
ಮೂಡುಬಿದಿರೆ:”ವಿದ್ಯಾರ್ಥಿಗಳಾದವರು ತಮ್ಮ ವ್ಯಕ್ತಿತ್ವ, ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜೊತೆಗೆ ನಮ್ಮ ದೇಶ, ನಮ್ಮ ಸಮಾಜ, ನಮ್ಮ ಕುಟುಂಬ ಎಂಬ ಭಾವನೆಯನ್ನು ಹೊಂದಿರಬೇಕು ಅಲ್ಲದೇ ನೈತಿಕ ಮೌಲ್ಯವನ್ನು ಬೆಳೆಸುವುದರೊಂದಿಗೆ ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವುದೇ ನಿಜವಾದ ಮಾನವೀಯತೆ. ವಿದ್ಯೆಯೆಂಬುದು ಮನುಷ್ಯನ ಪ್ರಶಸ್ತಿ ಪಾತ್ರದಲ್ಲಿ ಇರುವುದಲ್ಲ ಬದಲಾಗಿ ಅವನ ವ್ಯಕ್ತಿತ್ವದಲ್ಲಿರುತ್ತದೆ” ಎಂದು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ ಬಿ ಪುರಾಣಿಕ್ ಹೇಳಿದರು.ಅವರು ಎಕ್ಸಲೆಂಟ್ ಸಿಬಿಎಸ್ ನ ಶಾಲಾ ವಾರ್ಷಿಕೋತ್ಸವದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಮಾತನಾಡಿ […]
ಮಂಗಳೂರು:ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮದ ತಮ್ಮ ಅನುಭವಗಳನ್ನು ಬಿಚ್ಚಿಟ್ಟ ಅವರು ಕಂಪೆನಿ ಕಲ್ಚರ್ಗೆ ಒಗ್ಗಿಕೊಳ್ಳಲು […]
ಮೂಡುಬಿದಿರೆ:ಕಲೆ ,ಸಾಹಿತ್ಯ,ಸಂಗೀತ, ಸಂಸ್ಕೃತಿ, ನೃತ್ಯ, ರಂಗಭೂಮಿ, ಚಲನಚಿತ್ರ, ಜಾನಪದ, ಕೃಷಿ, ಉದ್ಯಮ, ಶಿಕ್ಷಣ, ಸಮಾಜಸೇವೆ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ವೈದ್ಯಕೀಯ, ಯಕ್ಷಗಾನ, ಆಡಳಿತ, ಕ್ರೀಡೆ ನಾಡು-ನುಡಿ, ಇತಿಹಾಸ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರಿಗೆ ಸಮಾಜಸೇವಕರಿಗೆ ,ಪ್ರತಿಭಾನ್ವಿತರಿಗೆ ,ಕಲಾಭೂಮಿ ಪ್ರತಿಷ್ಠಾನ ಬೆಂಗಳೂರು ವತಿಯಿಂದ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಸಮಾರಂಭದಲ್ಲಿ ಸುಮಲತಾ ಬಜಗೋಳಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಹಿಂದೆ ಕನ್ನಡ ರಾಜ್ಯೋತ್ಸವ ದ ಪ್ರಯುಕ್ತ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಬೆಳಗಾವಿ ಇವರು ಅವರ […]
ಮೂಲ್ಕಿ: ಇಲ್ಲಿನ ಪೂಂಜಾ ಚಾರಿಟೇಬಲ್ ಟ್ರಸ್ಟ್ ಅವರ ವತಿಯಿಂದ ಅಶಕ್ತರಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ನೀಡಲಾಗುವ 7 ಲಕ್ಷ ರೂಪಾಯಿ ವೆಚ್ಚದ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರುಪಾಲ್ಗೊಂಡರು.ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷರಾದ ಸತೀಶ್ ಅಂಚನ್, ಟ್ರಸ್ಟ್ ನ ಮುಖ್ಯಸ್ಥರಾದ ಅರವಿಂದ ಪೂಂಜಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುನೀಲ್ ಆಳ್ವ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮೂಡುಬಿದಿರೆ:ಕೇಂದ್ರ ಪುರಸ್ಕ್ರತ ಅಮೃತ್ ೨.೦ ಅಭಿಯಾನದ “ಅಮೃತ್ ಮಿತ್ರ” ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆ ಕಾರ್ಯಕ್ರಮದಡಿ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿನ ಉದ್ಯಾನವನ ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ಪಂಚಸೂತ್ರಗಳನ್ನು ಅನುಸರಿಸುವ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿAದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಮೃತ ಯೋಜನೆಯ ಕೇಂದ್ರ ಪುರಸ್ಕ್ರತ ಯೋಜನೆಯಾಗಿದ್ದು ರಾಜ್ಯದಲ್ಲಿ ನಗರ ಸಳ್ಥೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮುಖ್ಯ ಉದ್ದೇಶ ಅಮೃತ್ ೨.೦ ಅಭಿಯಾನದಡಿ ವಿವಿಧ ತಾಂತ್ರಿಕೇತರ ಚಟುವಟಿಕೆಗಳನ್ನು ಕೇಂದ್ರ ಪುರಸ್ಕ್ರತ ಯೋಜನೆಯಾದ ಡೇ-ನಲ್ಮ್ ಅಭಿಯಾನದಡಿ ಪುರಸಭೆಮೂಡುಬಿದಿರೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ […]
ಮೂಡುಬಿದಿರೆ: ಹೊಸ ವಿದ್ಯಾಸಂಸ್ಥೆಗಳು ತೆರೆದುಕೊಳ್ಳುವಾಗ ರಾಷ್ಟ್ರ ಕಟ್ಟಿದ ನಾಯಕರನ್ನು ಮರೆಯುವುದು ಸರಿಯಲ್ಲ. ರಾಷ್ಟ್ರಪ್ರೇಮದ ದ್ಯೋತಕವಾಗಿ ವಿದ್ಯಾಸಂಸ್ಥೆಗಳಿಗೆ ರಾಷ್ಟ್ರೀಯ ಹೆಸರನ್ನಿಟ್ಟು ರಾಷ್ಟ್ರಪ್ರೇಮ ಪ್ರದರ್ಶಿಸುವ ಅಗತ್ಯವಿದೆ ಎಂದು ಬಾಬುರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ಅಧ್ಯಕ್ಷರೂ ಆಗಿರುವ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಹೇಳಿದರು.ಅವರು ಮಂಗಳವಾರ ಬಿ. ಆರ್.ಪಿ. ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿಕ್ಷಣದ ಜೊತೆಗೆ ಆಟ, ನಾಟಕ ಎಲ್ಲವೂ ವಿದ್ಯಾರ್ಥಿಗಳ ಪ್ರತಿಭೆ ಹೆಚ್ಚಿಸಲು ಪೂರಕವಾಗಿರುತ್ತದೆ. ಕಲಿಕೆಯ ಯಶಸ್ಸಿನ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ […]
ಮೂಡುಬಿದಿರೆ: ಕರ್ನಾಟಕ ರಾಜ್ಯದ ಅನುದಾನಿತ ಪದವಿಪೂರ್ವ ಕಾಲೇಜಿನ ನೌಕರರ ಸಮಸ್ಯೆಗಳನ್ನು ಸರಿಪಡಿಸುವಂತೆ ಕೋರಿ ಇಂದು ಮೂಡುಬಿದಿರೆ ತಾಲೂಕಿನ ಅನುದಾನಿತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು ಮೂಡುಬಿದರೆಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರನ್ನು ಭೇಟಿ ಮಾಡಿದರು .ಅನುದಾನಿತ ಕಾಲೇಜಿನ ವಿದ್ಯಾರ್ಥಿಗಳ ಗರಿಷ್ಠ ಮಿತಿ ಕನಿಷ್ಠ ಮಿತಿ ಕಾರ್ಯಭಾರ ಡೆಪ್ಯುಟೇಷನ್ ಮೊದಲಾದ ಸಮಸ್ಯೆಗಳ ಕುರಿತಾಗಿ ನೌಕರರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಶಾಸಕರ ಗಮನವನ್ನು ಸೆಳೆಯಲಾಯಿತು. ಮಂಗಳೂರಿನ ಕಿಟಲ್ ಪದವಿಪೂರ್ವ ಕಾಲೇಜಿನ ಶ ವಿಠಲ್, ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. […]
ಮೂಡುಬಿದಿರೆ: ಕರಾವಳಿ ಭಜನಾ ಸಂಸ್ಕಾರ ವೇದಿಕೆ ಮಂಗಳೂರು ಇದರ ಮೂಡಬಿದ್ರೆ ತಾಲೂಕಿನ ವಿಶೇಷ ಸಭೆಯನ್ನು ಕರಾವಳಿ ಭಜನಾ ಸಂಸ್ಕಾರ ವೇದಿಕೆ ಮಂಗಳೂರು ಇದರ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಎರ್ಲಪಾಡಿ ಇವರ ನೇತೃತ್ವದಲ್ಲಿ, ಸಮಾಜ ಮಂದಿರದ ಸರಸ್ವತಿ ಸಭಾಭವನದಲ್ಲಿ ನಡೆಯಿತುಸಭೆಯಲ್ಲಿ ಸಂಘಟನೆಯ ಉದ್ದೇಶದ ಬಗ್ಗೆ ಮತ್ತು ಬೈಲಾದ ಬಗ್ಗೆ ಮತ್ತು ಭಜನಾ ಸ್ಪರ್ಧೆಯ ಬಗ್ಗೆ ಚೌಕಟ್ಟು ಯಾಕೆ ಬೇಕು ಎನ್ನುವ ಬಗ್ಗೆ, ಭಜನಾ ತರಭೇತುದಾರರು, ತೀರ್ಪುಗಾರರು, ಭಜನಾ ಸಂಘಟಕರು ಎಲ್ಲರೂ ಒಂದೇ ಸೂರಿನಡಿಯಲ್ಲಿ ಸೇರಬೇಕು, […]
ಮೂಡುಬಿದಿರೆ: ಮಂಗಳೂರು ವಿವಿಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ದೇಶೀಯ ಮಟ್ಟದಲ್ಲಿ ಸಾರ್ವಕಾಲಿಕ ಸಾಧನೆ ಮೆರೆದಿದ್ದಾರಲ್ಲದೆ ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಸತತ 22ನೇ ಬಾರಿ ಸಮಗ್ರತಂಡ ಪ್ರಶಸ್ತಿಯನ್ನು ದ್ವಿತೀಯ ಸ್ಥಾನ ಪಡೆದ ತಂಡದಿಂದ 460 ಅಂಕಗಳ ಅಂತರದಲ್ಲಿ ಪಡೆಯುವುದರ ಜೊತೆಗೆ 11 ನೂತನ ಕೂಟದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿಗಳು ನಿರ್ಮಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಕ್ರೀಡಾ ಪ್ರೋತ್ಸಾಹಕ ಡಾ.ಎಂ. ಮೋಹನ ಆಳ್ವ ತಿಳಿಸಿದರು.ಅವರು ಸೋಮವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ […]
ಮೂಡುಬಿದಿರೆ: ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಸರ್ಕಾರ ಹಾಗೂ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ರೀಡಾಳುಗಳಿಗೆ ಸರ್ಕಾರವಾಗಲಿ ವಿಶ್ವವಿದ್ಯಾಲಯವಾಗಲಿ ಯಾವುದೇ ಪ್ರೋತ್ಸಾಹವನ್ನು ನೀಡುತ್ತಿಲ್ಲ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ ಮೋಹನ್ ಆಳ್ವ ಖೇದ ವ್ಯಕ್ತಪಡಿಸಿದ್ದಾರೆ.ಹಿಂದಿನ ವರ್ಷ ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಸುಮಾರು 1.8 ವರ್ಷಗಳೇ ಕಳೆದರೂ ಇದುವರೆಗೂ ಬಿಡುಗಡೆಯಾದ ಹಣವಿ.ವಿ. ಪಾವತಿ ಮಾಡಿರುವುದಿಲ್ಲ. ದೇಶಿಯ ಮಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಐದನೇ ಸ್ಥಾನಕ್ಕೆ ಏರಿಸಿದ ಆಳ್ವಾಸ್ ಕ್ರೀಡಾಳುಗಳಿಗೆ ಯಾವುದೇ ಪ್ರೋತ್ಸಾಹಕರವನ್ನು ಕೂಡ […]