Category: Moodabidire

  • ಮಾರ್ಚ್ 11 ರಿಂದ15 ರವರೆಗೆ ಅಂಬಾಡಬೆಟ್ಟು ವರ್ಷಾವಧಿ ಜಾತ್ರೆ ಆರಂಭ

    ಮಾರ್ಚ್ 11 ರಿಂದ15 ರವರೆಗೆ ಅಂಬಾಡಬೆಟ್ಟು ವರ್ಷಾವಧಿ ಜಾತ್ರೆ ಆರಂಭ

    ಮೂಡುಬಿದಿರೆ: ಶ್ರೀ ಕ್ಷೇತ್ರ ಅಂಬಾಡಬೆಟ್ಟು ಹೊಸಬೆಟ್ಟುವಿನ ವರ್ಷಾವಧಿ ಜಾತ್ರೆಯು ಮಾರ್ಚ್ 11ರಿಂದ 15 ರವರೆಗೆ ನಡೆಯಲಿದೆ.ಮಾರ್ಚ್  11 ರಂದು ಸತ್ಯನಾರಾಯಣ ಪೂಜೆ ನಡೆಯಲಿದ್ದು, 12 ರಂದು ಶ್ರೀ ದೈವ ಧರ್ಮರಸು ದೈವ ಕುಮಾರ ದೇವತೆಯ ನೇಮೋತ್ಸವ, 13 ರಂದು ಕೊಡಮಣಿತ್ತಾಯ ದೈವದ ನೇಮ ಹಾಗೂ 14,ರಂದು ಕೊಡಮಣಿತ್ತಾಯ ದೈವದ ಕಡೆ ಓಕುಲಿ ಬಲಿ ,15 ರಂದು ಬ್ರಹ್ಮ ಬೈದರ್ಕಳ ನೇಮೋತ್ಸವವು ನಡೆಯಲಿದ್ದು, ದಿನಂಪ್ರತಿ ಅನ್ನಸಂತರ್ಪಣೆ ನಡೆಯಲಿದೆ.

    Continue Reading

  • “ನಾಳೆ ಇರುವೈಲಿನಿಂದ ಕಟೀಲಿಗೆ ಭಕ್ತಿಯ ನಡಿಗೆ ಅಮ್ಮನೆಡೆಗೆ”

    “ನಾಳೆ ಇರುವೈಲಿನಿಂದ ಕಟೀಲಿಗೆ ಭಕ್ತಿಯ ನಡಿಗೆ ಅಮ್ಮನೆಡೆಗೆ”

    ಮೂಡುಬಿದಿರೆ: ಶ್ರೀ ಕ್ಷೇತ್ರ ಇರುವೈಲಿನಿಂದ ಕಟೀಲು ಶ್ರೀ ಭ್ರಮರಾಂಬಿಕೆಯ ಸನ್ನಿಧಿಗೆ ಊರ-ಪರವೂರ ಭಕ್ತ ವೃಂದ ಶ್ರೀ ಕ್ಷೇತ್ರ ಇರುವೈಲು ಇದರ ನೇತೃತ್ವದಲ್ಲಿ ನಾಳೆ ಮುಂಜಾನೆ 3.30 ಕ್ಕೆ ಲೋಕ ಕಲ್ಯಾಣಾರ್ಥ ಹಾಗೂ ಭಕ್ತಾದಿಗಳ ಅಭೀಷ್ಟೆಯ ಫಲಸಿದ್ಧಿಗಾಗಿ ೧೨ ನೇ ವರ್ಷದ ಭಕ್ತಿಯ ನಡಿಗೆ ಅಮ್ಮನೆಡೆಗೆ  ಪಾದಯಾತ್ರೆಯು ಭಜನಾ ಸಂಕೀರ್ತನೆಯೊಂದಿಗೆ ಸಾಗಲಿದೆ‌. ಭಕ್ತಾದಿಗಳು ಸಮಯಕ್ಕೆ ಸರಿಯಾಗಿ ಕ್ಷೇತ್ರದಲ್ಲಿ ಹಾಜರಾಗಬೇಕು.  ಹಾಗೂ ಕಟೀಲಿನಿಂದ ಇರುವೈಲಿಗೆ ಬರಲು ವಾಹನದ ವ್ಯವಸ್ಥೆ ಇದ್ದು, ಲಘು ಉಪಹಾರದ ವ್ಯವಸ್ಥೆಯು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

    Continue Reading

  • ಆಕ್ಟೀವಾಗೆ ಢಿಕ್ಕಿ ಹೊಡೆದ ಕಾರು

    ಆಕ್ಟೀವಾಗೆ ಢಿಕ್ಕಿ ಹೊಡೆದ ಕಾರು

    ಮೂಡುಬಿದಿರೆ: ಶುಕ್ರವಾರ ಸಂಜೆ ಶಿತಾ೯ಡಿ ಬಳಿ ಕಾರೊಂದು ಆಕ್ಟಿವಾ ಸ್ಕೂಟಿಗೆ ಡಿಕ್ಕಿಯಾದ ಪರಿಣಾಮವಾಗಿ ಆಕ್ಟಿವಾ  ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ನಡೆದಿದೆ.ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35) ಮೃತಪಟ್ಟವರು.ಸುಜಯಾ ಅವರು ಶುಕ್ರವಾರ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ […]

    Continue Reading

  • ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಪುತ್ತೆ ಸೋಮನಾಥೇಶ್ವರ ದೇಗುಲಕ್ಕೆ  ಭಕ್ತರ ಭಕ್ತಿಯ ಹೊರೆಕಾಣಿಕೆ ಮೆರವಣಿಗೆ

    ಮೂಡುಬಿದಿರೆ : ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕದಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆಯು ಶುಕ್ರವಾರ ನಡೆಯಿತು.ಅನುವಂಶೀಯ ಆಡಳಿತ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ. ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಅರಮನೆಯ ಅಂಗಣದಲ್ಲಿ ಎಡಪದವು ಮುರಳೀಧರ ತಂತ್ರಿಗಳು ಹಾಗೂ ಬಸದಿಗಳ ಇಂದ್ರರು ಪ್ರಾರ್ಥನೆ ನೆರವೇರಿಸಿ ದೀಪ ಪ್ರಜ್ವಲಿಸಿದರು.ಚೌಟರ ಅರಮನೆಗೆ ಸಂಬಂದಪಟ್ಟ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಗೈದರು.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ […]

    Continue Reading

  • ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ ವ್ಯಾಪ್ತಿಯ ಪಶು ಚಿಕಿತ್ಸಾಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಕೋಟ್ಯಾನ್

    ಮೂಡುಬಿದಿರೆ : ದ.ಕ.ಜಿ. ಪಂಚಾಯತ್ ಮಂಗಳೂರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆರ್. ಐ. ಡಿ. ಎಫ್ -೨೮ರಲ್ಲಿ ಮಂಜೂರಾದ ತಾಲೂಕಿನ ಮೂಡುಬಿದಿರೆ ಮತ್ತು ಶಿತಾ೯ಡಿಯಲ್ಲಿ ತಲಾ ಐವತ್ತಮೂರುವರೆ ಲಕ್ಷ ವೆಚ್ಚದಲ್ಲಿ ನಿಮಾ೯ಣಗೊಳ್ಳಲಿರುವ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶುಕ್ರವಾರ ಶಿಲಾನ್ಯಾಸಗೈದರು.ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಪಶು ಚಿಕಿತ್ಸಾ ಆಸ್ಪತ್ರೆಗೆ ೫೩.೧೬ ಲಕ್ಷ ವೆಚ್ಚದಲ್ಲಿ ಅನುದಾನ ಬಿಡುಗಡೆಗೊಂಡಿದ್ದು, ಇದೀಗ ಹಳೆಯ ಕಟ್ಟಡವನ್ನು ದುರಸ್ತಿಗೊಳಿಸಿ […]

    Continue Reading

  • ಫೆ.28 ರಿಂದ ಮಾರ್ಚ್ 7ರವರೆಗೆ ಪುತ್ತಿಗೆ ದೇಗುಲದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

    ಫೆ.28 ರಿಂದ ಮಾರ್ಚ್ 7ರವರೆಗೆ ಪುತ್ತಿಗೆ ದೇಗುಲದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

    ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವಿರುವ ಮೂಡುಬಿದಿರೆ ಪುತ್ತಿಗೆಯ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.28 ರಿಂದ ಮಾ. 7 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕುಲದೀಪ ಎಂ.ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ಬುಧವಾರ ಶ್ರೀ ಕ್ಷೇತ್ರದಲ್ಲಿ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿ ‘ ಈಗಾಗಲೇ ಸುಮಾರು 15 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ […]

    Continue Reading

  • ಧರ್ಮಸ್ಥಳ ಭಜನಾ ಪರಿಷತ್ತ್ ನ ಜಿಲ್ಲಾಮಟ್ಟದ ಸಭೆ

    ಧರ್ಮಸ್ಥಳ ಭಜನಾ ಪರಿಷತ್ತ್ ನ ಜಿಲ್ಲಾಮಟ್ಟದ ಸಭೆ

    ಬಂಟ್ವಾಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾದೇಶಿಕ  ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳದ ಜಿಲ್ಲಾ ಮಟ್ಟದ ಭಜನಾ ಪರಿಷತ್ ಸಭೆಯು ಬುಧವಾರ ಬಂಟ್ವಾಳ ಯೋಜನಾ ಕಚೇರಿಯ ಸಭಾಂಗಣದಲ್ಲಿ, ನಡೆಯಿತು.ಭಜನ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಶ್ರೀ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಭಜನಾ ಮಂಡಳಿ ಹಾಗೂ ಮಂದಿರಗಳ ರಿಜಿಸ್ಟ್ರೇಷನ್ ಮುಂತಾದ ದಾಖಲಾತಿಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದ ಅವರು ಭಜನಾ ಪರಿಷತ್ತು ನಗರ ಭಜನೆ,ಮನೆ ಮನ ಭಜನೆ, ಸಂಧ್ಯಾ ಭಜನೆ ಮುಖಾಂತರವಾಗಿ […]

    Continue Reading

  • ಫೆ. 25 ರಿಂದ ಮಾರ್ಚ್ 3 ರವರೆಗೆ ಶ್ರೀ ನಡ್ಯೋಡಿ ದೈವಸ್ಥಾನ ಬ್ರಹ್ಮಕಲಶೋತ್ಸವ ಸಂಭ್ರಮ

    ಫೆ. 25 ರಿಂದ ಮಾರ್ಚ್ 3 ರವರೆಗೆ ಶ್ರೀ ನಡ್ಯೋಡಿ ದೈವಸ್ಥಾನ ಬ್ರಹ್ಮಕಲಶೋತ್ಸವ ಸಂಭ್ರಮ

    ಮೂಡುಬಿದಿರೆ: ಇಲ್ಲಿನ ಶತಮಾನಗಳ ಇತಿಹಾಸವಿರುವ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ನಾಲ್ಕನೇ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ನೇಮೋತ್ಸವವು ಫೆ.25ರಿಂದ ಮಾರ್ಚ್ ೩ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ, ಅಧ್ಯಕ್ಷ  ದಿಲೀಪ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿತಿಳಿಸಿದ್ದಾರೆ.ಅವರು ಶುಕ್ರವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮಾಯಂದಲೆ ದೇವಿಯ ಮೂರ್ತಿ ಪುನರ್ ಪ್ರತಿಷ್ಠೆ, ನೂತನ ಮುಖಮಂಟಪ ಮತ್ತು ರಾಜಗೋಪುರ ಲೋಕಾರ್ಪಣೆಗೊಳ್ಳಲಿದೆ.ಫೆ.25ರಂದು ಸಂಜೆ 4 ಗಂಟೆಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಿಂದ ನಡ್ಯೋಡಿ […]

    Continue Reading

  • ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುಜಾತ ಶೆಟ್ಟಿ ಆಯ್ಕೆ

    ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುಜಾತ ಶೆಟ್ಟಿ ಆಯ್ಕೆ

    ಮೂಡುಬಿದಿರೆ: ತಾಲೂಕಿನ  ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ  ಸುಜಾತ ಜೆ.ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆದಿದೆ.ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಐ ರಾಘವೇಂದ್ರ ಭಟ್ ಇರುವೈಲ್, ಶಿವಾನಂದ ನಾಯ್ಕ್, ಪ್ರದೀಪ್ ಶೆಟ್ಟಿ, ಪೂವಪ್ಪ ಸಾಲ್ಯಾನ್,ಶುಭಕರ ಕಾಜವ, ಪದ್ಮನಾಭ ಪೂಜಾರಿ, ಮೋಹನ್ ನಾಯಕ್,ಮತ್ತು ದೀಪಾ ಆಯ್ಕೆಯಾಗಿದ್ದಾರೆ.

    Continue Reading

  • ನಾಳೆ ಬೆದ್ರ ಕೆಫೆ ಆರಂಭ: ಮೂರು ದಿನ “ಟೀ” ದರ ಕೇವಲ ೧ ರೂ

    ನಾಳೆ ಬೆದ್ರ ಕೆಫೆ ಆರಂಭ: ಮೂರು ದಿನ “ಟೀ” ದರ ಕೇವಲ ೧ ರೂ

    ಮೂಡುಬಿದಿರೆ: ತಾಲೂಕಿನ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಚಾ,ಕಾಫಿ, ಬರ್ಗರ್,ಪಿಝ್ಝಾ, ಶವರ್ಮ, ಜ್ಯೂಸ್, ಚಾಟ್ಸ್ ಮುಂತಾದ ಐಟಮ್‌ಗಳನ್ನೊಳಗೊಂಡ ನೂತನ ಉಪಹಾರ ಕೇಂದ್ರ ‘ ಬೆದ್ರ ಕೆಫೆ’ಯು ನಾಳೆ ಸಂಜೆ ೪-೩೦ ಉದ್ಘಾಟನೆಗೊಳ್ಳಲಿದೆ.ವಿನೂತನ ಶೈಲಿಯ ಪರಿಕಲ್ಪನೆಯ ಈ ಬೆದ್ರ ಕೆಫೆ ಉದ್ಘಾಟನಾ ಸಮಾರಂಭದಲ್ಲಿ ಡಾ.ಎಂ.ಮೋಹನ ಆಳ್ವ,ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ, ಮಿಥುನ್ ರೈ, ಪುರಸಭಾಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭಾ ಸದಸ್ಯರಾದ ಶಕುಂತಲಾ ಹರೀಶ್ ಹಾಗೂ ರಾಜೇಶ್ ನಾಯ್ಕ್, ಪುರಸಭಾ ಮುಖ್ಯಾಧಿಕಾರಿ […]

    Continue Reading