



ಮೂಡುಬಿದಿರೆ: ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ , ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನುಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ಆಡಳಿತಕ್ಕೆ ಒಳಪಟ್ಟ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಫೆ.28ರಿಂದ ಮಾರ್ಚ್ 7ರವರೆಗೆ ಧಾರ್ಮಿಕ ಕಾರ್ಯಕ್ರಮ, ಮಾರ್ಚ್ 6ರಂದು ಬ್ರಹ್ಮಕಲಶೋತ್ಸವ ನಡೆಸುವುದೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಭಾನುವಾರ ಸಾಯಂಕಾಲ ದೇವಳದ ಆವರಣದಲ್ಲಿ ನಡೆದ ಸಭೆಯ ಮೊದಲು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನಾಂಕವನ್ನು ತಂತ್ರಿವರೇಣ್ಯರು, ಅರ್ಚಕವರ್ಗ, ಜೀರ್ಣೋದ್ದಾರ ಸಮಿತಿ ಹಾಗೂ ದೇವಳದ ಸಿಬ್ಬಂದಿಗಳನ್ನೊಳಗೊಂಡು ಸಪರಿವಾರ ಶ್ರೀ ದೇವರುಗಳಿಗೆ ಪ್ರಾರ್ಥನಾ ಪೂರ್ವಕವಾಗಿ ನಿವೇದಿಸಿಕೊಳ್ಳಲಾಯಿತು.ಎಡಪದವು ವೆಂಕಟೇಶ ತಂತ್ರಿಯವರು ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನಾಂಕವನ್ನು […]

ಮೂಡುಬಿದಿರೆ: ತಾಲೂಕಿನ ಪಡುಕೊಣಾಜೆ ಗ್ರಾಮದಲ್ಲಿ ಸುಮಾರು 45 ಎಕ್ರೆ ಜಾಗವನ್ನು ಸರಕಾರ ವಕ್ಫ್ ಗೆ ಮೀಸಲಿಟ್ಟಿದೆ ಎಂದು ಬಿಜೆಪಿಯ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ ಹಬ್ಬಿಸಿ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ ಎಂದು ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಆರೋಪಿಸಿದ್ದಾರೆ.ಅವರು ಸೋಮವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಯು ಕಂದಾಯ ಅಧಿಕಾರಿಗಳಲ್ಲಿ ವಿವರಣೆ ಕೇಳಿದ್ದು, ಅಧಿಕಾರಿಗಳು ಇದು ಸುಳ್ಳು ಮಾಹಿತಿ […]

ಬೆಂಗಳೂರು: ಈ ವರ್ಷ ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ. ಈ ಸಂದರ್ಭದಲ್ಲಿ ‘ಗಾಂಧಿ ಭಾರತ‘ ಹೆಸರಿನಲ್ಲಿ ಶತಮಾನೋತ್ಸವ ಆಚರಿಸುತ್ತಿದ್ದು ಇದರ ಸವಿನೆನಪಿಗಾಗಿ ಐತಿಹಾಸಿಕ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಏಕಕಾಲಕ್ಕೆ 100 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕಾಂಗ್ರೆಸ್ ನಿವೇಶನಗಳಲ್ಲಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ.ಈ ಸಂಬಂಧ ಈಗಾಗಲೇ ಎಲ್ಲಾ ಸಚಿವರು, […]

ಮೂಡುಬಿದಿರೆ: ತಾಲೂಕಿನ ಪಡುಕೊಣಾಜೆ ಹಾಗೂ ಮೂಡುಕೊಣಾಜೆ ಗ್ರಾಮದ ರೈತರ ಕೆಲವು ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಅಧಿಸೂಚನೆ ಹೊರಡಿಸಿರುವುದು ರೈತವಿರೋಧಿ ಹಾಗೂ ಕಾನೂನುಬಾಹಿರ. ಈ ರೈತ ವಿರೋಧಿ ನೀತಿಯನ್ನು ನಿಲ್ಲಿಸಬೇಕು. ರೈತರ ಮೇಲೆ ದಬ್ಬಾಳಿಕೆ ಮುಂದುವರಿದಲ್ಲಿ, ತೀವ್ರ ತರಹದ ಹೋರಾಟ ಮಾಡುವುದಾಗಿ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಎಚ್ಚರಿಸಿದರು.ಅವರು ಇಂದು ಕೃಷಿ ಭೂಮಿ, ಮಠ, ಮಂದಿರ, ರುದ್ರಭೂಮಿಯ ಆಸ್ತಿಗಳನ್ನು ವಕ್ಫ್ ಕಾಯ್ದೆ ಹೆಸರಿನಲ್ಲಿ ಕಬಳಿಸುತ್ತಿರುವುದರ ವಿರುದ್ಧ ಹಾಗೂ ವಕ್ಫ್ ಕಾಯ್ದೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ […]

ಮೂಡುಬಿದಿರೆ: ಜವಹರಲಾಲ್ ನೆಹರು ಅವರ ಜನ್ಮ ದಿನಾಚರಣೆಯ ಸವಿನೆಪಿಗಾಗಿ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನವನ್ನು ಆಚರಿಸಲಾಯಿತು.ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ.ಮಧುಮಾಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಸಾಮಾನ್ಯ ಜ್ಞಾನವನ್ನು ವೃದ್ಧಿಸಿ ಶಿಕ್ಷಣವನ್ನು ನೀಡಿ. ವಿಶೇಷ ಚೇತನ ಮಕ್ಕಳನ್ನು ಕೂಡ ಸಾಮಾನ್ಯ ಮಕ್ಕಳಂತೆ ಅವರ ಕಾಲಲ್ಲಿ ನಿಲ್ಲುವಂತೆ ಮಾಡುವ ಮಾಡಬೇಕಾಗಿದೆ. ಇಂದಿನ ಮಕ್ಕಳು ಫಾಸ್ಟ್ ಫುಡ್ , ಹೊಟೇಲ್ ಆಹಾರ ಪದಾರ್ಥಗಳನ್ನು ಅತಿಯಾಗಿ ಸೇವಿಸಿ ತಮ್ಮ […]

ಮೂಡುಬಿದಿರೆ:ವಿವಿಧ ಜೀವಿಗಳು ವಿವಿಧ ರೀತಿಯಿಂದ ಬದುಕು ಕಟ್ಟಿಕೊಂಡಿವೆ. ಸಹಕಾರ ಕೇಂದ್ರಗಳು ಹಣದ ಭರವಸೆಯ ನಿಜ ಕೇಂದ್ರಗಳಾಗಿ ಸದುಪಯೋಗ ಆಗುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ ನುಡಿದರು.ಮೂಡುಬಿದಿರೆ ಕೋ ಓಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ಇದರ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಕಲ್ಪವೃಕ್ಷ ಪ್ರಶಸ್ತಿ ಮತ್ತು ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ , ಸಪ್ತ ಸಂಧ್ಯಾ- ಸಹಕಾರಿ ಚಿಂತನ ಸರಣಿ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು […]

ಮೂಡುಬಿದಿರೆ: ಸರಕಾರದ ಪ.ಜಾ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದೆ ಇರುವ ಹಲವಾರು ಜಾತಿಗಳು ಆತಂಕದಲ್ಲಿದ್ದು ಒಳಮೀಸಲಾತಿಯನ್ನು ಜಾರಿಗೊಳಿಸುವ ಪ್ರಕ್ರಿಯೆ ಆರಂಭಗೊಂಡಿರುತ್ತದೆ ಈ ಸಂದರ್ಭದಲ್ಲಿ ‘ಮನ್ಸ ‘ ಎಂಬುದನ್ನು ಜಾತಿ ಪಟ್ಟಿಯಲ್ಲಿ ಸೇರಿಸಬೇಕು. ಜನಾಂಗಕ್ಕೆ ಸೂಕ್ತ ಪ್ರಾತಿನಿಧ್ಯ , ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಮೂಡುಬಿದಿರೆಯ ಕನ್ನಡಭವನದಲ್ಲಿ ನ.೧೭ರಂದು ಪರಿಶಿಷ್ಟ ಜಾತಿಯಲ್ಲಿ ಉಪಜಾತಿಗಳು ಮತ್ತು ಅವುಗಳ ಅಸ್ಮಿತೆ ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ತಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ) ಇದರ ಗೌರವ ಸಲಹೆಗಾರ ಆಚ್ಯುತ ಸಂಪಿಗೆ […]

ಮೂಡುಬಿದಿರೆ: ಸಾಂಪ್ರದಾಯಿಕ ಸಂಗೀತ ಜನಪದ ವಾದ್ಯ ಕಲಾವಿದರ ಸಂಘ ರಿ. ಮೂಡುಬಿದಿರೆ ಇದರ ೧೨ನೇ ವರ್ಷದ ವಾರ್ಷಿಕ ಮಹಾಸಭೆಯ ಸಮಾರಂಭ ಕಾರ್ಯಕ್ರಮವು ಸಮಾಜಮಂದಿರದ ಮಿನಿ ಸಭಾಭವನದಲ್ಲಿ ಮಂಗಳವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲೆ ಶ್ವೇತಾ ಜೈನ್ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ದ.ಕ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮೂಡುಬಿದಿರೆ ಪರಿಸರದ ಕಲಾವಿದರೆಲ್ಲ ಸೇರಿಕೊಂಡು ಕಲಾವಿದರ ಸಂಘಟನೆಯಾಗಬೇಕು. ಇದರಿಂದ ಸಮಾಜದಲ್ಲೊಂದು ಪರಿವರ್ತನೆಯನ್ನು ತರಬೇಕು, ಕಲಾವಿದರ ನಡುವೆ ಸಾಮರಸ್ಯವನ್ನು ಬೆಳೆಸಬೇಕೆಂಬ ಉತ್ತಮ ಉದ್ದೇಶವನ್ನಿಟ್ಟುಕೊಂಡು ೧೨ ವರ್ಷಗಳ ಹಿಂದೆ, […]

ಮೂಡುಬಿದಿರೆ: ಇಲ್ಲಿನ ಜ್ಯೋತಿನಗರದಲ್ಲಿ ಹೊಸದಾಗಿ ಪ್ರಾರಂಭಗೊಂಡ ಮಾರುತಿ ಸುಜುಕಿ ಅರೆನಾ ಶೋ ರೂಮ್ ಅನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಅವರು ಉದ್ಘಾಟಿಸಿ, ಮಾರುಕಟ್ಟೆಗೆ ನೂತನವಾಗಿ ಬಂದ ಡಜ್ಲರ್ ಡಿಜೈರ್ ಕಾರನ್ನು ಅನಾವರಣಗೊಳಿಸಿದರು.ನಂತರ ಮಾತನಾಡಿದ ಅವರು ೧೯೩೦ ರಂದು ಮಂಜುನಾಥ ಪೈ ಅವರು ಬೀಡಿ ಉದ್ದಿಮೆಯಿಂದ ಆರಂಭಗೊಂಡ ಭಾರತ್ ಬೀಡಿ ವರ್ಕ್ಸ್ ನಿಂದ ಆರಂಭಗೊಂಡ ಉದ್ಯಮವು ಇಂದು ಇವರ ಕಂಪೆನಿಯು ಬೃಹತ್ ಮಟ್ಟದಲ್ಲಿ ಬೆಳೆದು ಬಂದಿದೆ. ಇವರ ನಾಲ್ಕು ತಲೆಮಾರುಗಳಿಂದಲೂ ವಾಣಿಜ್ಯ ಕ್ಷೇತ್ರದಲ್ಲಿ […]