



ಮೂಡುಬಿದಿರೆ: ಕರ್ನಾಟಕ ರಾಜ್ಯದ ಅನುದಾನಿತ ಪದವಿಪೂರ್ವ ಕಾಲೇಜಿನ ನೌಕರರ ಸಮಸ್ಯೆಗಳನ್ನು ಸರಿಪಡಿಸುವಂತೆ ಕೋರಿ ಇಂದು ಮೂಡುಬಿದಿರೆ ತಾಲೂಕಿನ ಅನುದಾನಿತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು ಮೂಡುಬಿದರೆಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರನ್ನು ಭೇಟಿ ಮಾಡಿದರು .ಅನುದಾನಿತ ಕಾಲೇಜಿನ ವಿದ್ಯಾರ್ಥಿಗಳ ಗರಿಷ್ಠ ಮಿತಿ ಕನಿಷ್ಠ ಮಿತಿ ಕಾರ್ಯಭಾರ ಡೆಪ್ಯುಟೇಷನ್ ಮೊದಲಾದ ಸಮಸ್ಯೆಗಳ ಕುರಿತಾಗಿ ನೌಕರರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಶಾಸಕರ ಗಮನವನ್ನು ಸೆಳೆಯಲಾಯಿತು. ಮಂಗಳೂರಿನ ಕಿಟಲ್ ಪದವಿಪೂರ್ವ ಕಾಲೇಜಿನ ಶ ವಿಠಲ್, ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. […]

ಮೂಡುಬಿದಿರೆ: ತಾಲೂಕಿನ ಅಳಿಯೂರಿಗೆ ಮಂಜೂರಾಗಿರುವ ಸರಕಾರಿ ಪ.ಪೂ. ಕಾಲೇಜಿಗೆ ವಿವೇಕ ಯೋಜನೆಯಡಿ ರೂ 1ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕೊಠಡಿಗಳಿಗೆ ಶಾಸಕ ಉಮನಾಥ್ ಎ ಕೋಟ್ಯಾನ್ ಸೋಮವಾರ ಶಿಲಾನ್ಯಾಸಗೈದರು.ಇದೇ ಸಂದರ್ಭದಲ್ಲಿ ಸಹಸ್ರ ಪೌಂಡೇಶನ್ ವತಿಯಿಂದ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಸೌರಶಕ್ತಿ ಸ್ಯಾನಿಟರಿ ಪ್ಯಾಡ್ ಮೆಷಿನನ್ನು ಶಾಲೆಗೆ ಹಸ್ತಾಂತರಿಸಲಾಯಿತು.ಪ್ರವೀಣ್ ಭಟ್ ಅಳಿಯೂರು ಅವರು ಶಿಲಾನ್ಯಾಸದ ವೈದಿಕ ಕಾರ್ಯ ನಡೆಸಿದರು.ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ.ಅಳಿಯೂರು, ಪ್ರೌಢಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪ್ರದೀಪ್ ಕುಮಾರ್, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ […]