
ಮೂಡುಬಿದಿರೆ: ಕನ್ನಡ ವಿಭಾಗ, ಆಳ್ವಾಸ್ ಕಾಲೇಜು ವಿದ್ಯಾಗಿರಿ, ಮೂಡುಬಿದಿರೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಳ್ವಾಸ್ ನ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು ಎಂಬ ವಿಚಾರ ಶಿಬಿರ-೨೦೨೪ ವನ್ನು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ.ಡಾ.ವೂಡೇ ಪಿ.ಕೃಷ್ಣ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಗಾಂಧಿ ಎಂಬ ಮಹಾನ್ ಶಕ್ತಿ. ಭಾರತ ಬಿಟ್ಟು ಗಾಂಧಿ ಇಲ್ಲ. ಗಾಂಧಿ ಬಿಟ್ಟು ಭಾರತ ಇಲ್ಲ. ಭಾರತದ […]
ಮೂಡುಬಿದಿರೆ: ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯನ್ ಹಾಗೂ ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಇವುಗಳ ಜಂಟಿ ಆಶ್ರಯದಲ್ಲಿ ಮಧುಗಿರಿ ಸ್ಪೋಟ್ಸ್ ಕ್ಲಬ್ ಮಧುಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಜ್ಯೂನಿಯರ ಬಾಲಕ ಹಾಗೂ ಬಾಲಕಿಯರ ಎರಡು ವಿಭಾಗದ ಪ್ರಥಮ ಪ್ರಶಸ್ತಿ ಹಾಗೂ ಬಾಲಕಿಯರ ದ್ವಿತೀಯ ಪ್ರಶಸ್ತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡರು. ಬಾಲಕರ ವಿಭಾಗದ ಫೈನಲ್ಸ್ ನಲ್ಲಿ ಆಳ್ವಾಸ್ ಬಾಲಕರ ತಂಡ ಬೆಂಗಳೂರಿನ ರಾಜೇಶ್ವರಿ ಯುತ್ ಕ್ಲಬ್ (ಆರ್ವೈಸಿ) ತಂಡವನ್ನು 35-31 ಹಾಗೂ 35-27 […]
ಮೂಡುಬಿದಿರೆ : ಪುರಾಣ ಪ್ರಸಿದ್ಧ ಹದಿನೆಂಟು ಮಾಗಣೆಗಳ ಒಡೆಯ, ಚೌಟರ ಸೀಮೆಯ ಪುತ್ತಿಗೆ ಶ್ರೀ ಸೋಮನಾಥ ದೇವಾಲಯದ ನೂತನ ಜೀರ್ಣೋದ್ಧಾರ ಕಾಮಗಾರಿಯ ವೀಕ್ಷಣೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರುಆಗಮಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಡಾ.ಡಿ. ಹೆಗ್ಗಡೆಯವರನ್ನು ದೇವಾಲಯದ ಅನುವಂಶಿಕ ಆಡಳಿತ ಮೊಕೇಸರರಾಗಿರುವ ಚೌಟರ ಅರಮನೆಯ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ದೇವಾಲಯದ ಅರ್ಚಕ ಅನಂತ ಕೃಷ್ಣ ಭಟ್ ಹಾಗೂ ಮತ್ತಿತರ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ ಕಂಡು ಪೂಜ್ಯರು ಸಂತಸ ವ್ಯಕ್ತಪಡಿಸಿದರು.
ಮೂಡುಬಿದಿರೆ: ‘೩೦ ನೇ ಆಳ್ವಾಸ್ ವಿರಾಸತ್’ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳ, ಸ್ವಲ್ಪ ಹಿಂದಿ ಮಿಶ್ರಣ ‘ವುಡ್’ಗಳ ಸಿನಿಮಾ ಹಾಡುಗಳ ಸಿಂಚನವು ಆಳ್ವಾಸ್ ವಿರಾಸತ್ನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಚೆನ್ನೈಯ ಸ್ಟೆಕೇಟೋ ಬ್ಯಾಂಡ್ ತಂಡವು ನಿರಂತರ ಅಬ್ಬರದಲ್ಲಿ ನಡೆಸಿಕೊಟ್ಟ ಸಂಗೀತ ರಸಸಂಜೆಯ ಆರಂಭದಲ್ಲಿ ವಯೋಲಿನ್ ನಲ್ಲಿ ಸಾಯಿ ರಕ್ಷಿತ್ ಅವರು […]
ಮೂಡುಬಿದಿರೆ: ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘೩೦ನೇ ವಿರಾಸತ್’ನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ರಾತ್ರಿ ತೆರೆ ಬಿತ್ತು.ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಪ್ರತಿಷ್ಠಾಪಿಸಿದ ಸಾಂಸ್ಕೃತಿಕ ರಥವನ್ನು ಮುಖ್ಯ ವೇದಿಕೆಯ ಮುಂಭಾಗದಲ್ಲಿ ಎಡದಿಂದ ಬಲಕ್ಕೆ ಎಳೆಯಲಾಯಿತು.ಇದಕ್ಕೂ ಮೊದಲು ಸಣ್ಣ ರಥದಲ್ಲಿ ಗಣಪತಿ, ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ […]
ಮೂಡುಬಿದಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಂಗಳೂರು-ಮೂಡುಬಿದಿರೆ- ಕಾರ್ಕಳಕ್ಕೆ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಅನುಮೋದನೆ ದೊರಕಿ ಈಗಾಗಲೇ ಬಸ್ಸು ಸಂಚಾರ ಆರಂಭಗೊಂಡಿದ್ದು, ಇಂದು ಬೆಳಿಗ್ಗೆ ಮೂಡುಬಿದಿರೆ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹಚ್ಚಿ , ಹಸಿರು ನಿಶಾನೆ ಹಾರಿಸುವ ಮೂಲಕ ಸ್ವಾಗತಿಸಿ ಸಂಭ್ರಮ ಪಟ್ಟರು.ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಸ್ವಾಗತಿಸಿ ಮಾತನಾಡಿ, ರಾಮಲಿಂಗಾರೆಡ್ಡಿ, ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆಯನ್ನು ತಿಳಿಸಿದ ಅವರು […]
ಮೂಡುಬಿದಿರೆ: ಕೆಲವರಿಗೆ ಏನೋ ಒಂದು ಖುಷಿ ಯಾರೋ ಮಾಡಿದ ಮಗುವಿಗೆ ನಾನೇ ಅಪ್ಪ ಎಂದು ಹೇಳಿಕೊಂಡು ತಿರುಗಾಡುವ ಚಾಳಿ. ಆದ್ದರಿಂದ ಅಂತಹ ಮನಸ್ಥಿತಿಯುಳ್ಳವರನ್ನು ನಾವೇನು ಮಾಡಲು ಸಾಧ್ಯವಿಲ್ಲ. ಇದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ಈ ಕೆಲಸ ಯಾರಿಂದ ಸಾಧ್ಯವಾಗಿದೆಯೇಂಬುದು, ಯಾರೋ ಒಬ್ಬ ತಾಲೂಕಿನಲ್ಲಿ ಕುಳಿತುಕೊಂಡು ನಾನೇ ಮಾಡಿದ್ದೇನೆಂದು ಹೇಳಿಕೊಂಡು ತಿರುಗಾಡಿದರೆ ಜನ ಅದನ್ನು ನಂಬಲು ತಯಾರಿಲ್ಲ. ಒಳ್ಳೆಯ ಕೆಲಸ ಮಾಡಿದ್ದು ನಾನು, ಕೆಟ್ಟ ಕೆಲಸ ಮಾಡಿದ್ದು ಇನ್ನೊಬ್ಬ ಎಂದು ಹೇಳುವ ಜನರು ಮೂರ್ಖರು ಎಂದು ಮೂಲ್ಕಿ ಮೂಡುಬಿದಿರೆ […]
ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ೭೪ ನೇ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಂಡಿದ್ದು , ಕರ್ನಾಟಕವು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಪ್ರದರ್ಶಿಸಿ, ಹಲವಾರು ಉನ್ನತ ಸ್ಥಾನಗಳನ್ನು ಪಡೆದುಕೊಂಡಿದ್ದು, ಮೊದಲ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸಂಸ್ಥೆಯು ಸೇವೆಯನ್ನು ವಿಭಿನ್ನ ರೀತಿಯಲ್ಲಿ ಮಾಡುತ್ತಿರುವವರಿಗೆ ರಾಷ್ಟ್ರೀಯ ಸಂಸ್ಥೆಯು ಕೆಲವು ಪದಕಗಳನ್ನು ನೀಡಿ ಗೌರವಿಸುತ್ತಾರೆ. ಅದರಲ್ಲಿ ೨೦೨೩ ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ಕೊಡ ಮಾಡುವ ಮೇಸೆಂಜರ್ ಆಫ್ ಪೀಸ್ […]
ಮೂಡುಬಿದಿರೆ: ತಾಲೂಕಿನಾದ್ಯಾಂತ ಸರಕಾರಿ ಬಸ್ಸು ಓಡಾಡಬೇಕೆಂಬುದು ಇಲ್ಲಿನ ಜನರ ಬಹುಕಾಲದ ಬೇಡಿಕೆ. ಆ ಬೇಡಿಕೆ ಇದೀಗ ಪೂರ್ಣಗೊಂಡಿದೆ. ಸಾರಿಗೆ ಇಲಾಖೆಯು ಮೂಡುಬಿದಿರೆ ,ಕಾರ್ಕಳ ಮಂಗಳೂರಿಗೆ ಬಸ್ಸು ಪ್ರಯಾಣದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಬೆಳಿಗ್ಗೆ 6.45 ರಿಂದ ಆರಂಭವಾಗಿ ಸಂಜೆ 6.15 ರವರೆಗೆ ಕೆಎಸ್ ಆರ್ ಟಿಸಿ ಬಸ್ಸು ಸಂಚರಿಸಲಿದೆ. ಮಂಗಳೂರಿನಿಂದ ಕೈಕಂಬ- ಎಡಪದವು- ಮೂಡುಬಿದಿರೆ- ಬೆಳುವಾಯಿ ಮಾರ್ಗವಾಗಿ ಕಾರ್ಕಳದವರೆಗೆ ಸುಮಾರು 55ಕಿ.ಮೀ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಸನ್ನು ಚಲಾಯಿಸಲು ಜನರ ಬೇಡಿಕೆಯು ಯಶಸ್ವಿಯಾಗಿದೆ.ದಿನ ನಿತ್ಯ ಬಸ್ ಸಂಚಾರದ ಸಮಯದ […]
ಮೂಡುಬಿದಿರೆ: ತಾಲೂಕಿಗೆ ಸರಕಾರಿ ಬಸ್ಸು ಬೇಕೆಂದು ಇಲ್ಲಿನ ಜನರ ಬಹುಕಾಲದ ಬೇಡಿಕೆ. ಆದರೆ ಹಲವಾರು ವರುಷಗಳಿಂದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಭಾರತೀಯ ರೈತ ಸೇನೆಯು ಹಲವಾರು ಬಾರಿ ಮನವಿಯನ್ನು ಸಂಬAಧಪಟ್ಟ ಇಲಾಖೆಗೆ ನೀಡಿದರೂ ಸ್ಪಂದಿಸದೇ ಇದ್ದಾಗ ಕಾನೂನಾತ್ಮಕ ಹೋರಾಟವನ್ನು 04/03/2023 ರಂದು ಕರ್ನಾಟಕ ಲೋಕಾಯುಕ್ತ ನ್ಯಾಯಲಕ್ಕೆ ದೂರು ಅರ್ಜಿ ಸಲ್ಲಿಸಲಾಯಿತು. ಸದ್ರಿ ದೂರು ಅರ್ಜಿಯು ನ್ಯಾಯಾಲಯದ ಪ್ರಕರಣ ಸಂಖ್ಯೆ: LOK/MYS/10393/2023 ರಂತೆ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿರುವಾಗಲೇ […]