಾಜಶೇಖರಾನಂದ ಸ್ವಾಮೀಜಿ

    ಮೂಡುಬಿದಿರೆ: ಯುವ ಜನತೆಯಲ್ಲಿ ದೇಶ ಭಕ್ತಿಯನ್ನು ಹುಟ್ಟಿಸುವ ನಿಟ್ಟಿನಲ್ಲಿ ಹಿಂಜಾವೇ ಅಲ್ಲಲ್ಲಿ ಕಾಯ೯ಕ್ರಮಗಳನ್ನು ಆಯೋಜಿಸಿ ಸಮಾಜವನ್ನು ಸಂಘಟಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದ ಅವರು ಪುರಸಭೆ ಮಾರುಕಟ್ಟೆ ಗುತ್ತಿಗೆ ವಿಚಾರದಲ್ಲಿ ಭಿನ್ನ ಸ್ವರ ಮೂಡಿಸುತ್ತಿರುವ ಸ್ವಪಕ್ಷೀಯರ ವಿರೋಧ ವ್ಯಕ್ತಪಡಿಸಿ ಹಿಂದೂಗಳು ಸ್ವಾವಲಂಬಿ ಜೀವನಕ್ಕೆ ಮುಂದಾದರೆ ನಮ್ಮವರೇ ಭಿನ್ನ ನಿಲುವು ತಾಳುವುದು ಸರಿಯಲ್ಲ. ಹಿಂದೂಗಳು ಒಗ್ಗೂಡಿ ತಮ್ಮ ಸಾಮರ್ಥ್ಯ ಸಾಬೀತು ಪಡಿಸಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.ಅವರು ಭಾನುವಾರ ಹಿಂದೂ ಜಾಗರಣ ವೇದಿಕೆ […]

    Continue Reading

  • ಬಡ ಮಕ್ಕಳು, ಮಧ್ಯಮವರ್ಗದ ವಿದ್ಯಾರ್ಥಿಗಳು ವಿದ್ಯಾರ್ಜನೆಯಿಂದ ವಂಚಿತರಾಗಬಾರದು-ಶಾಸಕ ಕೋಟ್ಯಾನ್

    ಬಡ ಮಕ್ಕಳು, ಮಧ್ಯಮವರ್ಗದ ವಿದ್ಯಾರ್ಥಿಗಳು ವಿದ್ಯಾರ್ಜನೆಯಿಂದ ವಂಚಿತರಾಗಬಾರದು-ಶಾಸಕ ಕೋಟ್ಯಾನ್

    ಮೂಡುಬಿದಿರೆ: ಆಗಿನ ಸಚಿವರಾಗಿದ್ದ ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ನಮ್ಮ ಕ್ಷೇತ್ರಕ್ಕೆ ೪೦ ರಿಂದ ೪೫ ಕೊಠಡಿಗಳನ್ನು ತಂದಿದ್ದು, ೩೦ ಕೊಠಡಿಗಳನ್ನು ಪ್ರಾಥಮಿಕ ಶಾಲೆಗೆ, ಹಾಗೂ ಮುಲ್ಕಿ, ಅಳಿಯೂರು, ಮಿಜಾರು ಭಾಗದಲ್ಲಿ ತಲಾ ೧ ಕೋಟಿಯಂತೆ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ಶ್ರೀಮಂತ ವರ್ಗದ ಮಕ್ಕಳಿಗೂ, ಮಧ್ಯಮ ವರ್ಗದ ಮಕ್ಕಳಿಗೂ ಯಾವುದೇ ರೀತಿಯ ಭೇದ ಇರಬಾರದೆಂಬ ಉದ್ದೇಶದಿಂದ ಸರಕಾರಿ ಶಾಲೆÀಯ ಮಕ್ಕಳಿಗೂ ಉತ್ತಮ ಸೌಲಭ್ಯಗಳನ್ನು ಸಿಗಬೇಕು. ಇಂದು ಬಡ ಮಕ್ಕಳು, ಮಧ್ಯಮವರ್ಗದ ಮಕ್ಕಳು ವಿದ್ಯಾರ್ಜನೆಯಿಂದ ವಂಚಿತರಾಗಬಾರದೆAಬ ನಿಟ್ಟಿನಲ್ಲಿ […]

    Continue Reading

  • ಏ. 18 ರಿಂದ‌ 26 ರ ವರೆಗೆ ತೋಡಾರು ಉರೂಸ್ ಸಮಾರಂಭ

    ಏ. 18 ರಿಂದ‌ 26 ರ ವರೆಗೆ ತೋಡಾರು ಉರೂಸ್ ಸಮಾರಂಭ

    ಮೂಡುಬಿದಿರೆ: ಬದ್ರಿಯಾ ಸುನ್ನೀ ಜುಮ್ಮಾ ಮಸೀದಿ ,ತೋಡಾರು ಇದರ ವಲಿಯುಲ್ಲಾಹಿ ದರ್ಗಾ ಶರೀಫ್ ನ ಉರೂಸ್ ಸಮಾರಂಭವು ಎಪ್ರಿಲ್ 18 ರಿಂದ 26 ರ ವರೆಗೆ ಒಂಭತ್ತು ದಿನಗಳ ಕಾಲ ನಡೆಯಲಿದೆ ಎಂದು ಉರೂಸ್ ಸಮಿತಿಯ ಅಧ್ಯಕ್ಷರಾದ ಟಿ.ಎಚ್.ಇಸ್ಮಾಯಿಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಒಂಭತ್ತು ದಿನಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ಧಾರ್ಮಿಕ ವಿದ್ವಾಂಸರು, ನೇತಾರರು ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ಎರಡು ವರ್ಷಕ್ಕೊಮ್ಮೆ ನಡೆಯುತ್ತಾ ಬಂದಿರುವ ತೋಡಾರ್ ಉರೂಸ್ ಕಾರ್ಯಕ್ರಮ […]

    Continue Reading

  • ಪವರ್ ಫ್ರೆಂಡ್ಸ್ ನಿಂದ ಬೃಹತ್ ಆರೋಗ್ಯ ಮತ್ತು ಬಂಜೆತನ ತಪಾಸಣಾ ಶಿಬಿರ

    ಪವರ್ ಫ್ರೆಂಡ್ಸ್ ನಿಂದ ಬೃಹತ್ ಆರೋಗ್ಯ ಮತ್ತು ಬಂಜೆತನ ತಪಾಸಣಾ ಶಿಬಿರ

    ಮೂಡುಬಿದಿರೆ: ಪವರ್ ಫ್ರೆಂಡ್ಸ್‌ ಮೂಡುಬಿದಿರೆ, ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಹಾಗೂ ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆರಾಕೇರ್ ಸಂಸ್ಥೆಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ನೋವಾ ಐ.ವಿ.ಎಫ್. ಸಂಸ್ಥೆಯಿಂದ ಬಂಜೆತನ ತಪಾಸಣಾ ಶಿಬಿರವು ಇಲ್ಲಿನ ಸಮಾಜಮಂದಿರ ಸಭಾದ ಸ್ವರ್ಣ ಮಂದಿರದಲ್ಲಿ ನಡೆಯಿತು. ಅದಾನಿ ಗ್ರೂಪ್ ನ ಅಧ್ಯಕ್ಷ ಕಿಶೋರ್ ಆಳ್ವ ಅವರು ದೀಪ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಇಂತಹ ಶಿಬಿರಗಳಿಂದ ಜನರಿಗೆ ಸಹಕಾರಿಯಾಗುತ್ತದೆ.  ಸೇವಾ ಮನೋಭಾವವುಳ್ಳ ಸಂಘಟನೆಯಿಂದ ಇನ್ನೂ ಹೆಚ್ಚಿನ […]

    Continue Reading

  • ಸಾಯಿ ಮಾನಾ೯ಡಿನ 50ನೇ ಸೇವಾ ಯೋಜನೆ: ಅಸಹಾಯಕ ಕುಟುಂಬಕ್ಕೆ ಮನೆ ಹಸ್ತಾಂತರ

    ಸಾಯಿ ಮಾನಾ೯ಡಿನ 50ನೇ ಸೇವಾ ಯೋಜನೆ: ಅಸಹಾಯಕ ಕುಟುಂಬಕ್ಕೆ ಮನೆ ಹಸ್ತಾಂತರ

    ಮೂಡುಬಿದಿರೆ: ಇಲ್ಲಿನ ಪಡುಮಾರ್ನಾಡಿನ ಸಾಯಿ ಮಾರ್ನಾಡ್ ಸೇವಾ ಸಂಸ್ಥೆಯ 50 ನೇ ಸೇವಾ ಯೋಜನೆಯಡಿಯಲ್ಲಿ ಮತ್ತು ಕಟೀಲ್ ಫ್ರೆಂಡ್ಸ್ ಕ್ರಿಕೆಟ್ ಟೀಮ್ ದುಬೈ ಇವರ ಸಹಕಾರದಲ್ಲಿ ಪಡುಮಾರ್ನಾಡು ಗ್ರಾಮದ ಗುಮಡಬೆಟ್ಟುವಿನ ಸುನೀತಾ ಪೂಜಾರಿಯವರ ದುಸ್ಥಿತಿಯಲ್ಲಿದ್ದ ಮನೆಯನ್ನು ನವೀಕರಿಸಲಾಗಿದ್ದು ,ಇದರ ಅಂಗವಾಗಿ ಗಣಹೋಮ ಹಾಗೂ ಸಭಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.   ಮಾನಾ೯ಡು ಗರಡಿಯ ಅನುವಂಶಿಕ ಆಡಳಿತ ಮೊಕ್ತೇಸರ ರಾಜೇಶ್ ಬಲ್ಲಾಳ್ ಸಭಾ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪುಣ್ಯದ ಕೆಲಸ ಮಾಡಿದರೆ ಅದರ ಫಲ ನಮಗೆ ಲಭಿಸುತ್ತದೆ. ಉತ್ತಮ ಕೆಲಸ […]

    Continue Reading

  • ಮಾರ್ಪಾಡಿಯ ನಡ್ಯೋಡಿ ದೈವಸ್ಥಾನಕ್ಕೆ ಧರ್ಮಸ್ಥಳದಿಂದ 5 ಲಕ್ಷ ಚೆಕ್ ಹಸ್ತಾಂತರ

    ಮಾರ್ಪಾಡಿಯ ನಡ್ಯೋಡಿ ದೈವಸ್ಥಾನಕ್ಕೆ ಧರ್ಮಸ್ಥಳದಿಂದ 5 ಲಕ್ಷ ಚೆಕ್ ಹಸ್ತಾಂತರ

    ಮೂಡುಬಿದಿರೆ:ಇಲ್ಲಿನ‌ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ರೂ 5 ಲಕ್ಷ ಮೊತ್ತದ ಚೆಕ್ಕನ್ನು ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಪ್ರದೀಪ್ ರೈ, ಪ್ರಮುಖರಾದ ಉಮೇಶ್ ಹೆಗ್ಡೆ ಮತ್ತು ಸುರೇಂದ್ರ ಶೆಟ್ಟಿ ಈ ಸಂದರ್ಭದಲ್ಲಿದ್ದರು.

    Continue Reading