Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ , ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರೂ ಆದಂತಹ ಶ್ರೀ ಸಾ.ರಾ ಗೋವಿಂದರವರು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಸುಂದರ್ ರಾಜ್, ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷರಾದ ಬಿ.ಎನ್ ಜಗದೀಶ್, ಅಂಬೇಡ್ಕರ್ ಸೇನೆಯ ಅಧ್ಯಕ್ಷರಾದ ಪಿ. ಮೂರ್ತಿ, ಕನ್ನಡವೇ ಸತ್ಯ ರಂಗಣ್ಣ, ನಿರ್ಮಾಪಕರಾದ ಕಿರಣ್ ತೋಟಂಬೈಲು, […]

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ವ್ಯಾಪಕ ಮಳೆಯಾಗುತ್ತಿದ್ದು ಅರೆಂಜ್ ಅಲರ್ಟ್ ಘೋಷಣೆಯಾದ ಹಿನ್ನಲೆ ಮುಂಜ್ರಾಗತ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಾಮಿಕ,ಫ್ರೌಡ, ಶಾಲೆ, ಹಾಗೂ ಪದವಿ ಪೂರ್ವ(12ನೇ ತರಗತಿ)ಯವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಘೋಷಿಸಿದ್ದಾರೆ.ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂದತೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ […]

ಮೂಡುಬಿದಿರೆ: ಶ್ರೀ ರಾಮ್ ಫ್ರೆಂಡ್ಸ್, ಅಂಗರಗುಡ್ಡೆ ರಾಮನಗರ ಮುಲ್ಕಿ ಇದರ ವತಿಯಿಂದ ಧೀರ ಬಲಿದಾನಿ ದಿ||ಸುಖಾನಂದ ಶೆಟ್ಟಿಯವರ ಸ್ಮರಣಾರ್ಥವಾಗಿ ನಡೆದ ಸುಮಾರು 100 ಜನರಿಗೆ ಅಂಚೆ ಇಲಾಖೆಯ 10 ಲಕ್ಷ ರೂಪಾಯಿ ವೆಚ್ಚದ ಉಚಿತ ಅಪಘಾತ ವಿಮೆ ನೋಂದಣಿ ಬೃಹತ್ ಅರೋಗ್ಯ ತಪಾಸಣೆ ಹಗ್ಗ ಜಗ್ಗಾಟ ಹಾಗೂ ವಾಲಿಬಾಲ್ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಮೂಡುಬಿದಿರೆ: ಬೆಳುವಾಯಿ ಗ್ರಾ.ಪಂ.ವ್ಯಾಪ್ತಿಯ ಶಾಂತಿನಗರದ ಸರಕಾರಿ ಬಾವಿಯ ಹತ್ತಿರದ ಗುಡ್ಡೆಯಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ.ಜುಗಾರಿ ದೊರೆತ ಮಾಹಿತಿಯಂತೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ.ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ. ಯವರು ತನ್ನ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ ಸದಾಶಿವ, ಸುದರ್ಶನ್, ಪ್ರಕಾಶ್, ಪ್ರಶಾಂತ್, ಶಿವಕುಮಾರ್, ರೋಹಿತ್ ಎಂಬುವರನ್ನು ದಸ್ತಗಿರಿ ನಡೆಸಿದ್ದಾರೆ. ವಶದಲ್ಲಿದ್ದ ಇಸ್ಪೀಟ್ ಆಟಕ್ಕೆ ಉಪಯೋಗಿಸಿದ ನಗದು ಹಣ 3,560/- ರೂ, […]

ಮೂಡುಬಿದಿರೆ: 1966 ರಲ್ಲಿ ಮೂಡುಬಿದಿರೆಯಲ್ಲಿ ಪ್ರಾರಂಭಗೊಂಡ ಎರಡನೇ ಪ್ರೌಢಶಾಲೆ ಬಾಬು ರಾಜೇಂದ್ರ ಪ್ರೌಢಶಾಲೆ. ಮಹಾವೀರ ಕಾಲೇಜಿನ ಆಡಳಿತ ಮಂಡಳಿಯಿಂದ ಪ್ರಾರಂಭಗೊಂಡ ಶಾಲೆಯಲ್ಲಿ ದೊಡ್ಡ ಕ್ರೀಡಾಂಗಣ, ಫುಟ್ಬಾಲ್ ಕೋರ್ಟ್, ಕೋಚಿಂಗ್ ಅವಕಾಶ, ಉಚಿತ ಶಾಲಾ ಸಮವಸ್ತ್ರ, ದೂರದ ವಿದ್ಯಾರ್ಥಿಗಳಿಗೆ ಉಚಿತ ರಿಕ್ಷಾ ಸೌಲಭ್ಯ ಅದೇ ರೀತಿ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡಲಾಗುತ್ತಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.ಅವರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.ಮಾಜಿ ಶಾಸಕರು, ಧರ್ಮಸ್ಥಳ ಯೋಜನೆ, ಹಳೆ ವಿದ್ಯಾರ್ಥಿಗಳು […]

ಮೂಡುಬಿದಿರೆ: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯAತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. […]

ಮೂಡುಬಿದಿರೆ: ಇಲ್ಲಿನ ವಕೀಲರ ಸಂಘದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಮಧುಕರ ಪಿ. ಭಾಗವತ್ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಭಾರತದ ಸಂವಿಧಾನದಲ್ಲಿ ನಮೂದಿಸಿದ ಜನರ ಮೂಲಭೂತ ಹಕ್ಕು ಮತ್ತು ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಚಲಾವಣೆಯಲ್ಲಿ ಇರುವ ಇತಿ ಮಿತಿಗಳ ಬಗ್ಗೆ ತಿಳಿಸಿದರು.ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಕೀಲರಾದ ನಾವೆಲ್ಲರೂ ಕರ್ತವ್ಯ ನಿರ್ವಹಿಸೋಣ ಎಂದರು. ಕಾರ್ಕಳದ ಹಿರಿಯ ನ್ಯಾಯವಾದಿ ಶ್ರೀ ಪಿ.ಸುಗಂಧ […]

ಮೂಡುಬಿದಿರೆ: ಶಿರ್ತಾಡಿಯಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ಕಟ್ಟಡದ ಶಿಲಾನ್ಯಾಸ ಸಮಾರಂಭ ಹಾಗೂ ಸಂಜೀವಿನಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬುಧವಾರ ಶಿರ್ತಾಡಿಯ ಪೇಟೆಯಲ್ಲಿ ಜರುಗಿತು.ಶಿರ್ತಾಡಿ ಪಂಚಾಯತ್ ಅಧ್ಯಕ್ಷರಾದ ಆಗ್ನೇಸ್ ಡಿಸೋಜ ಅಧ್ಯಕ್ಷತೆ ವಹಿಸಿ ನೂತನ ಸಂಜೀವಿನಿ ಕಟ್ಟಡವನ್ನು ಉದ್ಘಾಟಿಸಿ ಗ್ರಾಮದ ಅಭಿವೃದ್ಧಿಯಲ್ಲಿ ಸರ್ವರ ಪಾತ್ರವನ್ನು ಸ್ಮರಿಸಿದರು.ಪಂಚಾಯತ್ದ ಹಿರಿಯ ಸದಸ್ಯ ಎಸ್. ಪ್ರವೀಣ್ ಕುಮಾರ್ ಬಸ್ಸು ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿದರು.ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಮಾತನಾಡಿ […]

ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ.ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಬಗ್ಗೆ ಮಾತನಾಡಿದ ದೇವಿ ಪ್ರಸಾದ್ ಶೆಟ್ಟಿ ಅವರು ತೀರ್ಪುಗಾರರು ನೀಡುವ ತೀರ್ಪಿನ ಬಗ್ಗೆ ಕಂಬಳ ಆಯೋಜಕರು, ಕೋಣಗಳ […]

ಮೂಡುಬಿದಿರೆ: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ `ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು […]