ಹದಿನೆಂಟು ಮಾಗಣೆಗಳ ಒಡೆಯ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇಗುಲಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ

ಮೂಡುಬಿದಿರೆ : ಪುರಾಣ ಪ್ರಸಿದ್ಧ ಹದಿನೆಂಟು ಮಾಗಣೆಗಳ ಒಡೆಯ, ಚೌಟರ ಸೀಮೆಯ ಪುತ್ತಿಗೆ ಶ್ರೀ ಸೋಮನಾಥ ದೇವಾಲಯದ ನೂತನ ಜೀರ್ಣೋದ್ಧಾರ ಕಾಮಗಾರಿಯ ವೀಕ್ಷಣೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರುಆಗಮಿಸಿ ಸೂಕ್ತ ಮಾರ್ಗದರ್ಶನ ನೀಡಿದರು.

ಡಾ.ಡಿ. ಹೆಗ್ಗಡೆಯವರನ್ನು ದೇವಾಲಯದ ಅನುವಂಶಿಕ ಆಡಳಿತ ಮೊಕೇಸರರಾಗಿರುವ ಚೌಟರ ಅರಮನೆಯ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್‌, ದೇವಾಲಯದ ಅರ್ಚಕ ಅನಂತ ಕೃಷ್ಣ ಭಟ್ ಹಾಗೂ ಮತ್ತಿತರ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ ಕಂಡು ಪೂಜ್ಯರು ಸಂತಸ ವ್ಯಕ್ತಪಡಿಸಿದರು.

ADVRTISEMENT

Leave a Reply

Your email address will not be published. Required fields are marked *