
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯ 169 ರಲ್ಲಿ ಹಾದು ಹೋಗುವ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜ್ ಪಕ್ಕದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯ ಪರಿಣಾಮವಾಗಿ ಬೈಕ್ ಸವಾರನೊಬ್ಬ ನಿನ್ನೆ ರಾತ್ರಿ ಬಲಿಯಾದ ಘಟನೆ ನಡೆದಿದೆ.ಗಂಜಿಮಠದ ನಿವಾಸಿ ಅಬ್ದುಲ್ ಖಾದರ್ (69) ಮೃತಪಟ್ಟ ವ್ಯಕ್ತಿ.ಮಿಜಾರಿನಲ್ಲಿ ರಾ. ಹೆ. ಕಾಮಗಾರಿಯು ಅಪೂಣ೯ ಸ್ಥಿತಿಯಲ್ಲಿದ್ದು ಅಲ್ಲಿ ಮೋರಿಯ ದೊಡ್ಡ ಚರಂಡಿಗೆ ಅಡ್ಡವಾಗಿ ಹೊಂಡ ತೋಡಿ ಅದಕ್ಕೆ ಕಾಂಕ್ರೀಟ್ ಬೆಡ್ಡಿಂಗ್ ಹಾಕಲಾಗಿದ್ದು ಅಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸಲಿಲ್ಲ. ಅಲ್ಲಿ ಹೊಂಡ ಇರುವುದು ರಾತ್ರಿ ಯಾರ […]
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ವ್ಯಾಪ್ತಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಉಪ ವಲಯ ಅರಣ್ಯಾಧಿಕಾರಿ ಬಸಪ್ಪ ಹಲಗೇರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಹೆರಾಲ್ಡ್ ಡಿಸಿಲ್ವ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿನ್ ಡಿಸೋಜಾ, ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ತದನಂತರ ಶಾಲೆಯಿಂದ ಶಿರ್ತಾಡಿ ಪಟ್ಟಣದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳಿಂದ ನಡೆದ ಅಣಕು ಆಡುಗಬ್ಬ […]
ಮೂಡುಬಿದಿರೆ:ತಾಲೂಕಿನ ನ್ಯಾಯಾಲಯ ಆವರಣದಲ್ಲಿ ಮೂಡುಬಿದಿರೆ ಅರಣ್ಯ ಇಲಾಖೆ ಹಾಗು ಮೂಡುಬಿದಿರೆ ವಕೀಲರ ಸಂಘ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ & ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಮಧುಕರ್ ಭಾಗವತ್,ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಧೀಶರು, ಕಾವೇರಮ್ಮ ನ್ಯಾಯಾಧೀಶರು, ಸಸಿಗಳನ್ನು ನೆಟ್ಟರು.ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು ಹರೀಶ್ ಪಿ, ಹಿರಿಯ ವಕೀಲರಾದ ಕೆ. ಆರ್ ಪಂಡಿತ್, ದಿವಿಜೇಂದ್ರ ಕುಮಾರ್, ಪ್ರವೀಣ್ ಲೋಬೊ, ಜಯಪ್ರಕಾಶ್, ಪದ್ಮಪ್ರಸಾದ್ ಜೈನ್, ಮರ್ವಿನ್ ಲೋಬೊ, ಆನಂದ್, ಶ್ವೇತಾ, ಸಂದೇಶ್, ಜಗನ್ನಾತ್, ವಕೀಲರು ಹಾಗು ಅರಣ್ಯ […]
ಮೂಡುಬಿದಿರೆ: ತಾಲೂಕಿನಾದ್ಯಾಂತ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಬಡಜನರಿಗೆ ಇನ್ಮುಂದೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟವುಳ್ಳ ಊಟ, ತಿಂಡಿ ದೊರೆಯಲಿದೆ. ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ದಿನಂಪ್ರತಿ ವಿವಿಧ ಬಗೆಯ ತಿಂಡಿಗಳಿಗೆ ಕೇವಲ ೫ ರೂ ಮೊತ್ತದಲ್ಲಿ ಹಾಗೂ ಊಟವೂ ೧೦ ರೂ ದರದಲ್ಲಿ ಸಿಗಲಿದೆ. ಯಾವ್ಯಾವ ದಿನ ಯಾವೆಲ್ಲಾ ಬಗೆಯ ಊಟ ತಿಂಡಿಗಳು ಸಿಗುತ್ತದೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಮೂಡುಬಿದಿರೆ: ಅಸಂಘಟಿತ ಕಾರ್ಮಿಕರು, ಬಡವರು ಹಸಿವಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನನ್ನು ಆರಂಭಿಸಿದ್ದಾರೆ. ಇದು ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಇಲ್ಲಿನ ಆಡಳಿತ ಸೌಧದ ಎದುರು ಅವರು ಬುಧವಾರ ಇಂದಿರಾ ಕ್ಯಾಂಟೀನನ್ನು ಉದ್ಘಾಟಿಸಿ ಮಾತನಾಡಿದರು. ಅಗ್ಗದ ದರದಲ್ಲಿ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟ ಸಿಗುತ್ತದೆ. ಬಡವರ ಹಸಿವು ನೀಗಿಸುವ ಇಂತಹ ಉತ್ತಮ ಸೌಲಭ್ಯ ದೇಶದ ಬೇರೆ ಯಾವ ರಾಜ್ಯಗಳಲ್ಲು ಇಲ್ಲ. […]
ಮೂಡುಬಿದಿರೆ: ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ. 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ವಿದ್ಯುತ್ ಶಾರ್ಟ್ ಸರ್ಕೂಟ್ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.
ಮೂಡುಬಿದಿರೆ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೊಹಮ್ಮದ್ ವಸೀರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತೇನೆಂದು ಘೋಷಿಸಿದ್ದಾರೆ.
ಮೂಡುಬಿದಿರೆ:ಮಾಂಟ್ರಾಡಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಎಕ್ರೆಗಟ್ಟಲೆ ಸರಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದು ಈ ಬಗ್ಗೆ ದೂರು ಕೊಟ್ಟರೂ ಕಂದಾಯ ಇಲಾಖೆ ಕ್ರಮ ವಹಿಸಿಲ್ಲ ಎನ್ನಲಾಗಿದೆ.ಮಾಂಟ್ರಾಡಿ ಗ್ರಾಮದ ಸ.ನಂ 88-1ರಲ್ಲಿ ಎಲಿಯಾಸ್ ಸಲ್ದಾನ ಎಂಬವರು ತನ್ನ ಸ್ವಾಧೀನದಲ್ಲಿದ್ದ ಸರಕಾರಿ ಜಾಗವನ್ನು ಸಕ್ರಮಗೊಳಿಸುವಂತೆ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದು ಅವರ ಅರ್ಜಿ ವಿಚಾರಣೆ ಹಂತದಲ್ಲಿದೆ ಎನ್ನಲಾಗಿದೆ. ಈ ಮಧ್ಯೆ ಆಂತೋನಿ ಡಿಸೋಜಾ ಎಂಬವರು ನನ್ನ ಸ್ವಾಧೀನದಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮವಾಗಿ ೧೫ ಕ್ಕೂ ಹೆಚ್ಚು ಪಿಲ್ಲರ್ಗಳನ್ನು ಹಾಕಿ ಜಾಗವನ್ನು ತನ್ನ ವಶಕ್ಕೆ […]
ಮೂಡುಬಿದಿರೆ: ಇಲ್ಲಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಕೇಂದ್ರದಲ್ಲಿ ‘ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರ’ವು ಎಪ್ರಿಲ್ 19, ಶನಿವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.18 ವರ್ಷ ಪ್ರಾಯದಿಂದ ಸುಮಾರು 40 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್ ಲೆನ್ಸ್ನಿಂದ ಮುಕ್ತಿ ಹೊಂದಬಹುದಲ್ಲದೇ ಈ ಚಿಕಿತ್ಸೆಯಿಂದ 5 ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆಯ ನಂತರ ಕೂಡಲೇ ರೋಗಿಯು ತನ್ನೆಲ್ಲಾ ದೈನಂದಿನ ಚಟುವಟಿಕೆಗಳನ್ನು […]
ಮೂಡುಬಿದಿರೆ: ವಿಶ್ವಪ್ರವಾದಿ ಮುಹಮ್ಮದ್ ಮುಸ್ತಫಾ ( ಸ.ಅ.) ಅವರ ಸಂದೇಶಗಳನ್ನು , ಹಿರಿಯರು ,ಉಲೆಮಾ -ಉಮರಾಗಳ ಮಾತುಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಹೋದಲ್ಲಿ ಸರ್ವಜನರ ಪ್ರೀತಿಗೆ ಪಾತ್ರರಾಗಲು ಮತ್ತು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ’ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಹೇಳಿದರು.ಮೂಡುಬಿದಿರೆ ಸಮೀಪದ ಪುಚ್ಚಮೊಗರು ಎಲಿಯಾ ದರ್ಗಾದ ಉರೂಸ್ ಸಮಾರಂಭ ಪ್ರಯುಕ್ತ ಹಮ್ಮಿಕೊಂಡಿದ್ದ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಯುವಜನತೆ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು, ಹಿಂದೆಲ್ಲಾ ಯಾವುದೇ […]