
ಮೂಡುಬಿದಿರೆ: ಕಲ್ಲಮುಂಡ್ಕೂರಿನ ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಳಸಬೈಲು ಇದರ ೧೫ ನೇ ವರ್ಷದ ಭಜನಾ ಮಂಗಲೋತ್ಸವವು ಡಿಸೆಂಬರ್ ೨೬ ಹಾಗೂ ೨೭ ರಂದು ಮನೆ ಮನೆ ಭಜನೆ ನಡೆಯಲಿದ್ದು, ಡಿಸೆಂಬರ್ ೨೮ ಶನಿವಾರದಂದು ಭಜನಾ ಮಂಗಲೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಳಸಬೈಲು ಬಾನಂಗಡಿ , ಕಲ್ಲಮುಂಡ್ಕೂರು ಪ್ರಕಟಣೆಯಲ್ಲಿ ತಿಳಿಸಿದೆ.
ಮೂಡುಬಿದಿರೆ : ಪುರಾಣ ಪ್ರಸಿದ್ಧ ಹದಿನೆಂಟು ಮಾಗಣೆಗಳ ಒಡೆಯ, ಚೌಟರ ಸೀಮೆಯ ಪುತ್ತಿಗೆ ಶ್ರೀ ಸೋಮನಾಥ ದೇವಾಲಯದ ನೂತನ ಜೀರ್ಣೋದ್ಧಾರ ಕಾಮಗಾರಿಯ ವೀಕ್ಷಣೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರುಆಗಮಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಡಾ.ಡಿ. ಹೆಗ್ಗಡೆಯವರನ್ನು ದೇವಾಲಯದ ಅನುವಂಶಿಕ ಆಡಳಿತ ಮೊಕೇಸರರಾಗಿರುವ ಚೌಟರ ಅರಮನೆಯ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ದೇವಾಲಯದ ಅರ್ಚಕ ಅನಂತ ಕೃಷ್ಣ ಭಟ್ ಹಾಗೂ ಮತ್ತಿತರ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ ಕಂಡು ಪೂಜ್ಯರು ಸಂತಸ ವ್ಯಕ್ತಪಡಿಸಿದರು.