Subscriber Content
Add content here that will only be visible to your subscribers.

Add content here that will only be visible to your subscribers.


ಮೂಡುಬಿದಿರೆ: ತಾಲೂಕಿನ ಪಡುಮಾರ್ನಾಡು ಗ್ರಾಮದ ತಂಡ್ರಕೆರೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಜನವರಿ 18 ರಂದು ಗ್ರಾಮೀಣ ಸೌಲಭ್ಯಗಳ ವಿಶೇಷ ಮಾಹಿತಿಯನ್ನು ನೀಡಲಾಯಿತು. ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಭಾಗವಹಿಸಿ ಮಾತನಾಡಿ
ಸರ್ಕಾರದಿಂದ ದೊರಕುವ ಹಲವಾರು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಹಾಗೂ ಮನೆಯವರ ಅಭಿವೃದ್ಧಿ ಮಾಡಿಕೊಳ್ಳಲು ವಿನಂತಿಸಿದರು. ಪರಿಸರವನ್ನು ಶುದ್ಧವಾಗಿ, ಸ್ವಚ್ಛವಾಗಿ ಇಡುವುದರಿಂದ ಆಗುವ ಹಲವಾರು ಆರೋಗ್ಯ ಕರ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು. ಮುಖ್ಯ ಶಿಕ್ಷಕಿ ಅರುಣ ಸ್ವಾಗತಿಸಿ ವಂದಿಸಿದರು.
ADVRTISEMENT



Leave a Reply