ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮೀ ಸೇವಾ ಸಂಘ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಮರುಆಯ್ಕೆ

ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮೂಡುಬಿದಿರೆ ಇದರ ಅಧ್ಯಕ್ಷರಾದ ಸುರೇಶ್ ಕೆ. ಪೂಜಾರಿ ಪುನರಾಯ್ಕೆಗೊಂಡಿದ್ದಾರೆ. ಅವರು ಮೂಡುಬಿದಿರೆಯಲ್ಲಿ ನೋಟರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ಕುಮಾರ್ ಹಂಡೇಲು, ಕೋಶಾಧಿಕಾರಿಯಾಗಿ ಜಗದೀಶ್ ಪೂಜಾರಿ ಮಿಜಾರು ಮರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರವೀಂದ್ರ ಕರ್ಕೇರ, ಸುಶಾಂತ್ ಕರ್ಕೇರ, ಜೊತೆ ಕಾರ್ಯದರ್ಶಿಗಳಾಗಿ ಶಿವಾನಂದ ಹೆಚ್. ಅಂಚನ್, ವಸಂತ ಸುವರ್ಣ, ಲೆಕ್ಕಪರಿಶೋಧಕರಾಗಿ ಸದಾನಂದ ಬಿ. ಪೂಜಾರಿ ಆಯ್ಕೆಯಾಗಿದ್ದಾರೆ.
ಮೇ 26ರಂದು ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ADVRTISEMENT

Leave a Reply

Your email address will not be published. Required fields are marked *