ಸಮೃದ್ಧ ಭಾರತದ ಕನಸು ನನಸಾಗಲಿ….ಜೈನ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಜೈನ ಪದವಿಪೂರ್ವ ಕಾಲೇಜಿನಲ್ಲಿ 78ನೆಯ ಸ್ವಾತಂತ್ರ್ಯೋತ್ಸವವನ್ನು ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಇವರು ಧ್ವಜಾರೋಹಣ ಮಾಡುವುದರೊಂದಿಗೆ ಪ್ರಾರಂಭಿಸಲಾಯಿತು.
ಸಮೃದ್ಧ ಭಾರತದ ಕನಸು ನನಸಾಗಲಿ
ಆ ಮೂಲಕ ತ್ಯಾಗ ಬಲಿದಾನಗಳ ಹಿಂದಿನ ನಿರೀಕ್ಷೆಗಳು ಫಲ ನೀಡಲಿ ಎಂಬುದಾಗಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಶ್ರೀಮತಿ ಚೇತನ ರಾಜೇಂದ್ರ ಹೆಗಡೆಯವರು ಸ್ವಾತಂತ್ರ್ಯ ಪಡೆದು 77 ವರ್ಷಗಳು ಕಳೆದ ಈ ಸಂದರ್ಭದಲ್ಲಿ ನೈತಿಕ ಮೌಲ್ಯಗಳ ಅಧಪತನದತ್ತ ವಿದ್ಯಾರ್ಥಿಗಳ ಗಮನ ಸೆಳೆದರು ..ಭವ್ಯ ಭಾರತದ ಮುಂದಿನ ಪ್ರಜೆಗಳಾಗಿರುವ ವಿದ್ಯಾರ್ಥಿಗಳು ತಮ್ಮ ಅಂತ ಸತ್ವವನ್ನು ವೃದ್ಧಿಸಿಕೊಂಡು ಒಬ್ಬ ಉತ್ತಮ ಪ್ರಜೆಯಾಗುವುದು ..ಗುರು ಹಿರಿಯರಿಗೆ ಗೌರವವನ್ನು ನೀಡುವುದರ ಮೂಲಕವಾಗಿಯೇ ಸಾಧನೆಗೆ ಅಡಿಗಲ್ಲು ಹಾಕಬೇಕೆಂದು ಕರೆ ನೀಡಿದರು .
ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆ ವಹಿಸಿದ್ದರು

.ಭಾಷಣ ಚಿತ್ರಕಲೆ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು

ADVRTISEMENT

Leave a Reply

Your email address will not be published. Required fields are marked *