ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲ್ ಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

ಮೂಡುಬಿದಿರೆ: ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ , ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು
ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

ADVRTISEMENT